ವಿಷ ಪ್ರಸಾದ ದುರಂತ: ಮಾನವೀಯತೆ ಮೆರೆದ ಆಳ್ವಾಸ್
ಮಂಗಳೂರು, ಡಿಸೆಂಬರ್ 19: ಸುಳ್ವಾಡಿ ಗ್ರಾಮದ ಮಾರಮ್ಮ ದೇವಸ್ಥಾನದಲ್ಲಿ ವಿಷಪ್ರಸಾದ ಸೇವಿಸಿ ಸಾವನ್ನಪ್ಪಿದ್ದ ಕೃಷ್ಣನಾಯ್ಕ್ -ಮೈಲಿಬಾಯಿ ದಂಪತಿಯ ಮನೆಗೆ ಮಂಗಳವಾರ ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಕುರಿಯನ್ ಮತ್ತು ತಂಡ ಭೇಟಿ ನೀಡಿ 1 ಲಕ್ಷ ರೂಪಾಯಿ ಹಣ ನೀಡಿದ್ದಾರೆ.
ಈ ಘೋರ ದುರಂತದಲ್ಲಿ ಮೃತಪಟ್ಟ ಕೃಷ್ಣನಾಯ್ಕ್ -ಮೈಲಿಬಾಯಿ ದಂಪತಿಯ ಮೂವರು ಮಕ್ಕಳಿಗೆ ಉನ್ನತ ಶಿಕ್ಷಣ ಪಡೆದು ಉದ್ಯೋಗಕ್ಕೆ ಸೇರುವ ತನಕ ಉಚಿತ ಶಿಕ್ಷಣ, ಹಾಸ್ಟೆಲ್ ವ್ಯವಸ್ಥೆ ಹಾಗೂ ಉದ್ಯೋಗ ಕಲ್ಪಿಸುವ ಜವಬ್ದಾರಿಯನ್ನು ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಅವರು ಹೊತ್ತುಕೊಂಡಿದ್ದು, ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಈ ಮಾನವೀಯ ಕೊಡುಗೆಯನ್ನು ಮಕ್ಕಳು ಒಪ್ಪಿದ್ದಾರೆ ಎಂದು ಹೇಳಲಾಗಿದೆ.
'ಪ್ರಸಾದಕ್ಕೆ ವಿಷ ಹಾಕಿದ್ದು ನಾನೇ': ತಪ್ಪೊಪ್ಪಿಕೊಂಡ ಅರ್ಚಕ ದೊಡ್ಡಯ್ಯ?
ದುರಂತದಲ್ಲಿ ಮೃತಪಟ್ಟ ದಂಪತಿಯ ಹಿರಿಯ ಮಗಳು ರಾಣಿಬಾಯಿ ಬಿಎಸ್ಸಿ , ಎರಡನೇ ಮಗಳು ಪ್ರಿಯಾಬಾಯಿ ಬಿಎಸ್ ಸಿ ನರ್ಸಿಂಗ್ ಹಾಗೂ ಮಗ ರಾಜೇಶ್ ನಾಯ್ಕ್ ಅವರ ಪಿಯುಸಿ ವ್ಯಾಸಂಗವನ್ನು ಆಳ್ವಾಸ್ ಶಿಕ್ಷ ಣ ಪ್ರತಿಷ್ಠಾನದಲ್ಲಿ ಉಚಿತವಾಗಿ ನೀಡುವ ಬಗ್ಗೆ ಮನವರಿಕೆ ಮಾಡಿದ್ದು ಅದಕ್ಕೆ ಅವರೂ ಸಮ್ಮತಿ ಸೂಚಿಸಿದ್ದಾರೆ.
ವಿಷಪ್ರಸಾದ ಪ್ರಕರಣ: ತಡರಾತ್ರಿ ಸಾಲೂರು ಮಠದ ಶ್ರೀಗಳು ಪೊಲೀಸ್ ಕಸ್ಟಡಿಗೆ
ಪದವಿ ಕಾಲೇಜಿನ ಪ್ರಾಂಶುಪಾಲ ಡಾ ಕುರಿಯನ್ ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ ಯತಿಕುಮಾರ್ ಸ್ವಾಮಿ ಗೌಡ , ಕಾಮರ್ಸ್ ಡೀನ್ ಪ್ರಶಾಂತ್ ಹಾಗೂ ಉಪನ್ಯಾಸಕ ಅಂಬರೀಶ್ ಅವರು ನಿಯೋಗ ಕೃಷ್ಣನಾಯ್ಕ್-ಮೈಲಿಬಾಯಿ ದಂಪತಿಯ ಮನೆಗೆ ಭೇಟಿ ನೀಡಿ ಮಕ್ಕಳಿಗೆ ಸಾಂತ್ವನ ಹೇಳಿದರು.