ಮಂಗಳೂರಿನಲ್ಲಿ ರೋಗಿಯ ಸಾವು: ಚಿಕಿತ್ಸೆ ನೀಡಿದ ವೈದ್ಯರ ಅಪಹರಣ, ಹಲ್ಲೆ
ಚಿಕಿತ್ಸೆಗೆಂದು ಆಸ್ಪತ್ರೆಗೆ ಸೇರಿದ್ದ ವ್ಯಕ್ತಿಯೊಬ್ಬ ಸಾವಿಗೀಡಾದ ಹಿನ್ನೆಲೆಯಲ್ಲಿ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದ ವೈದ್ಯರನ್ನೇ ಅಪಹರಿಸಿ ಹಲ್ಲೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರು ಮೇ 16: ಚಿಕಿತ್ಸೆಗೆಂದು ಆಸ್ಪತ್ರೆಗೆ ಸೇರಿದ್ದ ವ್ಯಕ್ತಿಯೊಬ್ಬ ಸಾವಿಗೀಡಾದ ಹಿನ್ನೆಲೆಯಲ್ಲಿ, ವ್ಯಕ್ತಿಗೆ ಚಿಕಿತ್ಸೆ ನೀಡಿದ್ದ ವೈದ್ಯರನ್ನೇ ಅಪಹರಿಸಿ, ಹಲ್ಲೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ವ್ಯಕ್ತಿ ಮೃತನಾಗುವುದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿದ ಮೃತ ವ್ಯಕ್ತಿಯ ಕಡೆಯವರು, ನರ್ಸ್ ಮೇಲೂ ಹಲ್ಲೆ ನಡೆಸಿದ್ದಾರೆ.[ಬಂಟ್ವಾಳ ತಾಲೂಕು ಕಾಂಗ್ರೆಸ್ ಕಚೇರಿಯಲ್ಲಿ ಮತ್ತೆ ಮಾರಾಮಾರಿ]
ನಂತರ ವೈದ್ಯ ಡಾ.ಅಭಿಜಿತ್ ಶೆಟ್ಟಿ ಅವರನ್ನು ಅಪಹರಿಸಿ, ಹಲ್ಲೆ ನಡೆಸಿದ ಮೂವರನ್ನು ಉಲ್ಲಾಳ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
Comments
English summary
Some men kidnapped a doctor in Mangaluru, in relation with a patient's death case. Docter's irresponsibility is the reason for man's death, the accused.
Story first published: Tuesday, May 16, 2017, 11:33 [IST]