ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಕ್ಕೆ ಸುಬ್ರಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

|
Google Oneindia Kannada News

Recommended Video

Mangaluru: K.L Rahul Visits Kukke Subramanya Temple | Oneindia Kannada

ಮಂಗಳೂರು, ಅಕ್ಟೋಬರ್ 03 : ಭಾರತೀಯ ಕ್ರಿಕೆಟ್ ತಂಡದ ಉದಯೋನ್ಮುಖ ತಾರೆ ಕೆ.ಎಲ್.ರಾಹುಲ್ ಇಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದರು. ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರಕ್ಕೆ ಬೆಳಗ್ಗೆ ಭೇಟಿ ನೀಡಿದ್ದ ಅವರು ವಿಶೇಷ ಪೂಜೆಯನ್ನು ಸಲ್ಲಿಸಿದರು.

ಕೆ.ಎಲ್.ರಾಹುಲ್ ಪ್ರತಿವರ್ಷವೂ ಕುಕ್ಕೆ ಸುಬ್ರಮಣ್ಯಕ್ಕೆ ಆಗಮಿಸಿ, ಪೂಜೆ ಸಲ್ಲಿಸುತ್ತಾರೆ. ಈ ಬಾರಿಯೂ ಆಗಮಿಸಿ ದೇವರಿಗೆ ಮಹಾಪೂಜೆ ನೆರವೇರಿಸುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. ಕೆಲವು ವರ್ಷಗಳಿಂದ ಕೆ.ಎಲ್.ರಾಹುಲ್ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ನಲ್ಲಿ ಮಿಂಚುತ್ತಿರುವುದಕ್ಕೂ ಸುಬ್ರಮಣ್ಯ ದೇವರ ಸೇವೆಯೇ ಕಾರಣ ಎನ್ನುವುದು ಅವರ ಸ್ನೇಹಿತ ವರ್ಗದ ಅಭಿಪ್ರಾಯ.

KL Rahul visits Kukke Subramanya temple

ಬೆಳಗ್ಗೆ ದೇವಾಲಯಕ್ಕೆ ಆಗಮಿಸಿದ ಕೆ.ಎಲ್.ರಾಹುಲ್ ಕ್ಷೇತ್ರದಲ್ಲಿ ಪೂಜೆ ನೆರವೇರಿಸಿ, ಅನ್ನದಾನ ಪೂರೈಸಿದರು. ಕ್ಷೇತ್ರದ ಆನೆ ಯಶಸ್ವಿನಿಯ ಆಶೀರ್ವಾದವನ್ನೂ ಪಡೆದರು. ದೇವಾಲಯದಲ್ಲಿ ಸಾಮಾನ್ಯರಂತೆ ಜನರ ನಡುವೆ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

KL Rahul visits Kukke Subramanya temple

ಪ್ರವಾಸಿ ಆಸ್ಟ್ರೇಲಿಯಾ ತಂಡದ ವಿರುದ್ಧ ಮುಂದಿನ ಶನಿವಾರದಿಂದ 3 ಪಂದ್ಯಗಳ ಟಿ 20 ಸರಣಿ ಆರಂಭಗೊಳ್ಳಲಿದೆ. ಈ ಟಿ20 ತಂಡದಲ್ಲಿ ಕೆ.ಎಲ್.ರಾಹುಲ್ ಸ್ಥಾನ ಪಡೆದಿದ್ದಾರೆ. ಈಗಾಗಲೇ ಟೆಸ್ಟ್ ಹಾಗೂ ಏಕದಿನ ಪಂದ್ಯಗಳಲ್ಲಿ ತಮ್ಮ ಸಾಮರ್ಥ್ಯ ತೋರಿರುವ ಕೆ.ಎಲ್.ರಾಹುಲ್ ಟಿ 20 ಸರಣಿಯಲ್ಲಿಯೂ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಲ್ಲಿದ್ದಾರೆ.

KL Rahul visits Kukke Subramanya temple

ಈ ಸಂದರ್ಭದಲ್ಲಿ ದೇವಾಲಯಕ್ಕೆ ಬಂದಿದ್ದ ಭಕ್ತರು ಕೆ.ಎಲ್.ರಾಹುಲ್ ಅವರಿಗೆ ಮುಂದಿನ ಟಿ 20 ಪಂದ್ಯಗಳಿಗಾಗಿ ಶುಭ ಹಾರೈಸಿದರು.

English summary
Indian cricketer K.L.Rahul on October 3, 2017 visited Kukke Subramanya temple, Dakshina Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X