ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಲೆಗೆ ಸಂಚು, ಮಂಗಳೂರು ಸಿಸಿಬಿ ಪೊಲೀಸರ ಬಲೆಗೆ ಬಿದ್ದ ಖದೀಮರು

|
Google Oneindia Kannada News

ಮಂಗಳೂರು, ಫೆಬ್ರವರಿ 5: ನಗರದಲ್ಲಿ ದರೋಡೆ ಹಾಗೂ ಕೊಲೆಗೆ ಸಂಚು ರೂಪಿಸುತ್ತಿದ್ದ 4 ಮಂದಿ ದುಷ್ಕರ್ಮಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದ ಫಳ್ನೀರ್ ಎಂಬಲ್ಲಿ ಇವರನ್ನು ಬಂಧಿಸಲಾಗಿದ್ದು ಬಂಧಿತರಿಂದ 3 ಮಾರಕಾಸ್ತ್ರಗಳು, ಗಾಂಜಾ ಪ್ಯಾಕೆಟ್ ಸೇರಿದಂತೆ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ನಗರದ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರ್ ಎಂಬಲ್ಲಿ ಟಾಟಾ ಸುಮೋ ವಾಹನವೊಂದರಲ್ಲಿ ಬಂದ 9-10 ಮಂದಿ ಯುವಕರು ದರೋಡೆ ಹಾಗೂ ಕೊಲೆಗೆ ಸಂಚು ರೂಪಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಸಿಸಿಬಿ ಪೊಲೀಸರಿಗೆ ದೊರೆತಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾರಾಕಾಯುಧಗಳೊಂದಿಗೆ ದರೋಡೆ ಹಾಗೂ ಕೊಲೆಗೆ ಸಂಚು ರೂಪಿಸುತ್ತಿದ್ದ 4 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ತೊಕ್ಕೊಟ್ಟು ನಿವಾಸಿ ಮನೋಜ್ ಕುಮಾರ್ (33) ,ಉಳ್ಳಾಲ ನಿವಾಸಳಾದ ಪ್ರಸಾದ್ ಯಾನೆ ಪಚ್ಚು ( 28), ಶ್ರವಣ್ ( 22), ಹಾಗೂ ತೊಕ್ಕೊಟ್ಟು ಸುಜಿತ್ (27) ಎಂದು ಗುರುತಿಸಲಾಗಿದೆ.

Mangaluru CCB police arrested 4 accused for murder plot

ಬಂಧಿತರಿಂದ 1ತಲವಾರು, 1ಮಚ್ಚು, 1ಚೂರಿ, 40 ಗ್ರಾಂ ಗಾಂಜಾ ಮತ್ತು 3 ಮೊಬೈಲ್ ಫೋನ್ ಗಳು, ಟಾಟಾ ಸುಮೋ ಕಾರು ಸೇರಿದಂತೆ ಒಟ್ಟು ರೂ. 1,19,000 ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಆರೋಪಿಗಳ ಪೈಕಿ ಪ್ರಸಾದ್ ಯಾನೆ ಪಚ್ಚು ಎಂಬಾತನ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣ, 3 ಕೊಲೆ ಯತ್ನ ಪ್ರಕರಣ ಹಾಗೂ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣವೊಂದು ದಾಖಲಾಗಿದೆ.

ಮತ್ತೊಬ್ಬ ಆರೋಪಿ ಶ್ರವಣ್ ಎಂಬಾತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ಹಾಗೂ ಆರೋಪಿ ಮನೋಜ್ ಎಂಬಾತನ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

English summary
Mangaluru CCB police team have arrested 4 person while they planning to murder at Falnir. The arrested have been identified as Manoj, Prasad, Shravan and Sujith.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X