ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಈ ಚುನಾವಣೆಯೇ ರಮಾನಾಥ ರೈ ಕೊನೆಯ ಬಯಲಾಟ ಎಂದ ಹರಿಕೃಷ್ಣ ಬಂಟ್ವಾಳ

|
Google Oneindia Kannada News

ಮಂಗಳೂರು, ಜನವರಿ 17 : ಈ ಬಾರಿಯ ಚುನಾವಣೆ ಸಚಿವ ರಮಾನಾಥ ರೈ ಅವರ ಕೊನೆಯ ಬಯಲಾಟ. ರಮಾನಾಥ ರೈ ಮಹಿಷಾಸುರನಾದರೆ, ಜನರು ದೇವಿಯ ರೂಪದಲ್ಲಿ ಅವರನ್ನು ಮುಗಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಬಿಲ್ಲವ ಸಮುದಾಯದವರಿಗೆ ಟಿಕೆಟ್ ನೀಡಲಿ ಎಂದು ಸಚಿವ ರಮಾನಾಥ ರೈ ಅವರ ಹೇಳಿಕೆಯನ್ನು ಪ್ರಸ್ತಾಪಿಸಿದ ಅವರು, ಬಿಲ್ಲವರ ಬಗ್ಗೆ ಮಾತನಾಡುವ ನೈತಿಕತೆ ರಮಾನಾಥ ರೈಗಿಲ್ಲ ಎಂದು ಕಿಡಿ ಕಾರಿದರು.

ರಮಾನಾಥ್ ರೈ ಧರ್ಮಸ್ಥಳಕ್ಕೆ ಆಣೆ-ಪ್ರಮಾಣಕ್ಕೆ ಬರಲಿ: ಹರಿಕೃಷ್ಣ ಬಂಟ್ವಾಳ ಸವಾಲ್ರಮಾನಾಥ್ ರೈ ಧರ್ಮಸ್ಥಳಕ್ಕೆ ಆಣೆ-ಪ್ರಮಾಣಕ್ಕೆ ಬರಲಿ: ಹರಿಕೃಷ್ಣ ಬಂಟ್ವಾಳ ಸವಾಲ್

ರಮಾನಾಥ ರೈ ಅವರಿಗೆ ತಾಕತ್ತಿದ್ದರೆ ಬಂಟ್ವಾಳದಲ್ಲಿ ಬಿಲ್ಲವರಿಗೆ ಸೀಟು ಕೊಡಿಸಲಿ ಎಂದು ಸವಾಲು ಹಾಕಿದರು. ಮುಸ್ಲಿಮರ ಕೃಪೆಯಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಈ ವರೆಗೆ ಗೆದ್ದಿದ್ದೇನೆ ಎಂದಿದ್ದ ರಮಾನಾಥ ರೈ ಈ ಬಾರಿ ಮುಸ್ಲಿಂ ಸಮುದಾಯದ ಒಬ್ಬರಿಗೆ ಬಂಟ್ವಾಳ ದಿಂದ ಸ್ಪರ್ಧಿಸಲು ಸೀಟು ಬಿಟ್ಟು ಕೊಡಲಿ ಎಂದು ಸವಾಲು ಹಾಕಿದರು.

'This will be the last election for minister Ramanatha Rai'

ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಅವರಿಗೆ ಕಣ್ಣೀರು ಹಾಕಿಸಿದ್ದು ಸಚಿವ ರಮಾನಾಥ ರೈ ಎಂದು ಆರೋಪಿಸಿದ ಅವರು, ಈ ವರೆಗೆ ಲೋಕಸಭಾ ಚುನಾವಣೆಯಲ್ಲಿ ಪೂಜಾರಿಯನ್ನು ಸೋಲಿಸಿದ್ದು ಕೂಡ ರಮಾನಾಥ ರೈ ಎಂದು ಅವರು ಆರೋಪ ಮಾಡಿದರು.

English summary
This will be the last election for minister Ramanatha Rai, said by BJP leader Harikrishna Bantwal in Mangaluru. He mocked Ramanatha Rai as Mahishasura.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X