ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜನಾರ್ಧನ ಪೂಜಾರಿಯನ್ನು ಎನ್ ಕೌಂಟರ್ ನಲ್ಲಿ ಕೊಲ್ಲಬೇಕು, ವೈರಲ್ ಆದ ವಾಯ್ಸ್ ಮೆಸೇಜ್

|
Google Oneindia Kannada News

Recommended Video

ಜನಾರ್ಧನ ಪೂಜಾರಿಗೆ ವಾಯ್ಸ್ ಮೆಸೇಜ್ ಮೂಲಕ ಜೀವ ಬೆದರಿಕೆ | Oneindia Kannada

ಮಂಗಳೂರು, ಡಿಸೆಂಬರ್. 03: ಶ್ರೀರಾಮ ಮಂದಿರ ನಿರ್ಮಾಣದ ಕುರಿತು ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ಧನ ಪೂಜಾರಿ ನೀಡಿದ ಹೇಳಿಕೆ ಬಗ್ಗೆ ಕಾಂಗ್ರೆಸ್ ಪಾಳಯದಲ್ಲೇ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಭಾನುವಾರ (ಡಿ.02) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಜನಾರ್ಧನ ಪೂಜಾರಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಆಗಿಯೇ ಆಗುತ್ತದೆ ಎಂದು ಹೇಳಿಕೆ ನೀಡಿದ್ದರು.

ರಾಮ ಮಂದಿರ ವಿಚಾರದಲ್ಲಿ ರಾಜಕೀಯ ಬೇಡ: ಬಿ.ಜನಾರ್ಧನ ಪೂಜಾರಿರಾಮ ಮಂದಿರ ವಿಚಾರದಲ್ಲಿ ರಾಜಕೀಯ ಬೇಡ: ಬಿ.ಜನಾರ್ಧನ ಪೂಜಾರಿ

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮುಖಂಡನೊಬ್ಬ ಜನಾರ್ಧನ ಪೂಜಾರಿಯನ್ನು ಎನ್ ಕೌಂಟರ್ ಮಾಡಿ ಕೊಲ್ಲಬೇಕೆಂದು ಹೇಳಿರುವ ವಾಯ್ಸ್ ಮೆಸೇಜ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.

Unknown person threaten Janardhana Poojary in social media

ಜನಾರ್ಧನ ಪೂಜಾರಿ ಆರ್ ಎಸ್ ಎಸ್ ಜೊತೆಗೆ ನಂಟು ಹೊಂದಿದ್ದಾರೆ. ಅವರು ಕಾಂಗ್ರೆಸ್ಸಿನಲ್ಲಿ ಸೋಲಲು ಇದೇ ವರ್ತನೆ ಕಾರಣ. ರಾಮ ಮಂದಿರದ ಪರವಾಗಿ ಮಾತನಾಡಿ ಬಿಜೆಪಿ ಮತ್ತು ಆರ್ ಎಸ್ ಎಸ್ ಜೊತೆಗಿನ ನಂಟನ್ನು ಬಹಿರಂಗಪಡಿಸಿದ್ದಾರೆ.

'ರಾಮ ಮಂದಿರ ನಿರ್ಮಾಣಕ್ಕೆ ಮುಸ್ಲಿಮರೂ ವಿರೋಧ ವ್ಯಕ್ತಪಡಿಸುವುದಿಲ್ಲ''ರಾಮ ಮಂದಿರ ನಿರ್ಮಾಣಕ್ಕೆ ಮುಸ್ಲಿಮರೂ ವಿರೋಧ ವ್ಯಕ್ತಪಡಿಸುವುದಿಲ್ಲ'

ಇಂಥ ವ್ಯಕ್ತಿಯನ್ನು ದೇಶದಲ್ಲಿ ಬದುಕಲು ಬಿಡಬಾರದು. ಎನ್ ಕೌಂಟರ್ ನಡೆಸಿ ಸಾಯಿಸಬೇಕು. ಜೊತೆಗೆ ರಾಮ ಮಂದಿರದ ಪರವಾಗಿ ಮಾತನಾಡುವವರನ್ನು ಕೊಲ್ಲಬೇಕು. ಜನಾರ್ಧನ ಪೂಜಾರಿಯನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಹೇಳಿಕೊಂಡಿದ್ದಾನೆ.

ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಮರ ಬೆಂಬಲ : ಕಾಂಗ್ರೆಸ್ ಮುಖಂಡಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಮರ ಬೆಂಬಲ : ಕಾಂಗ್ರೆಸ್ ಮುಖಂಡ

ಈ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನಾರ್ಧನ ಪೂಜಾರಿ ವಿರುದ್ಧ ಮಾತನಾಡಿದ ವ್ಯಕ್ತಿಯ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೆ ಈ ವಾಯ್ಸ್ ಮೆಸೇಜ್ ನಲ್ಲಿ ಮಾತನಾಡಿರುವ ವ್ಯಕ್ತಿ ಯಾರು ಎಂಬುದು ಈವರೆಗೂ ತಿಳಿದು ಬಂದಿಲ್ಲ.

English summary
Unknown person threaten Congress senior leader Janardhana Poojary in social media. Voice record of this now viral in social media.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X