ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ದಸರಾ: ಕ್ರೀಡಾ ಸಾಧಕರಿಗೆ ಸನ್ಮಾನ, ಗೋಕರ್ಣನಾಥ ಆರೋಗ್ಯ ಕಾರ್ಡ್ ಬಿಡುಗಡೆ

|
Google Oneindia Kannada News

ಮಂಗಳೂರು, ಅಕ್ಟೋಬರ್. 18: ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 18ರಂದು 10 ಕ್ರೀಡಾ ಸಾಧಕರಿಗೆ ಸನ್ಮಾನ ಹಾಗೂ ಗೋಕರ್ಣನಾಥ ಆರೋಗ್ಯ ಕಾರ್ಡ್ ಬಿಡುಗಡೆ ಮಾಡಲಾಗುವುದೆಂದು ಕ್ಷೇತ್ರದ ಆಡಳಿತ ಮಂಡಳಿಯ ಕೋಶಾಧಿಕಾರಿ ಪದ್ಮರಾಜ್ ಹೇಳಿದರು.

ಮೈಸೂರು ದಸರಾ - ವಿಶೇಷ ಪುರವಣಿ

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ತೋರಿದ ಎಂಆರ್ ಪೂವಮ್ಮ, ಗುರುರಾಜ್, ಜಗದೀಶ್, ಪ್ರದೀಪ್ ಆಚಾರ್ಯ, ಪಂಚಮಿ ಸೇರಿದಂತೆ 10 ಮಂದಿಗೆ ದಸರಾ ಮಹೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಬಣ್ಣ ಬಣ್ಣದ ವಿದ್ಯುತ್ ದೀಪದ ಬೆಳಕಿನಲ್ಲಿ ಕಂಗೊಳಿಸುತ್ತಿದೆ ಮಂಗಳೂರುಬಣ್ಣ ಬಣ್ಣದ ವಿದ್ಯುತ್ ದೀಪದ ಬೆಳಕಿನಲ್ಲಿ ಕಂಗೊಳಿಸುತ್ತಿದೆ ಮಂಗಳೂರು

ಗೋಕರ್ಣನಾಥ ಆರೋಗ್ಯ ಕಾರ್ಡ್ ನಿಂದಾಗಿ 2 ಸಾವಿರ ಬಡ ಕುಟುಂಬಗಳಿಗೆ ಪ್ರಯೋಜನವಾಗಲಿದೆ. ಆರೋಗ್ಯ ಕಾರ್ಡ್ ಮೂಲಕ ಚಿಕಿತ್ಸೆಗಾಗಿ ನಗರದ ಎಜೆ ಆಸ್ಪತ್ರೆ ಜತೆ ಒಪ್ಪಂದ ಮಾಡಿಕೊಳ್ಳಲಾಗಿದೆ.

MR Poovamma will be honored at Mangalore Dasara

ನೋಡ ಬನ್ನಿ ನವದುರ್ಗೆಯರ ನಮಿಸುವ ಮಂಗಳೂರು ದಸರಾನೋಡ ಬನ್ನಿ ನವದುರ್ಗೆಯರ ನಮಿಸುವ ಮಂಗಳೂರು ದಸರಾ

ಈ ಬಾರಿಯ ಮಂಗಳೂರು ದಸರಾ ಉತ್ಸವ ಮೆರವಣಿಗೆಯಲ್ಲಿ 75ಕ್ಕೂ ಅಧಿಕ ಸ್ತಬ್ಧಚಿತ್ರಗಳು, 100ಕ್ಕೂ ಅಧಿಕ ಕಲಾತಂಡಗಳು ಭಾಗವಹಿಸಲಿವೆ. ಮೆರವಣಿಗೆ ಸುಸಾಂಗವಾಗಿ ನಡೆಯಲು ಪ್ರತಿಯೊಂದು ಟ್ಯಾಬ್ಲೋ ತಂಡಕ್ಕೆ ಒಬ್ಬರು ಎಎಸ್ಸೈ, 4 ಕಾನ್‌ಸ್ಟೇಬಲ್ ಗಳನ್ನು ನಿಯೋಜಿಸುವುದಾಗಿ ಪೊಲೀಸ್ ಅಧಿಕಾರಿಗಳು ಭವರಸೆ ನೀಡಿದ್ದಾರೆ ಎಂದು ಪದ್ಮರಾಜ್ ತಿಳಿಸಿದರು.

English summary
Kudroli Gokarnanatha temple committee has planned to felicitate 10 sports persons including MR Poovamma on October 18
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X