ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಎದುರಾಗಿದೆ ಸಂಕಷ್ಟ

|
Google Oneindia Kannada News

ಮಂಗಳೂರು, ಅಕ್ಟೋಬರ್. 24: ಪುತ್ತೂರಿನ ಕೆದಿಲ ಗ್ರಾಮದಲ್ಲಿ 2014, ಸೆಪ್ಟೆಂಬರ್. 1 ರಂದು ನಡೆದ ಶ್ಯಾಂ ಪ್ರಸಾದ್ ಶಾಸ್ತ್ರಿ ಅತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಸಂಕಷ್ಟ ಎದುರಾಗಿದೆ.

ಈ ಪ್ರಕರಣದ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಶ್ಯಾಂ ಪ್ರಸಾದ್ ಶಾಸ್ತ್ರಿ ಅವರಿಗೆ ಒತ್ತಡ ಹೇರಿದ ಆಡಿಯೋ ಸಹಿತ ಹಲವು ಸಾಕ್ಷಿಗಳನ್ನು ಪುತ್ತೂರು ಕೋರ್ಟ್ ಗೆ ಸಲ್ಲಿಸಿದ್ದರು. ಶ್ಯಾಂ ಪ್ರಸಾದ್ ಶಾಸ್ತ್ರಿ ಅವರಿಗೆ ಆತ್ಮಹತ್ಯೆಗೆ ಪ್ರೇರಣೆ ನೀಡಿರುವ ಆಡಿಯೋದ ಧ್ವನಿ ಕಲ್ಲಡ್ಕ ಪ್ರಭಾಕರ್ ಭಟ್ ಅವರದ್ದೇ ಎಂದು ಈಗ ದೃಢಪಟ್ಟಿದೆ ಎಂದು ಹೇಳಲಾಗಿದೆ.

ಕಲ್ಲಡ್ಕ ಪ್ರಭಾಕರ ಭಟ್ ಗೆ ಮತ್ತೊಂದು ಸಂಕಷ್ಟ, ಜಾತಿ ನಿಂದನೆ ದೂರು ದಾಖಲುಕಲ್ಲಡ್ಕ ಪ್ರಭಾಕರ ಭಟ್ ಗೆ ಮತ್ತೊಂದು ಸಂಕಷ್ಟ, ಜಾತಿ ನಿಂದನೆ ದೂರು ದಾಖಲು

ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಅಧಿಕಾರಿಗಳು ದೋಷಾರೋಪಣಾಟ್ಟಿಯಲ್ಲಿ ನಮೂದಿಸಿರುವ ಆಡಿಯೋ ಕಲ್ಲಡ್ಕ ಪ್ರಭಾಕರ ಭಟ್ ಅವರದ್ದೇ ಧ್ವನಿ ಎಂದು ಹೇಳಿದ್ದರು. ಈಗ ವಿಧಿ ವಿಜ್ಞಾನ ಪ್ರಯೋಗಾಲಯ ಕೂಡ ಪ್ರಭಾಕರ ಭಟ್ ಅವರದ್ದೇ ಎಂದು ದೃಢಪಡಿಸಿದೆ.

RSS leader Dr Kalladka Prabhakar Bhat is in trouble

ಆದರೆ ಇತ್ತೀಚೆಗೆ ಈ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಡಾ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಪುತ್ತೂರಿನ ಐದನೇ ಹೆಚ್ಚುವರಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

ಫೇಸ್ಬುಕ್ ನಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅವಹೇಳನಕಾರಿ ಪೋಸ್ಟ್ಫೇಸ್ಬುಕ್ ನಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅವಹೇಳನಕಾರಿ ಪೋಸ್ಟ್

ಶ್ಯಾಂ ಪ್ರಸಾದ್ ಶಾಸ್ತ್ರಿ ರಾಮಕಥಾ ಗಾಯಕಿಯ ಪತಿಯ ಕಿರಿಯ ಸಹೋದರ ಆಗಿದ್ದರು. ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿ ಪರ ನಿಲ್ಲುವಂತೆ ಶ್ಯಾಂ ಪ್ರಸಾದ್ ಶಾಸ್ತ್ರಿ ಅವರ ಮೇಲೆ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಪುತ್ತೂರು ಹವ್ಯಕ ವಲಯದ ಅಧ್ಯಕ್ಷ ಶಿವ ಶಂಕರ್ ಭಟ್ ಹಾಗೂ ರಾಘವೇಶ್ವರ ಶ್ರೀ ಅವರು ಒತ್ತಡ ಹೇರಿದ್ದರು ಎಂದು ಆರೋಪಿಸಲಾಗಿತ್ತು.

English summary
In Shyam Prasad Shashri suicide case RSS leader Dr Kalladka Prabhakar Bhat is in trouble. CID officers field charge sheet to Puttur court about Shyamprasad Shasthri suicide case of 2014. This case is connect to Raghaveeshwara Swamiji.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X