ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧರ್ಮಸ್ಥಳದ ಜೊತೆ ಅವಿನಾಭಾವ ನಂಟು ಹೊಂದಿದ್ದ ಶಿವಕುಮಾರ ಸ್ವಾಮೀಜಿ

|
Google Oneindia Kannada News

ಮಂಗಳೂರು, ಜನವರಿ 21: ನಡೆದಾಡುವ ದೇವರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಅಗಲಿಕೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಸಂತಾಪ ಸೂಚಿಸಿದ್ದಾರೆ.

ಶ್ರೀಕ್ಷೇತ್ರದ ಜೊತೆ ಶ್ರೀಗಳಿಗೆ ಅವಿನಾಭಾವ ನಂಟಿತ್ತು.ಧರ್ಮಸ್ಥಳದ ಜೊತೆ 75ವರ್ಷಕ್ಕೂ ಹಿಂದಿನ‌ ನಂಟು ಹೊಂದಿದ್ದ ಶ್ರೀಗಳು, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ತಂದೆ ಮತ್ತು ಅಜ್ಜನ‌ ಕಾಲದಲ್ಲಿ ಶ್ರೀಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

Siddaganga Swamijis intense relationship with Dharmasthala

ಇಹಲೋಕ ತ್ಯಜಿಸಿದ ಶ್ರೀಗಳಿಗೆ ಗಣ್ಯರ ಭಾವಪೂರ್ಣ ಶ್ರದ್ಧಾಂಜಲಿಇಹಲೋಕ ತ್ಯಜಿಸಿದ ಶ್ರೀಗಳಿಗೆ ಗಣ್ಯರ ಭಾವಪೂರ್ಣ ಶ್ರದ್ಧಾಂಜಲಿ

ದಿ.ರತ್ನವರ್ಮ ಹೆಗ್ಗಡೆ ಹಾಗೂ ಅವರ ತಂದೆ ದಿ.ಮಂಜಯ್ಯ ಹೆಗ್ಗಡೆ ಕಾಲದಲ್ಲಿ ಸಿದ್ಧಗಂಗಾಶ್ರೀಗಳಿಗೆ ಧರ್ಮಸ್ಥಳದ ಜೊತೆ ಅವಿನಾಭಾವ ನಂಟಿತ್ತು.50 ವರ್ಷಗಳ ಹಿಂದೆ ಸಿದ್ದಗಂಗಾ ಶ್ರೀಗಳು ಉಜಿರೆಗೂ ಆಗಮಿಸಿದ್ದರಂತೆ. 1969 ಮತ್ತು 1970ರಲ್ಲಿ ಶ್ರೀಕ್ಷೇತ್ರಕ್ಕೆ ಭೇಟಿ ನೀಡಿದ್ದ ಶ್ರೀಗಳು, ಉಜಿರೆಯಲ್ಲಿ ಎಸ್ ಡಿಎಂ ಕಾಲೇಜು ಕಟ್ಟಡ ಶಂಕುಸ್ಥಾಪನೆ ಮತ್ತು ವರ್ಷದ ಬಳಿಕ ಉದ್ಘಾಟನೆಗೂ ಆಗಮಿಸಿದ್ದು ವಿಶೇಷ.

Siddaganga Swamijis intense relationship with Dharmasthala

ಶ್ರೀಗಳನ್ನು ಭೇಟಿ ಮಾಡಿದ್ದು ಮರೆಯಲು ಸಾಧ್ಯವಿಲ್ಲ: ರಂಭಾಪುರಿ ಶ್ರೀಶ್ರೀಗಳನ್ನು ಭೇಟಿ ಮಾಡಿದ್ದು ಮರೆಯಲು ಸಾಧ್ಯವಿಲ್ಲ: ರಂಭಾಪುರಿ ಶ್ರೀ

ಆ ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೇ ತುಮಕೂರಿಗೆ ತೆರಳಿ ಶ್ರೀಗಳ ದರ್ಶನ ಪಡೆಯುತ್ತಿದ್ದರು.

English summary
Here are the details of shree Siddaganga Swamijis intense relationship with Dharmasthala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X