ಕದ್ರಿಯಲ್ಲಿ ಮೇ 19 -25 ರವರೆಗೆ ಮಾವು ಮತ್ತು ಹಲಸು ಮೇಳ
ಒಳ್ಳೆಯ ಗುಣಮಟ್ಟದ ಮಾವು ಹಾಗೂ ಹಲಸಿನ ಹಣ್ಣಗಳನ್ನು ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸಲು ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಮೇ 19 ರಿಂದ 25ರ ವರೆಗೆ ಮಾವು ಹಾಗೂ ಹಲಸು ಮೇಳ ಆಯೋಜಿಸಲಾಗಿದೆ.
ಮಂಗಳೂರು, ಮೇ 10: ದಕ್ಷಿಣ ಕನ್ನಡ ಜಿಲ್ಲೆ ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಆಶ್ರಯದಲ್ಲಿ ನಗರದ ಕದ್ರಿ ಉದ್ಯಾನವನದಲ್ಲಿ ಮೇ 19 ರಿಂದ 25ರ ವರೆಗೆ ಮಾವು ಹಾಗೂ ಹಲಸು ಮೇಳ ಆಯೋಜಿಸಲಾಗಿದೆ.
ವಿವಿಧ ತಳಿಗಳ ಮಾವು ಹಾಗೂ ಹಲಸಿನ ಹಣ್ಣುಗಳನ್ನು ಜಿಲ್ಲೆಯ ಜನರಿಗೆ ಹಾಗೂ ರೈತರಿಗೆ ಪರಿಚಯಿಸುವ ನಿಟ್ಟಿನಲ್ಲಿ ಹಾಗೂ ಒಳ್ಳೆಯ ಗುಣಮಟ್ಟದ ಮಾವು ಹಾಗೂ ಹಲಸಿನ ಹಣ್ಣಗಳನ್ನು ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸಲು ಈ ಮೇಳ ಆಯೋಜಿಸಲಾಗಿದೆ.[ಆಹಾ ಎಂಥಾ ಮಾವು, ಹಲಸು...ಬನ್ರೀ ಲಾಲ್ ಬಾಗ್ ಗೆ, ತಿನ್ರೀ ಮನಸಾರೆ]
ಈ ಮೇಳದಲ್ಲಿ ವಿವಿಧ ತಳಿಗಳ ಮಾವು ಹಾಗೂ ಹಲಸು ಹಣ್ಣುಗಳನ್ನು ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾವು ಹಾಗೂ ಹಲಸಿನ ಬೆಳೆಗಾರರು ಕಾರ್ಬೈಡ್ ಮುಕ್ತ, ನೈಸರ್ಗಿಕವಾಗಿ ಮಾಗಿಸಿದ ಮಾವಿನ ಹಣ್ಣು, ಹಲಸಿನ ಹಣ್ಣುಗಳನ್ನು ನೇರವಾಗಿ ಗ್ರಾಹಕರಿಗೆ ಮಾರಬಹುದು.

ಸ್ಥಳೀಯ ರೈತರಿಗೆ ಮೊದಲ ಆದ್ಯತೆ
ಸ್ಥಳೀಯ ರೈತರು ತಾವು ಬೆಳೆದಿರುವ ಸ್ಥಳೀಯ ಹಾಗೂ ಸುಧಾರಿತ ಮಾವು ಹಾಗೂ ಹಲಸು ತಳಿಗಳ ಹಣ್ಣುಗಳನ್ನು ಪ್ರದರ್ಶನ ಮಾಡಲು ಹಾಗೂ ಮಾರಾಟ ಮಾಡಲು ಮೇಳದಲ್ಲಿ ಪ್ರಥಮ ಆದ್ಯತೆ ನೀಡಲಾಗಿದೆ. ಆಸಕ್ತ ರೈತರು ಇಲಾಖೆಯನ್ನು ಸಂಪರ್ಕಿಸಿ ನೋಂದಾಯಿಸಿಕೊಳ್ಳಬಹುದು.

ಸಂಸ್ಕರಣ ಉತ್ಪನ್ನಗಳಿಗೂ ಅವಕಾಶ
ಮಾವು ಮತ್ತು ಹಲಸು ಸಂಸ್ಕರಣಾ ಉತ್ಪನ್ನಗಳನ್ನು ರೈತರು ಹಾಗೂ ಉತ್ಪಾದಕರು ಪ್ರದರ್ಶನ ಮಾಡಲು ಹಾಗೂ ನೇರವಾಗಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗುವುದು.[ಮಾವು ಬೆಳೆಗಾರರ ಪಾಲಿಗೆ ಕಹಿಯಾದ ಹಣ್ಣಿನ ರಾಜ!]

ಗಿಡಗಳ ಮಾರಾಟಕ್ಕೂ ಅವಕಾಶ
ಇನ್ನು ನಾನಾ ತಳಿಯ ಮಾವು, ಹಲಸು ಹಾಗೂ ಹಣ್ಣಿನ ಬೆಳೆಗಳ ಗಿಡಗಳನ್ನು ಮಾರಾಟ ಮಾಡಲು ನರ್ಸರಿದಾರರಿಗೆ ಅವಕಾಶ ಕಲ್ಪಿಸಲಾಗಿದೆ. ಇದಲ್ಲದೆ ಇತರೇ ತೋಟಗಾರಿಕೆ ಬೆಳೆಗಳ ಸಂಸ್ಕರಣಾ ಉತ್ಪನ್ನಗಳನ್ನು ಮಾರಾಟ ಮಾಡಲೂ ಅವಕಾಶ ಕಲ್ಪಿಸಲಾಗುವುದು.[ಕೊಪ್ಪಳದಲ್ಲಿ ಮೇ 9ರಿಂದ ಲಗ್ಗೆಯಿಡಲಿದ್ದಾನೆ ಹಣ್ಣುಗಳ ರಾಜ!]
ರೈತರು, ಮಾರಾಟಗಾರರು, ಸಂಸ್ಕರಣಾಗಾರರು, ನರ್ಸರಿದಾರರಿಗೆ

ಮುಕ್ತ ಅವಕಾಶ
ಈ ರೀತಿಯಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಆಸಕ್ತ ರೈತರು, ಮಾರಾಟಗಾರರು, ಸಂಸ್ಕರಣಾಗಾರರು, ನರ್ಸರಿದಾರರು ಇದರ ಸದುಪಯೋಗ ಪಡೆದುಕೊಳ್ಳಲು ತೋಟಗಾರಿಕೆ ಇಲಾಖೆ ಮತ್ತು ಮತ್ತು ಮಾವು ಅಭಿವೃದ್ಧಿ ನಿಗಮ ಕೋರಿಕೊಂಡಿದೆ.[ಮುಂಗಾರು ಸಮಯದಲ್ಲಿ ತೋಟಗಾರಿಕೆ ಬೆಳೆಗಾರರೇ ಹೀಗೆ ಮಾಡಿ]

ಕರೆ ಮಾಡಿ-ನೊಂದಾಯಿಸಿ
ಕಾರ್ಯಕ್ರಮದಲ್ಲಿ ನೋಂದಾಯಿಸಿಕೊಳ್ಳಲು ದೂರವಾಣಿ ಸಂಖ್ಯೆ- 0824-2412628, 0824-2423615, 9480354968 ಸಂಪರ್ಕಿಸಲು ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ, ಮಂಗಳೂರು ಇವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications