Get Updates
Get notified of breaking news, exclusive insights, and must-see stories!

ಮಂಗಳೂರು: ಜಾತ್ರೆ ಮುಗಿಸಿ ಮನೆಗೆ ಬರುವವರು ಮಸಣ ಸೇರಿದರು

ಮಂಗಳೂರು, ಮೇ 11 : ಕಾರ್ಕಳದ ಕಬಕಾರು ಈಶ್ವರ ಜಾತ್ರೆ ಮುಗಿಸಿಕೊಂಡು ವಾಪಸ್ ಮನೆಗೆ ಬರುತ್ತಿದ್ದವರು ಮಸಣ ಸೇರಿದ್ದಾರೆ.

ಗುರುವಾರ ನಸುಕಿನ ಜಾವ 2:30ರ ಸುಮಾರಿಗೆ ಕಾರ್ಕಳದ ಕಬಕಾರು ಈಶ್ವರ ಜಾತ್ರೆ ಮುಗಿಸಿಕೊಂಡು ಬೈಕ್ ನಲ್ಲಿ ವಾಪಸ್ ಮನೆಗೆ ವಾಪಸ್ ಬರುತ್ತಿವ ವೇಳೆ ಲಾರಿಯೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

12-year-old among three killed in ghastly accident at Kalladka in Mangaluru

ಹರೀಶ್ ನಾಯ್ಕ(30), ಪುತ್ತೂರಿನ ಸ್ವರ್ಗ ನಿವಾಸಿ ನಾರಾಯಣ(38) ವಿಶ್ವಾಸ್(12) ಮೃತ ದುರ್ದೈವಿಗಳು. ಮೂವರು ಕಾರ್ಕಳದ ಕಬಕಾರು ಈಶ್ವರ ಜಾತ್ರೆ ಮುಗಿಸಿಕೊಂಡು ಬೈಕ್ ನಲ್ಲಿ ವಾಪಸ್ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಮಾಣಿ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಮೀನು ಸಾಗಾಟದ ಲಾರಿ ಬೈಕ್ ಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಲಾರಿ ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.

ಈ ಬಗ್ಗೆ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+