ಬಂಟ್ವಾಳದಲ್ಲಿ ಯುವಕರಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು
ಮಂಗಳೂರು, ಡಿಸೆಂಬರ್ 12: ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಯುವಕರ ಮೇಲೆ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.
ಮಹಿಳೆಗೆ ಮೊಬೈಲ್ ಸಂದೇಶ ಕಳಿಸಿದ ಯುವಕನಿಗೆ ಆಕೆ ಸೋದರರಿಂದ ಒದೆ
ಬಂಟ್ವಾಳದ ಕೈಕಂಬದಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳ ತಂಡ ಮೂರು ಮಂದಿ ಯುವಕರಿಗೆ ಚೂರಿಯಿಂದ ಇರಿದು ಪರಾರಿಯಾಗಿದೆ. ಘಟನೆಯಲ್ಲಿ ಅನ್ಸಾರ್ (23) ಸಫ್ವಾನ್ (23) ಫಯಾಝ್ (23) ಎಂಬುವವರು ಗಾಯಗೊಂಡಿದ್ದಾರೆ.
ನಿನ್ನೆ ಮಂಗಳವಾರ ರಾತ್ರಿ (ಡಿಸೆಂಬರ್ 11)ಕಾರಿನಲ್ಲಿ ಬಂದ 5 ಮಂದಿ ದುಷ್ಕರ್ಮಿಗಳ ತಂಡ ಈ ಕೃತ್ಯ ಎಸಗಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ಕೈಕಂಬ ಬಳಿ ನಿಂತಿದ್ದ ಅಸ್ಸಾರ್ , ಸಫ್ವಾನ್ ಹಾಗು ಫಯಾಝ್ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ನಂತರ ಮೂವರಿಗೂ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.
ಕರ್ಜೆ ಅರ್ಚಕರ ಬಟ್ಟೆ ಕಳಚಿ ಥಳಿಸಿದ ಬಿಜೆಪಿ ಕಾರ್ಯಕರ್ತರು
ಘಟನೆಯಲ್ಲಿ ಗಾಯಗಂಡ ಈ ಮೂವರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.