ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಚಿವ ರಮಾನಾಥ ರೈ ಆಪ್ತನ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ

By ಕಿರಣ್ ಸಿರ್ಸೀಕರ್
|
Google Oneindia Kannada News

ಬಂಟ್ವಾಳ, ಮೇ 11: ಬುಧವಾರ ರಮಾನಾಥ ರೈ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ಇದೀಗ ಇನ್ನೋರ್ವ ಆಪ್ತ, ಕಾಂಗ್ರೆಸ್ ಮುಖಂಡರೊಬ್ಬರ ಮನೆಗೆ ನುಗ್ಗಿ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಸಚಿವ ರಮಾನಾಥ್ ರೈ‌ ಆಪ್ತ ಹಾಗೂ ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯರಾಗಿರುವ ಸಂಜೀವ ಪೂಜಾರಿಯ ಮನೆ ಮೇಲೆ ಗುರುವಾರ ತಡ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಸಂಜೀವ ಪೂಜಾರಿ ಮತ್ತು ಅವರ ಪತ್ನಿ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

Ramanath Rai associate cracked down at his residence and fatally injured

ಅಲ್ಲದೇ ಮನೆಯ ಸಾಮಾಗ್ರಿಗಳು ಮತ್ತು ಬಿಎಂಡಬ್ಲ್ಯೂ ಕಾರನ್ನು ಧ್ವಂಸಗೊಳಿಸಿದ್ದಾರೆ. ಈ ವೇಳೆ ತಡೆಯಲು ಬಂದ ಇತರ ಮೂವರ ಮೇಲೆಯೂ ಹಲ್ಲೆ ನಡೆಸಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಹಲ್ಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಕರಣ ರಾಜಕೀಯ ತಿರುವನ್ನು ಪಡೆದುಕೊಂಡಿದೆ. ಸಚಿವ ರಮಾನಾಥ ರೈ ವಿರೋಧಿಗಳು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

Ramanath Rai associate cracked down at his residence and fatally injured

ಹಲ್ಲೆಗೆ ಗುರಿಯಾದ ಕಾಂಗ್ರೆಸ್ ಮುಖಂಡ ಸಂಜೀವ ಪೂಜಾರಿ ಬಾರ್ ಹೊಂದಿದ್ದಾರೆ.

English summary
Karnataka assembly elections 2018: Minister Ramanath Rai’s close associate cracked down at his residence and fatally injured in Bantwal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X