ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ಸಮಾವೇಶದಲ್ಲಿ ವಂದೇ ಮಾತರಂ ಗೀತೆ ಅರ್ಧಕ್ಕೆ ಮೊಟಕು

By ಕಿರಣ್ ಸಿರ್ಸೀಕರ್
|
Google Oneindia Kannada News

ಮಂಗಳೂರು, ಏಪ್ರಿಲ್ 27: ಬಂಟ್ವಾಳದಲ್ಲಿ ಇಂದು ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ವಂದೇ ಮಾತರಂ ಗೀತೆಯನ್ನು ಅರ್ಧಕ್ಕೆ ಮೊಟಕುಗೊಳಿಸಿದ ಘಟನೆ ನಡೆದಿದೆ.

ಆಗಿದ್ದೇನು?

ಬಂಟ್ವಾಳದಲ್ಲಿ ಇಂದು ಕಾಂಗ್ರೆಸ್ ಸಮಾವೇಶ ಆರಂಭವಾಗುವಾಗ ತಡವಾಗಿತ್ತು. ಹೀಗಾಗಿ ಕಾಂಗ್ರೆಸ್ ನಾಯಕರು ಕಾರ್ಯಕ್ರಮ ಮುಗಿಸುವ ತರಾತುರಿಯಲ್ಲಿದ್ದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮ ಆರಂಭಕ್ಕೂ ಮುನ್ನ ಇದೀಗ ವಂದೇ ಮಾತರಂ ಗೀತೆ ಎಂದು ಕಾರ್ಯಕ್ರಮ ನಿರೂಪಕರು ಘೋಷಿಸಿದರು.

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ? ಇಲ್ಲಿವೆ ಮುಖ್ಯಾಂಶಗಳು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ? ಇಲ್ಲಿವೆ ಮುಖ್ಯಾಂಶಗಳು

ಈ ಸಂದರ್ಭ, 'ಸಮಯ ಕಳೆಯುತ್ತಿದೆ ವಂದೇ ಮಾತರಂ ಗೀತೆ ಬೇಕಾ?' ಎಂದು ರಾಹುಲ್ ಗಾಂಧಿ ವಾಚ್ ತೋರಿಸಿ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ರನ್ನು ಪ್ರಶ್ನಿಸಿದ್ದಾರೆ.

ವಂದೇ ಮಾತರಂ ಕೇಳುವಷ್ಟು ವ್ಯವಧಾನವೂ ಇರಲಿಲ್ಲವೆ ರಾಹುಲ್ಗೆ?ವಂದೇ ಮಾತರಂ ಕೇಳುವಷ್ಟು ವ್ಯವಧಾನವೂ ಇರಲಿಲ್ಲವೆ ರಾಹುಲ್ಗೆ?

ಆಗ ಒಂದೆರಡು ಸಾಲು ಹಾಡಿ ಎಂದು ವೇಣುಗೋಪಾಲ್ ಹಾಡುವವರಿಗೆ ಸೂಚನೆ ನೀಡಿದ್ದಾರೆ. ನಂತರ ವೇಣುಗೋಪಾಲ್ ಸೂಚನೆ ಮೇರೆಗೆ ವಂದೇ ಮಾತರಂ ಗಾಯನವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿದೆ.

English summary
Karnataka assembly elections 2018: The Vande Mataram song has been cut to half at the Congress rally in Bantwal today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X