ಮಂಗಳೂರು; ಪಬ್ ಜಿ ಆಡಲು ಹೋದ ಬಾಲಕ ಶವವಾಗಿ ಪತ್ತೆ!
ಮಂಗಳೂರು, ಏಪ್ರಿಲ್ 4; ಪಬ್ ಜಿ ಆಡಲು ಮನೆಯಿಂದ ಹೊರ ಹೋಗಿದ್ದ ಬಾಲಕ ಶವವಾಗಿ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಾಲಕನ ಜೊತೆ ಆಟವಾಡುತ್ತಿದ್ದ ಆತನ ಸ್ನೇಹಿತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
12 ವರ್ಷದ ಬಾಲಕ ಹಕೀಫ್ ಶವ ಭಾನುವಾರ ಮುಂಜಾನೆ ಉಳ್ಳಾಲದ ಕೆ. ಸಿ. ರೋಡ್ನ ಮೈದಾನದವೊಂದರ ಮೂಲೆಯಲ್ಲಿ ಪತ್ತೆಯಾಗಿದೆ. ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಆಟವಾಡಲು ಹೋಗುತ್ತೇನೆ ಎಂದು ಹಕೀಫ್ ಮನೆಯಿಂದ ಹೊರ ಹೋಗಿದ್ದ.
ಬಾಲಕನ ಶವದ ಮೇಲೆ ಗಾಯದ ಗುರುತು ಇದೆ. ಕಲ್ಲಿನಿಂದ ಜಜ್ಜಿದ ಗಾಯವಿದೆ. ಶವವನ್ನು ಎಲೆಯಿಂದ ಮುಚ್ಚಿಡುವ ಪ್ರಯತ್ನ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಟವಾಡಲು ಹೋದ ಬಾಲಕ ತಡರಾತ್ರಿಯಾದರೂ ವಾಪಸ್ ಬಂದಿರಲಿಲ್ಲ. ಎಲ್ಲಿ ಹುಡುಕಿದರೂ ಸಿಕ್ಕಿರಲಿಲ್ಲ. ಪೋಷಕರು ಪೊಲೀಸ್ ಠಾಣೆಗೆ ನಾಪತ್ತೆ ದೂರು ಸಲ್ಲಿಕೆ ಮಾಡಿದ್ದರು. ಹಕೀಫ್ ಜೊತೆ ಆಟವಾಡುತ್ತಿದ್ದ ಸ್ನೇಹಿತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಹಕೀಫ್ಗೆ ಪಬ್ ಜಿ ಸೇರಿದಂತೆ ವಿಡಿಯೋ ಗೇಮ್ ಆಡುವುದು ಬಹಳ ಇಷ್ಟವಾಗಿತ್ತು. ಗೆಳೆಯರ ಜೊತೆ ಸೇರಿ ಆನ್ಲೈನ್ನಲ್ಲಿಯೇ ವಿಡಿಯೋ ಗೇಮ್ ಆಡುತ್ತಿದ್ದ. ಯಾವಾಗಲೂ ನೀನು ಗೆಲ್ಲುತ್ತೀಯಾ, ನಿನ್ನ ಆಟ ಬೇರೆಯವರು ಆಡುತ್ತಾರೆ ಎಂದು ಸ್ನೇಹಿತರ ಜೊತೆ ಜಗಳವೂ ನಡೆದಿತ್ತು.
ಶನಿವಾರ ನಮ್ಮ ಜೊತೆಗೆ ಬಂದು ಆಟವಾಡಬೇಕು ಎಂದು ಹಕೀಫ್ ಕರೆಸಲಾಗಿತ್ತು ಎಂಬ ಮಾಹಿತಿ ಇದೆ. ಆದರೆ, ಕೊಲೆ ಮಾಡಿದವರು ಯಾರು? ಎಂಬ ಮಾಹಿತಿ ತನಿಖೆಯಿಂದ ಬಹಿರಂಗವಾಗಬೇಕಿದೆ.
-
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ












Click it and Unblock the Notifications