ಪ್ರಶಾಂತ್ ಪೂಜಾರಿ ಕೊಲೆ: ನಾಲ್ವರು ಖುದ್ದು ಕೋರ್ಟ್ ಗೆ ಶರಣು
ಮಂಗಳೂರು, ಜೂನ್ 08 : ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಖುದ್ದು ಬುಧವಾರ ಮೂಡುಬಿದಿರೆ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಬೈಕ್ ನಲ್ಲಿ ಬಂದು ತಲವಾರ್ ಗಳಿಂದ ಹತ್ಯೆಗೈದಿದ್ದ ಪ್ರಮುಖ ಆರೋಪಿ ಅಕ್ಬರ್ ವಳಚ್ಚಿಲ್ (30), ಸಿರಾಜ್ ಉಳ್ಳಾಲ್ (28) ಮತ್ತು ಕೊಲೆಗೆ ಸಹಕರಿಸಿದ್ದ ಅನ್ವರ್ ಬಜ್ಪೆ, ತಾಜುದ್ದೀನ್ ಬಜ್ಪೆ ಎನ್ನುವರು ಕೋರ್ಟ್ ಗೆ ಖುದ್ದು ಶರಣಾದರು. ಇವರಿಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.[ಮೂಡಬಿದಿರೆಯಲ್ಲಿ ಬೆಳ್ಳಂಬೆಳಗ್ಗೆ ಹೂವಿನ ವ್ಯಾಪಾರಿ ಹತ್ಯೆ]

2015ರ ಅಕ್ಟೋಬರ್ 9ರಂದು ಬೆಳಗ್ಗೆ 6.30ಕ್ಕೆ ಹೂವಿನ ಅಂಗಡಿಗೆ ಹೋಗುತ್ತಿದ್ದ ಪ್ರಶಾಂತ್ ಪೂಜಾರಿಯನ್ನು 6 ಮಂದಿಯ ತಂಡ 3 ಬೈಕ್ ಗಳಲ್ಲಿ ಬಂದು ಕೊಲೆ ಮಾಡಿತ್ತು.
ಮಹಮ್ಮದ್ ಹನೀಫ್ (36) ಇಬ್ರಾಹಿಂ ಲಿಯಾಕತ್ (26) ಮಹಮ್ಮದ್ ಇಲ್ಯಾಸ್ (27) ಅಬ್ದುಲ್ ರಶೀದ್ ಆರೋಪಿಗಳ ಬಂಧನವಾಗಿತ್ತು.
ಪ್ರಶಾಂತ್ ಹತ್ಯೆ ಮಾತ್ರವಲ್ಲದೇ ಹಂಡೇಲು ಎಂಬಲ್ಲಿ ಅಶೋಕ್ ಹಾಗೂ ವಾಸು ಅವರ ಮೇಲೆ ನಡೆದ ಹಲ್ಲೆ ಪ್ರಕರಣ ಹಾಗೂ ಜಯನಾಥ್ ಕೋಟ್ಯಾನ್ ಅವರ ಮೇಲೆ ಹಲ್ಲೆ ನಡೆಸಿರುವುದು ತಾವೇ ಎಂದು ಪೊಲೀಸರ ಮುಂದೆ ಒಪ್ಪಿಕೊಂಡಿದ್ದರು.
ಪ್ರಶಾಂತ ಪೂಜಾರಿ ಹಿಂದೂಪರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದು, ಗಂಟಾಲ್ಕಟ್ಟೆ ಕಸಾಯಿಖಾನೆ ವಿರೋಧಿ ಹೋರಾಟದಲ್ಲಿದ್ದರು. ಇದೇ ಕಾರಣಕ್ಕೆ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿತ್ತು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications