ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೋಡುಪಾಲ ದುರಂತದಲ್ಲಿ ಮಗಳು ನಾಪತ್ತೆ: ಪ್ರತಿರೂಪಕ್ಕೆ ಅಂತ್ಯಸಂಸ್ಕಾರ ಮಾಡಿದ ಪೋಷಕರು

|
Google Oneindia Kannada News

ಮಂಗಳೂರು, ಅಕ್ಟೋಬರ್ 12: ಕಳೆದ ಆಗಸ್ಟ್ 16 ರಂದು ಸಂಭವಿಸಿದ್ದ ದುರಂತದಿಂದ ಛಿದ್ರಗೊಂಡಿದ್ದ ಕೊಡಗು ಜಿಲ್ಲೆಯ ಗಡಿ ಪ್ರದೇಶ ಜೋಡುಪಾಲದಲ್ಲಿ ಈಗ ಜನಸಂಚಾರ ಆರಂಭವಾಗಿದೆ. ಜನರು ತಮ್ಮ ವಾಸ ಸ್ಥಾನಗಳಿಗೆ ಮರಳುತ್ತಿದ್ದಾರೆ.

ಜೋಡುಪಾಲದಲ್ಲಿ ಭಾರೀ ಭೂ ಕುಸಿತ, ಜಲಸ್ಪೋಟ ಸಂಭವಿಸಿ 57 ದಿನಗಳು ಕಳೆದಿವೆ. ಆದರೆ ದುರಂತದಲ್ಲಿ ಕಣ್ಮರೆಯಾದ ಮಂಜುಳಾ (15) ಮೃತ ದೇಹ ಇನ್ನೂ ಪತ್ತೆಯಾಗಿಲ್ಲ. ಇದರಿಂದ ಮನ ನೊಂದಿರುವ ಆಕೆಯ ಪೋಷಕರು ಮಂಜುಳಾ ಪ್ರತಿರೂಪ ತಯಾರಿಸಿ ಅದಕ್ಕೆ ಅಂತ್ಯಕ್ರಿಯೆ ನೆರವೇರಿಸುವ ಮೂಲಕ ವಿಧಿವಿಧಾನ ಪೂರೈಸಿದ್ದಾರೆ.

ಬದುಕಿ ಬಾಳಿದ ಜಾಗ ವಾಸಕ್ಕೆ ಅಪಾಯಕಾರಿ, ಕಣ್ಣೀರಿಟ್ಟ ಸಂತ್ರಸ್ತರುಬದುಕಿ ಬಾಳಿದ ಜಾಗ ವಾಸಕ್ಕೆ ಅಪಾಯಕಾರಿ, ಕಣ್ಣೀರಿಟ್ಟ ಸಂತ್ರಸ್ತರು

ಕೊಡಗಿನ ಬೆಟ್ಟತ್ತೂರು ನಿವಾಸಿ ಸೋಮಯ್ಯ ಅವರ ಪುತ್ರಿ ಮಂಜಳಾ, ಮದೆನಾಡಿನ ಮದೆಮಹೇಶ್ವರ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ ಸಿ ವ್ಯಾಸಂಗ ಮಾಡುತ್ತಿದ್ದಳು.

ಜೋಡುಪಾಲದಲ್ಲಿ ಮನುಷ್ಯರ ಸುಳಿವಿಲ್ಲ, ಸಾಯೋ ಸ್ಥಿತೀಲಿ ಸಾಕುಪ್ರಾಣಿಗಳುಜೋಡುಪಾಲದಲ್ಲಿ ಮನುಷ್ಯರ ಸುಳಿವಿಲ್ಲ, ಸಾಯೋ ಸ್ಥಿತೀಲಿ ಸಾಕುಪ್ರಾಣಿಗಳು

ಬೆಟ್ಟತ್ತೂರಿನಿಂದ ಮದೆನಾಡು ಕಡೆಗೆ ಒಂದೇ ಬಸ್ ವ್ಯವಸ್ಥೆ ಇದ್ದ ಹಿನ್ನೆಲೆಯಲ್ಲಿ ಆಕೆಯನ್ನು ಮದೆನಾಡು ಪಕ್ಕದ ಜೋಡುಪಾಲದ ತನ್ನ ಸಂಬಂಧಿಕರಾದ ಬಸಪ್ಪ ಅವರ ಮನೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಮುಂದೆ ಓದಿ...

 ನೀರಿನಲ್ಲಿ ಕೊಚ್ಚಿ ಹೋಗಿದ್ದ ಮಂಜುಳಾ

ನೀರಿನಲ್ಲಿ ಕೊಚ್ಚಿ ಹೋಗಿದ್ದ ಮಂಜುಳಾ

ಆಗಸ್ಟ್ 16ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಭಾರೀ ಮಳೆಯಿಂದ ಸಂಭವಿಸಿದ ಜಲ ಸ್ಫೋಟದಿಂದಾಗಿ ಬೆಟ್ಟದ ಮೇಲಿಂದ ಭಾರೀ ಪ್ರಮಾಣದ ನೀರು ಬಸಪ್ಪ ಅವರ ಮನೆಗೆ ನುಗ್ಗಿತ್ತು. ಮನೆಯಲ್ಲಿದ್ದ ಬಸಪ್ಪ, ಗೌರಮ್ಮ, ಮೋನಿಶಾ ಸೇರಿದಂತೆ ಮಂಜುಳಾ ಕೂಡ ನೀರಿನಲ್ಲಿ ಕೊಚ್ಚಿ ಹೋಗಿದ್ದರು.

 ನಾಪತ್ತೆಯಾದ ಸ್ಥಳದಲ್ಲೇ ಅಂತ್ಯ ಸಂಸ್ಕಾರ

ನಾಪತ್ತೆಯಾದ ಸ್ಥಳದಲ್ಲೇ ಅಂತ್ಯ ಸಂಸ್ಕಾರ

ಮಂಜುಳಾ ಹೊರತುಪಡಿಸಿ ಬಸಪ್ಪ, ಗೌರಮ್ಮ, ಮೋನಿಶಾ ಅವರ ಮೂವರ ಶವಗಳು ಪತ್ತೆಯಾಗಿ ಅಂತ್ಯ ಸಂಸ್ಕಾರವೂ ನಡೆದಿದೆ. ಆದರೆ ಮಂಜುಳಾ ಮೃತ ದೇಹ ಈವರೆಗೆ ಪತ್ತೆಯಾಗಿಲ್ಲ.ಈ ಹಿನ್ನೆಲೆಯಲ್ಲಿ ಪೋಷಕರು ಮಂಜುಳಾ ನಾಪತ್ತೆಯಾದ ಸ್ಥಳದಲ್ಲೇ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ.

ಕೊಡಗು ಗಡಿಭಾಗದಲ್ಲಿ ಭೂಮಿಯಡಿಯಿಂದ ಮತ್ತೆ ಕೇಳಿಬರುತ್ತಿದೆ ನದಿ ಹರಿಯುವ ಶಬ್ದ!ಕೊಡಗು ಗಡಿಭಾಗದಲ್ಲಿ ಭೂಮಿಯಡಿಯಿಂದ ಮತ್ತೆ ಕೇಳಿಬರುತ್ತಿದೆ ನದಿ ಹರಿಯುವ ಶಬ್ದ!

 ಸಂಪ್ರದಾಯದಂತೆ ಮದುವೆ ಶಾಸ್ತ್ರ

ಸಂಪ್ರದಾಯದಂತೆ ಮದುವೆ ಶಾಸ್ತ್ರ

ಅಡಿಕೆ ಹಾಳೆಯಲ್ಲಿ ಮಂಜುಳಾ ಪ್ರತಿರೂಪ ತಯಾರಿಸಿ, ಅದಕ್ಕೆ ರೇಷ್ಮೆ ಸೀರೆ ತೊಡಿಸಿ, ಆಕೆಯ ಇಷ್ಟದ ವ್ಯಾನಿಟಿ ಬ್ಯಾಗ್ ಹಾಗೂ ಆಕೆ ಥ್ರೋಬಾಲ್ ಕ್ರೀಡೆಯಲ್ಲಿ ಗೆದ್ದ ಪದಕ ತೊಡಿಸಿ ಪ್ರತಿರೂಪವನ್ನು ಮದುಮಗಳಂತೆ ಸಿಂಗರಿಸಿದರು. ತದನಂತರ ಕುಡಿಯ ಸಂಪ್ರದಾಯದಂತೆ ಮದುವೆ ಶಾಸ್ತ್ರವನ್ನೂ ನೆರವೇರಿಸಿದ್ದಾರೆ.

 ಮಂಜುಳಾ ಸಹಪಾಠಿಗಳು ಭಾಗಿ

ಮಂಜುಳಾ ಸಹಪಾಠಿಗಳು ಭಾಗಿ

ಈ ಸಂದರ್ಭದಲ್ಲಿ ಮಂಜುಳಾ ಅವರ ತಂದೆ ಕುಡಿಯರ ಸೋಮಯ್ಯ ಮತ್ತು ತಾಯಿ ಜಯಂತಿ ಅವರ ಕಣ್ಣೀರು ಆಕ್ರಂದನ ಮುಗಿಲು ಮುಟ್ಟಿತ್ತು. ಅಂತ್ಯಕ್ರಿಯೆಯಲ್ಲಿ ಮಂಜುಳಾ ಸಹಪಾಠಿಗಳು ಪಾಲ್ಗೊಂಡಿದ್ದರು. ನಂತರ ಮಂಜುಳಾ ಪ್ರತಿರೂಪವನ್ನು ಆಕೆಯ ಹುಟ್ಟೂರು ಬೆಟ್ಟತ್ತೂರುವಿಗೆ ಕೊಂಡೊಯ್ದು ಕುಟುಂಬಕ್ಕೆ ಸೇರಿದ ಸ್ಮಶಾನದಲ್ಲಿ ವಿದಿ ವಿಧಾನ ಮೂಲಕ ಪೂರೈಸಲಾಯಿತು.

ಒಡತಿ ಕಂಡೊಡನೆ ಕುಣಿದು ಕುಪ್ಪಳಿಸಿ ಪರಿಹಾರ ಕೇಂದ್ರಕ್ಕೆ ತೆರಳಿದ ನಾಯಿಒಡತಿ ಕಂಡೊಡನೆ ಕುಣಿದು ಕುಪ್ಪಳಿಸಿ ಪರಿಹಾರ ಕೇಂದ್ರಕ್ಕೆ ತೆರಳಿದ ನಾಯಿ

English summary
After devastating landslide on August 16 at Jodupala village Manjula's body still missing. The parents of Manjula perform her last rituals with created model of Manjula.Here is the heart touching story of Jodupala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X