ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೈಕುಂಠ ಏಕಾದಶಿ : ಸ್ವರ್ಗದ ಬಾಗಿಲು ತೆರೆದಿದೆ, ಬಾ ಭಕ್ತನೆ!

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜನವರಿ. 08 : ಕರಾವಳಿಯಲ್ಲಿ ವೈಕುಂಠ ಏಕಾದಶಿ ಸಂಭ್ರಮ. ಮುಂಜಾನೆಯಿಂದಲೇ ದೇವಾಲಯಗಳಲ್ಲಿ ಸರತಿ ಸಾಲು. ವೆಂಕಟೇಶ್ವರನ ದರ್ಶನ ಪಡೆದ ಭಕ್ತರು ಪುನೀತರಾಗಿ ಹೊರಕ್ಕೆ ಬರುತ್ತಿದ್ದಾರೆ.

ಏಕಾದಶಿಯಂದು ಶ್ರೀ ವಿಷ್ಣುವಿನ ವಾಸಸ್ಥಾನ ವೈಕುಂಠ ದ್ವಾರ ತೆರೆಯುವ ದಿನ ಎಂಬ ನಂಬಿಕೆ. ಹಾಗೂ ವೈಕುಂಠ ಏಕಾದಶಿ ದಿನ ಉಪವಾಸವಿದ್ದು ದೇವಾಲಯಗಳ ದರ್ಶನ ಪಡೆದರೆ ಪುಣ್ಯ ಪ್ರಾಪ್ತಿಯಾಗುತ್ತದೆ.

ಹಾಗೂ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಇದರಿಂದ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನ, ಕಾರ್ ಸ್ಟ್ರೀಟ್ ಬಳಿ ಇರುವ ವೆಂಕಟರಮಣ ದೇವಸ್ಥಾನ ಹಾಗೂ ಮಂಗಳಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಕೈಗೊಳ್ಳಲಾಗಿತ್ತು.

Large number of devotees take part in Vaikunta Ekadasi celebrations in Mangaluru

ನಗರದ ಎಲ್ಲಾ ವೆಂಕಟೇಶ್ವರ ದೇಗುಲ ಗಳಲ್ಲಿ "ವೈಕುಂಠ ದ್ವಾರ' ವಿಶೇಷ ಆಕರ್ಷಣೆಯಾಗಿತ್ತು. ಈ ಅಪೂರ್ವ ಕ್ಷಣಗಳಿಗಾಗಿ ನಸುಕಿನಿಂದಲೇ ದೇವಸ್ಥಾನಗಳಿಗೆ ಭಕ್ತಸಾಗರ ಹರಿದುಬಂದಿತು.

ವೈಕುಂಠ ಏಕಾದಶಿಯ ನಿಮಿತ್ತ ಭಕ್ತರ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಇನ್ನು ಉಡುಪಿಯ ಕೃಷ್ಣ ಮಠದಲ್ಲೂ ಕೂಡ ಜನರು ಉಪವಾಸದಿಂದ ಬಂದು ಪೂಜೆ ಸಲ್ಲಿಸಿದ್ದಾರೆ, ಭಕ್ತಾದಿಗಳು ಮುಂಜಾನೆ ತಮ್ಮ ಮನೆ- ಮನೆಗಳಲ್ಲಿ ಹಾಗೂ ದೇಗುಲಗಳಲ್ಲಿ ಪೂಜೆ ಪುನಸ್ಕಾರ ಮಾಡಿದರು.

English summary
Thousands of devotees lined up before Vishnu temples where Vaikunta Ekadasi was being celebrated on Sunday at Mangaluru. Devotees started queuing up from the early hours of Sunday even before the temple gates were opened.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X