ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹರಿದ್ವಾರದಲ್ಲಿ ಶ್ರೀರಾಮ ಕ್ಷೇತ್ರದ ಶಾಖಾ ಮಠ ಆರಂಭ

|
Google Oneindia Kannada News

ದಕ್ಷಿಣ ಕನ್ನಡ, ನವೆಂಬರ್ 19 : ಹಿಮಾಲಯದ ತಪ್ಪಲಿನ ಹರಿದ್ವಾರದಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೂತನ ಶಾಖಾ ಮಠ 'ಸಾಧನಾ ಕುಟೀರ' ಸೆ.25ರಂದು ಲೋಕಾರ್ಪಣೆಗೊಳ್ಳಲಿದೆ.

ಮುಂಡ್ಕೂರು ವಿಠೋಬ ದೇವರ ಸಹಸ್ರ ಕುಂಭಾಭಿಷೇಕ ಸಂಪನ್ನಮುಂಡ್ಕೂರು ವಿಠೋಬ ದೇವರ ಸಹಸ್ರ ಕುಂಭಾಭಿಷೇಕ ಸಂಪನ್ನ

ಧರ್ಮಸ್ಥಳ ಉಜಿರೆಯ ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೂತನ ಶಾಖಾ ಮಠವನ್ನು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಉದ್ಘಾಟಿಸಲಿದ್ದಾರೆ.

Sri Rama Kshetra Kanyadi's branch mutt will be open in Haridwar

ಹರಿಹರ ಕೈಲಾಸ ಋಷಿಕೇಶದ ಸ್ವಾಮೀಜಿ ಪ್ರೇಮಾನಂದಜಿ ಮಹಾರಾಜ್, ಹರಿದ್ವಾರದ ಹರನಾಥ್ ಮಂದಿರದ ಅಧ್ಯಕ್ಷ ದೇವಾನಂದ ಸರಸ್ವತಿ ಮಹಾರಾಜ್ ಹಾಗೂ ಸ್ವಾಮಿ ಸೋಮೇಶ್ವರ ನಂದಜಿ ಮಹಾರಾಜ್ ಆಶೀರ್ವಚನ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್, ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್, ಭಟ್ಕಳ ಶಾಸಕ ಮಂಕಾಳ ವೈದ್ಯ ಮುಂತಾದವರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

'ಮುಂದಿನ ದಿನಗಳಲ್ಲಿ ರಾಜ್ಯದ ಸಮಸ್ತ ಹಿಂದೂ ಬಾಂಧವರು ಉತ್ತರ ಭಾರತದ ಪುಣ್ಯ ಕ್ಷೇತ್ರಗಳ ದರ್ಶನಕ್ಕೆ ಆಗಮಿಸಿದ ಸಂದರ್ಭದಲ್ಲಿ ಈ ಕುಟೀರದಲ್ಲಿ ವಾಸ್ತವ್ಯ ಹೂಡುವ ಮೂಲಕ ಇದರ ಪ್ರಯೋಜನೆ ಪಡೆದುಕೊಳ್ಳಬಹುದಾಗಿದೆ.

English summary
Sri Rama Kshetra Kanyadi, Dakshina Kannada branch mutt will be open in Haridwar on November 25, 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X