ಮಂಗಳೂರು: ಬ್ಯಾಂಕಿನ 7.5 ಕೋಟಿ ರು ಹಣದೊಂದಿಗೆ ನಾಲ್ವರು ಎಸ್ಕೇಪ್
ಮಂಗಳೂರು, ಮೇ 12: ನಗರದ ಯೆಯ್ಯಾಡಿಯಲ್ಲಿರುವ ಆಕ್ಸಿಸ್ ಬ್ಯಾಂಕ್ನ ಕರೆನ್ಸಿ ಚೆಸ್ಟ್ ನಿಂದ 7.5 ಕೋಟಿ ನಗದು ಹಣವನ್ನು ಬೆಂಗಳೂರಿನ ಕೋರಮಂಗಲದ ಆಕ್ಸಿಸ್ ಬ್ಯಾಂಕ್ ಶಾಖೆಗೆ ಸಾಗಿಸುತ್ತಿದ್ದ ನಾಲ್ವರು ಸಿಬ್ಬಂದಿಗಳು ನಾಪತ್ತೆಯಾದ ಘಟನೆ ಗುರುವಾರ ನಡೆದಿದೆ. ಆದರೆ, ಈ ಪ್ರಕರಣ ಶುಕ್ರವಾರ ಬೆಳಕಿಗೆ ಬಂದಿದೆ.
ಮೇ 11 ರಂದು ಸಿಸ್ ಪ್ರೊಸೆಗೂರ್ ಹೋಲ್ಡಿಂಗ್ಸ್ ಸಂಸ್ಥೆಯ ಕಸ್ಟೋಡಿಯನ್ ಪರಶುರಾಮ, ಚಾಲಕ ಕರಿಬಸವ ಮತ್ತು ಗನ್ ಮ್ಯಾನ್ಗಳಾದ ಬಸಪ್ಪ ಮತ್ತು ಪೂವಣ್ಣ ಅವರು ತೆರಳಿದ್ದರು. ಆದರೆ ಇದುವರೆಗೆ ಬ್ಯಾಂಕ್ಗೆ ತಲುಪದೆ ನಾಪತ್ತೆಯಾಗಿದ್ದಾರೆ.

ಆಕ್ಸಿಸ್ ಬ್ಯಾಂಕ್ನ ಹಣ ಸಾಗಣೆ ಗುತ್ತಿಗೆ ಪಡೆದಿರುವ ಕೊಂಚಾಡಿಯ ಸಿಸ್ ಪ್ರೊಸೆಗೂರ್ ಹೋಲ್ಡಿಂಗ್ಸ್ ಸಂಸ್ಥೆಯ ಕಸ್ಟೋಡಿಯನ್ ಕಂಪೆನಿಯ ನಾಲ್ವರು ನೌಕರರು ಗುರುವಾರ (ಮೇ 11) ಬೆಳಿಗ್ಗೆ ಬೊಲೆರೋ ವಾಹನದಲ್ಲಿ 7.5 ಕೋಟಿ ನಗದನ್ನು ಯೆಯ್ಯಾಡಿ ಕರೆನ್ಸಿ ಚೆಸ್ಟ್ ನಿಂದ ತುಂಬಿಸಿಕೊಂಡು ಬೆಂಗಳೂರಿಗೆ ಹೊರಟಿದ್ದರು.
ಮೇ 12 ಶುಕ್ರವಾರ ಬೆಳಿಗ್ಗೆಯವರೆಗೂ ಅವರು ಕೋರಮಂಗಲ ಶಾಖೆಗೆ ಹಣ ತಲುಪಿಸಿರಲಿಲ್ಲ. ಹಣ ತುಂಬಿಸಿಕೊಂಡು ಹೋಗಿದ್ದ ವಾಹನ ಶುಕ್ರವಾರ ಸಂಜೆ ವೇಳೆಗೆ ಹುಣಸೂರು ತಾಲ್ಲೂಕಿನ ಅರಸು ಕಲ್ಲಹಳ್ಳಿಯಲ್ಲಿ ಪತ್ತೆಯಾಗಿದೆ.

ಹಣ ಸಾಗಿಸುತ್ತಿದ್ದ ನಾಲ್ವರ ಮೊಬೈಲ್ಗಳು ಸ್ವಿಚ್ ಆಫ್ ಆಗಿವೆ. ಅವರನ್ನು ಸಂಪರ್ಕಿಸಲು ನಡೆಸಿದ ಪ್ರಯತ್ನ ಸಫಲವಾಗಿಲ್ಲ. ವಾಹನ ಮತ್ತು ಅದರಲ್ಲಿದ್ದ ನೌಕರರಿಗಾಗಿ ಶೋಧಕಾರ್ಯ ಆರಂಭಿಸಲಾಗಿದೆ.
ವಾಹನವನ್ನು ವಶಕ್ಕೆ ಪಡೆಯಲು ಕಂಕನಾಡಿ ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವಿನಾಯ್ಕ್ ನೇತೃತ್ವದ ತಂಡ ಅರಸು ಕಲ್ಲಹಳ್ಳಿಗೆ ಹೊರಟಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications