ದುರಂತಕ್ಕೀಡಾದ ಬಾರ್ಜ್ ಮೇಲೆತ್ತಲು ತಜ್ಞರ ತಂಡ ಮಂಗಳೂರಿಗೆ
ಮಂಗಳೂರು, ಜೂನ್ 05 : ಉಳ್ಳಾಲದ ಮೊಗವೀರ ಪಟ್ಣದ ಅರಬ್ಬೀ ಸಮುದ್ರದಲ್ಲಿ ಅರ್ಧ ಮುಳುಗಿ ಅತಂತ್ರ ಸ್ಥಿತಿಯಲ್ಲಿರುವ ಬಾರ್ಜ್ ಹೊರ ತರಲು ಮುಂಬೈಯಿಂದ ತಜ್ಞರ ತಂಡ ಇಂದು (ಸೋಮವಾರ) ಮಂಗಳೂರಿಗೆ ಆಗಮಿಸಲಿದೆ.
ಆಂಧ್ರದ ಧರ್ತಿ ಸಂಸ್ಥೆಗೆ ಸೇರಿರುವ ಈ ಬಾರ್ಜಿನ ಸ್ಥಳಾಂತರ ಮತ್ತು ದುರಸ್ತಿ ಕಾರ್ಯ ತುರ್ತಾಗಿ ಆಗಬೇಕಾಗಿದೆ. ಆದರೆ, ಇದನ್ನು ಹೊರತೆಗೆಯುವುದು ಬಹಳ ಕಷ್ಟಕರವಾದ ಕೆಲಸವಾಗಿದ್ದು, ಪ್ರಸ್ತುತ ಇದರ ಅಧ್ಯಯನ ನಡೆಸಿ ಬಳಿಕ ಮೇಲಕ್ಕೆತ್ತಲಿದೆ.[ಮಂಗಳೂರು: ದುರಂತಕ್ಕೀಡಾದ ಬಾರ್ಜ್ ನಲ್ಲಿದ್ದ 27 ನೌಕರರ ರಕ್ಷಣೆ]

ಸುಮಾರು 33 ಕೋಟಿ ರು. ವೆಚ್ಚದ ಈ ಬಾರ್ಜ್ ಸಿಂಗಾಪುರದಲ್ಲಿ ನಿರ್ಮಾಣ ಮಾಡಲಾಗಿದ್ದು, ಮುಂಬೈಯಿಂದ ಮಂಗಳೂರಿಗೆ 9 ತಿಂಗಳ ಹಿಂದೆ ತರಲಾಗಿತ್ತು. ಉಳ್ಳಾಲದಲ್ಲಿ ಕಡಲ್ಕೊರೆತ ತಡೆಗೋಡೆ ಕಾಮಗಾರಿಯನ್ನು ನಿರ್ವಹಿಸುತ್ತಿತ್ತು.
ಜೂನ್ 03ರಂದು ಉಳ್ಳಾಲ ಮೊಗವೀರಪಟ್ಣದ ಸಮುದ್ರದಲ್ಲಿ ಬ್ರೇಕ್ ವಾಟರ್ ಕಾಮಗಾರಿಗಾಗಿ ಕಾರ್ಮಿಕರನ್ನು ಹೊತ್ತು ತೆರಳಿದ್ದ ಬಾರ್ಜ್ ದುರಂತಕ್ಕೀಡಾಗಿತ್ತು. ಇದರಲ್ಲಿದ್ದ 27 ನೌಕರರ ರಕ್ಷಣೆ ಮಾಡಲಾಗಿತ್ತು.[ಉಳ್ಳಾಲದಲ್ಲಿ ಹಡಗು ದುರಂತ; 33 ಜನರು ಅಪಾಯದಲ್ಲಿ]
ಬಾರ್ಜಿನಲ್ಲಿದ್ದ ಇಂಧನ ಒಂದು ವೇಳೆ ಕಡಲಿಗೆ ಬಿಡುಗಡೆಯಾದರೆ ಜಲಚರಗಳಿಗೆ ಅಪಾಯವಿದೆ. ಅಲ್ಲದೆ ಜೂನ್ ತಿಂಗಳ ಬಳಿಕ ಮೀನುಗಳು ಮರಿ ಇಡುವ ಸಂದರ್ಭದಲ್ಲಿ ಇಂತಹ ಆಯಿಲ್ ಇನ್ನಷ್ಟು ಮಾರಕವಾಗುವುದರಿಂದ ಶೀಘ್ರವೇ ಬಾರ್ಜ್ ಮೇಲಕ್ಕೆತ್ತಬೇಕು ಎಂದು ಇಲ್ಲಿನ ಮೀನುಗಾರರು ಒತ್ತಾಯಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications