ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಲ್ಲಿ ಆರೆಸ್ಸೆಸ್ ಕಾರ್ಯಕರ್ತನ ಕೊಲೆ ಯತ್ನ

ತಲವಾರಿನಿಂದ ಕಡಿದು ಆರೆಸ್ಸೆಸ್ ಕಾರ್ಯಕರ್ತನ ಕೊಲೆಗೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಕುತ್ತಾರ್ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಕುತ್ತಾರಿನ ನಿವಾಸಿ ರಾಮ್‌ಮೋಹನ್ (38) ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ.

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ನವೆಂಬರ್ 11: ತಲವಾರಿನಿಂದ ಕಡಿದು ಆರೆಸ್ಸೆಸ್ ಕಾರ್ಯಕರ್ತನ ಕೊಲೆಗೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಕುತ್ತಾರ್ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಕುತ್ತಾರಿನ ನಿವಾಸಿ ರಾಮ್‌ಮೋಹನ್ (38) ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ.

ಮಜಲುತೋಟದ ಸ್ಮಶಾನದ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದ ರಾಮ್ ಮೋಹನ್‌ ರ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ತಲವಾರು ಬೀಸಿ ಹಲ್ಲೆ ನಡೆಸಿದ್ದಾರೆ. ಪರಿಣಾಮವಾಗಿ ರಾಮ್‌ಮೋಹನ್‌ರ ಕುತ್ತಿಗೆ ಹಾಗೂ ತಲೆಯ ಭಾಗಗಳಿಗೆ ಗಾಯವಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.[ಟಿಪ್ಪು ವಿರೋಧಿಸಿ ರಾತ್ರಿಯೇ ಬಲಿಯಾದ ಬಿಜೆಪಿ ಕಾರ್ಯಕರ್ತ]

mangaluru

ಸಚಿವ ಯು.ಟಿ.ಖಾದರ್‌ ಖಂಡನೆ: ಇನ್ನು ಘಟನೆಯನ್ನು ಖಂಡಿಸಿ ಸಚಿವ ಯು.ಟಿ.ಖಾದರ್‌ ಬೆಂಗಳೂರಿನಿಂದ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಅಲ್ಲದೆ ಮಂಗಳೂರು ಪೊಲೀಸ್‌ ಆಯುಕ್ತರೊಂದಿಗೆ ಮಾತನಾಡಿ, ದುಷ್ಕರ್ಮಿಗಳನ್ನು ಪತ್ತೆ ಹಚ್ಚುವಂತೆ ಸೂಚನೆಯನ್ನು ನೀಡಿದ್ದಾರೆ.[ಬೀದರಿನಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಬಲಿ]

ಇತ್ತೀಚೆಗೆ ಹಿಂದೂಪರ ಸಂಘಟನೆಗಳ ಸದಸ್ಯರ ಮೇಲೆ ಹಲ್ಲೆ ಹಾಗೂ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲಿ ಆರ್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆಯಾಗಿತ್ತು. ಆ ನಂತರ ಪಿರಿಯಾಪಟ್ಟಣದ ಮಾಗಳಿ ರವಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಬೀದರ್ ಹಾಗೂ ಬೆಂಗಳೂರಿನಲ್ಲೂ ಬಿಜೆಪಿ ಕಾರ್ಯಕರ್ತರ ಕೊಲೆಯಾಗಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.

English summary
Murder attempt on RSS worker Ramamohan on Thursday night in Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X