ಬೆಳ್ತಂಗಡಿಯಲ್ಲಿ ಭಗವಧ್ವಜಕ್ಕೆ ಬೆಂಕಿ, ದಕ್ಷಿಣ ಕನ್ನಡದಲ್ಲಿ ಭುಗಿಲೆದ್ದ ಆಕ್ರೋಶ
ಮಂಗಳೂರು, ಆಗಸ್ಟ್ 29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಗಧ್ವಜಕ್ಕೆ ಬೆಂಕಿ ಇಟ್ಟಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಬೆಳ್ತಂಗಡಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯೊಂದರಲ್ಲಿ ಭಗವಧ್ವಜಕ್ಕೆ ಬೆಂಕಿ ಹೊತ್ತಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತ ವೀಡಿಯೊ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.
ಪ್ರತಿಭಟನೆ ಸಂದರ್ಭದಲ್ಲಿ ಹಿಂದೂ ಭಗವಧ್ವಜಕ್ಕೆ ಬೆಂಕಿ ಇಟ್ಟಿರುವ ವಿಚಾರವಾಗಿ ಇದೀಗ ಜಿಲ್ಲೆಯಲ್ಲಿ ಭಾರೀ ಚರ್ಚೆ ಆರಂಭಗೊಂಡಿದೆ. ದಲಿತ ಸಂಘಟನೆಗಳು ಬೆಳ್ತಂಗಡಿಯ ಮಿನಿ ವಿಧಾನಸೌಧದ ಮುಂಭಾಗ ನಡೆಸಿದ್ದ ಪ್ರತಿಭಟನೆ ಸಂದರ್ಭದಲ್ಲಿ ಈ ಭಗವಧ್ವಜವನ್ನು ಸುಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.
ಪಕ್ಷದ ಬಾವುಟ ಹಾರಿಸಿ, ಪ್ರಮುಖರನ್ನು ಹೆಸರಿಸಿದ ಕಮಲ್
ವಿಡಿಯೋದಲ್ಲಿ ದಲಿತ ಸಂಘಟನೆಗಳ ಕಾರ್ಯಕರ್ತರು ಆರ್.ಎಸ್.ಎಸ್ ವಿರುದ್ಧ ಘೋಷಣೆ ಕೂಗುವ ಜೊತೆಗೆ ಹಿಂದೂ ಭಗಧ್ವಜಕ್ಕೂ ಬೆಂಕಿ ಹಚ್ಚುವ ಘಟನೆ ಸೆರೆಹಿಡಿಯಲಾಗಿದೆ. ಈ ವಿಚಾರವಾಗಿ ಇದೀಗ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಅಧಿಕೃತ ನಾಡಧ್ವಜಕ್ಕೆ ಸದ್ಯಕ್ಕೆ ಮಾನ್ಯತೆ ಇಲ್ಲ: ಕೇಂದ್ರ
ಹಿಂದೂ ಸಂಘಟನೆ ಹಾಗು ಸಂಘ ಪರಿವಾರಗಳ ಭದ್ರಕೋಟೆಯಾಗಿರುವ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಘಟನೆ ನಡೆದಿರುವುದು ಹಿಂದೂ ಸಂಘಟನೆಗಳನ್ನು ಕೆರಳಿಸಿದೆ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿಯೂ ಪರ-ವಿರೋಧ ಚರ್ಚೆಗಳು ಆರಂಭಗೊಂಡಿದ್ದು, ಭಗಧ್ವಜಕ್ಕೆ ಬೆಂಕಿ ಇಟ್ಟವರನ್ನು ಈ ಕೂಡಲೇ ಬಂಧಿಸಬೇಕೆಂಬ ಕೂಗು ಕೇಳಿಬರುತ್ತಿದೆ.