ಬಾಳಿಗಾ ಕೊಲೆ ಪ್ರಕರಣ ಮರು ತನಿಖೆಗೆ ಸಂಬಂಧಿಕರ ಆಗ್ರಹ
ಆರ್.ಟಿ.ಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಸಂಬಂಧಿಕರು ಆಗ್ರಹಿಸಿದ್ದಾರೆ. ಈ ಸಂಬಂಧ ಬಾಳಿಗ ಸಹೋದರಿ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.
ಮಂಗಳೂರು, ಮಾರ್ಚ್ 28: ಆರ್.ಟಿ.ಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಸಂಬಂಧಿಕರು ಆಗ್ರಹಿಸಿದ್ದಾರೆ. ಈ ಸಂಬಂಧ ಎರಡನೇ ಜ್ಯೂಡಿಷಿಯಲ್ ಮ್ಯಾಜಿಸ್ಟ್ರೇಟಿನ ಪ್ರಥಮ ದರ್ಜೆ (ಜೆಎಂಎಫ್ ಸಿ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.
ಈ ಕುರಿತು ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿರುವ ವಿನಾಯಕ ಬಾಳಿಗಾ ಸಹೋದರಿ ಅನುರಾಧಾ, ತಮಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿದ್ದಾರೆ. ಸಹೋದರನ ಕೊಲೆ ಪ್ರಕರಣದ ಹಿಂದಿನ ಸತ್ಯಾಂಶವನ್ನು ಬೇಧಿಸಿ ತನಿಖೆ ನಡೆಸಲು ಪೊಲೀಸರು ಮುಂದಾಗುತ್ತಿಲ್ಲ ಎಂದು ದೂರಿರುವ ಅನುರಾಧಾ, ಈ ಪ್ರಕರಣದಲ್ಲಿ ಶಾಮೀಲಾಗಿರುವ ಎಲ್ಲಾ ಆರೋಪಿಗಳನ್ನು ಬಂಧಿಸಬೇಕೆಂದು ಅರ್ಜಿಯಲ್ಲಿ ಆಗ್ರಹಿಸಿದ್ದಾರೆ.[ಬಾಳಿಗಾ ಕೊಲೆ ಆರೋಪಿ ನರೇಶ್ ಶೆಣೈ ಮೇಲೆ ಮತ್ತೊಂದು ಎಫ್ಐಆರ್]

ಎಪ್ರಿಲ್ 22ರಂದು ಈ ಕುರಿತ ತಕರಾರು ಅರ್ಜಿಯನ್ನು ಸಲ್ಲಿಸುವಂತೆ ನ್ಯಾಯಾಧೀಶರು ಬಾಳಿಗಾ ಸಹೋದರಿಗೆ ಸೂಚಿಸಿದ್ದಾರೆ.
ಕಳೆದ ವರ್ಷ (2016) ಮಾರ್ಚ್ 21ರಂದು ಕೊಡಿಯಾಲಬೈಲಿನಲ್ಲಿ ತನ್ನ ಮನೆ ಮುಂಭಾಗ ದುಷ್ಕರ್ಮಿಗಳಿಂದ ವಿನಾಯಕ ಬಾಳಿಗಾ ಹತ್ಯೆಗೀಡಾಗಿದ್ದರು. ಈ ಪ್ರಕರಣದಲ್ಲಿ ಪೊಲೀಸರು ನಮೋ ಬ್ರಿಗೇಡ್ ಸಂಘಟನೆ ಸ್ಥಾಪಕ ಹಾಗೂ ಸದ್ಯ ಯುವ ಬ್ರಿಗೇಡಿನಲ್ಲಿ ತೊಡಗಿಸಿಕೊಂಡಿರುವ ನರೇಶ್ ಶೆಣೈ ಮತ್ತು ಆತನ ಆರು ಮಂದಿ ಸಹಚರರನ್ನು ಬಂಧಿಸಿದ್ದರು. ಈಗಾಗಲೇ ಇವರೆಲ್ಲರ ವಿರುದ್ಧ ಪ್ರಾಥಮಿಕ ಚಾರ್ಜಶೀಟ್ ದಾಖಲಿಸಲಾಗಿದೆ.[ಪುತ್ರ ಶೋಕಂ ನಿರಂತರಂ, ಬಾಳಿಗ ಅವರ ತಾಯಿ ನಿಧನ]
ಕೆಲ ದಿನಗಳ ಹಿಂದೆ ಅನುರಾಧಾ ಬಾಳಿಗಾ ಮತ್ತು ದೇಶಪ್ರೇಮಿ ಸಂಘಟನೆಗಳ ಒಕ್ಕೂಟದ ಸದಸ್ಯರು ಮಂಗಳೂರಿನ ರಥಬೀದಿಯಿಂದ ಬಾಳಿಗಾ ನಿವಾಸದವರೆಗೆ ಕಾಲ್ನಡಿಗೆ ಮೆರವಣಿಗೆ ನಡೆಸಿದ್ದರು. ಬಾಳಿಗಾ ಕೊಲೆ ನಡೆದು ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇದನ್ನು ಆಯೋಜಿಸಲಾಗಿತ್ತು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications