ಪ್ರತಿಷ್ಠಿತ ಒಲಿಂಪಿಯಾಡ್ ಗೆ ಮಂಗ್ಳೂರು ಹುಡುಗ ಆದಿತ್ಯ ಪ್ರಕಾಶ್
ಮಂಗಳೂರು, ಮೇ 23 : ಮಂಗಳೂರಿನ ಸೆಂಟರ್ ಫಾರ್ ಅಡ್ವಾನ್ಸ್ ಡ್ ಲರ್ನಿಂಗ್ (ಸಿಎಫ್ ಎಎಲ್) ನಲ್ಲಿ ತರಬೇತಿ ಪಡೆದ ಆದಿತ್ಯ ಪ್ರಕಾಶ್ ಈಗ ಅಂತಾರಾಷ್ಟ್ರೀಯ ಮ್ಯಾತಮೆಟಿಕ್ಸ್ ಒಲಿಂಪಿಯಾಡ್ (ಐಎಂಒ)-2017ಗೆ ರಾಜ್ಯದಿಂದ ಆಯ್ಕೆಯಾಗಿದ್ದಾರೆ.
ಜುಲೈ 17ರಿಂದ 23ರ ವರೆಗೆ ಬ್ರೆಜಿಲ್ ನ ರಿಯೊ ಡಿ ಜನೈರೋದಲ್ಲಿ ಈ ಸ್ಪರ್ಧೆ ನಡೆಯಲಿದ್ದು ಗಣಿತಕ್ಕೆ ಸಂಬಂಧಪಟ್ಟಂತೆ ಜಾಗತಿಕವಾಗಿ ನಡೆಯುವ ಈ ಸ್ಪರ್ಧೆಯಲ್ಲಿ ಸುಮಾರು 100 ದೇಶಗಳಿಂದ 400 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಸ್ಪರ್ಧೆಯ ಆಯ್ಕೆಯ ಕುರಿತಂತೆ ಪ್ರಥಮ ಹಂತವಾಗಿ ಸುಮಾರು 50,000 ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಆಯ್ಕೆಯಾದ ಸುಮಾರು 900 ವಿದ್ಯಾರ್ಥಿಗಳನ್ನು 2ನೇ ಹಂತಕ್ಕೆ ಆಯ್ಕೆ ಮಾಡಲಾಗಿತ್ತು.
3ನೇ ಹಂತದಲ್ಲಿ 35ರಿಂದ 50 ವಿದ್ಯಾರ್ಥಿಗಳನ್ನು ಹೋಮಿ ಭಾಭಾ ಸೆಂಟರ್ ಫಾರ್ ಸೈನ್ಸ್ ಎಜುಕೇಶನ್ ಆಯ್ಕೆ ಮಾಡಿದ್ದು, ಅದರಲ್ಲಿ 6 ಮಂದಿಯನ್ನು ಐಎಂಒಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಪ್ರೋಗ್ರಾಮ್ ಕೊ-ಆರ್ಡಿನೇಟರ್ ಸೆವ್ರಿನ್ ರೊಸಾರಿಯೊ ತಿಳಿಸಿದ್ದಾರೆ.

ಆದಿತ್ಯ ಪ್ರಕಾಶ್ ತನ್ನದೇ ಆಸಕ್ತಿಯಿಂದ ಸಿಎಫ್ ಎಎಲ್ ಕೋಚಿಂಗ್ ಸೆಂಟರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಪ್ರಸ್ತುತ ಜಪಾನ್ನಲ್ಲಿ ನಡೆಯುತ್ತಿರುವ ಫಕುರಾ ತರಬೇತಿಯಲ್ಲಿ ಭಾಗವಹಿಸಿದ್ದು, ಐಎಂಒಗೆ ಆಯ್ಕೆಯಾಗಿರುವ ಕ್ರೆಡಿಟ್ ಸಿಎಫ್ ಎಎಲ್ ಸಲ್ಲಬೇಕು ಎಂದು ಆದಿತ್ಯ ಪ್ರಕಾಶ್ ತಂದೆ, ಕಾರ್ಪೊರೇಶನ್ ಬ್ಯಾಂಕಿನ ಅಧಿಕಾರಿ ಓಂಪ್ರಕಾಶ್ ಬನ್ವಾಲ್ ಸಂತಸ ವ್ಯಕ್ತಪಡಿಸಿದರು.
ಸಿಎಫ್ ಎಎಲ್ ನ ಗಣಿತ ಪ್ರಾಧ್ಯಾಪಕ ಡಾ. ಶ್ರೀಕಾಂತ್ ಪೈ ಮಾತನಾಡಿ, "ಐಎಂಒಗೆ ಆಯ್ಕೆಯಾಗಿರುವ ಆದಿತ್ಯ ಅವರು ಸದಾ ಭಿನ್ನವಾಗಿ ಯೋಚಿಸುವ ವಿದ್ಯಾರ್ಥಿ. ಅವರು ಗಣಿತದ ಯಾವುದೇ ಸಮಸ್ಯೆಯನ್ನು ತತಕ್ಷಣದಲ್ಲಿ ಪರಿಹರಿಸುತ್ತಾರೆ.
ಈ ಬಾರಿ ಆದಿತ್ಯ ಪ್ರಕಾಶ್ ಚಿನ್ನ ಗೆಲ್ಲುವ ಪೂರ್ಣ ವಿಶ್ವಾಸವಿದೆ. ಜಗತ್ತಿನಲ್ಲಿ ಪ್ರಸ್ತುತ ಇರುವ ಪ್ರತಿಷ್ಠಿತ ಗಣಿತ ತಜ್ಞರೆಲ್ಲರೂ ಕೂಡ ಐಎಂಒಗೆ ಆಯ್ಕೆಯಾದವರು ಎಂಬುದು ವಿಶೇಷವಾಗಿದೆ" ಎಂದರು.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications