ಆಳ್ವಾಸ್ ನುಡಿಸಿರಿಯಲ್ಲಿ ಸಾಂಸ್ಕೃತಿಕ ಜಾತ್ರೆ ಆರಂಭ
ಮೂಡುಬಿದಿರೆ, ನವೆಂಬರ್, 18: ಸಾಹಿತ್ಯಿಕ, ಸಾಂಸ್ಕೃತಿಕ ರಾಷ್ಟ್ರೀಯ ಸಮ್ಮೇಳನ ನುಡಿಜಾತ್ರೆ 13ನೆ ವರ್ಷದ 'ಆಳ್ವಾಸ್ ನುಡಿಸಿರಿ' ಶುಕ್ರವಾರ ಆರಂಭಗೊಂಡಿದೆ. ಮೂರು ದಿನಗಳ ಕಾಲ ಹಲವು ಸಿರಿಗಳ ಕೂಡುವಿಕೆಯಲ್ಲಿ
'ಕರ್ನಾಟಕ: ನಾಳೆಗಳ ನಿರ್ಮಾಣ' ಎಂಬ ಪರಿಕಲ್ಪನೆಯೊಂದಿಗೆ ಅನಾವರಣಗೊಂಡಿದೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಮೂರು ದಿನಗಳು ನಡೆಯುವ 'ಆಳ್ವಾಸ್ ನುಡಿಸಿರಿ-2016' ನಾಡು ನುಡಿ ಸಮ್ಮೇಳನಕ್ಕೆ ವಿದ್ಯಾಗಿರಿಯ ಆವರಣವು ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.

ಹೊಸ ಶೈಲಿಯ ರತ್ನಾಕರ ವರ್ಣಿ ವೇದಿಕೆ
ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ವಿದ್ಯಾಗಿರಿಯಲ್ಲಿ ಹೊಸ ಶೈಲಿಯ ಸ್ವಾಗತಗೋಪುರವನ್ನು ನಿರ್ಮಿಸಲಾಗಿದೆ. ಗುತ್ತಿನ ಮನೆಯ ಛಾವಣಿಯ ಮಾದರಿಯಲ್ಲಿ ಛಾವಣಿ ಅಳವಡಿಸಲಾಗಿದ್ದು, ಬೃಹತ್ ಮಟ್ಟದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ನುಡಿಸಿರಿ ನಡೆಯುವ ರತ್ನಾಕರವರ್ಣಿ ವೇದಿಕೆಯ ಪಕ್ಕದಲ್ಲಿ ವ್ಯವಸ್ಥೆ ಮಾಡಲಾಗಿದೆ. ಆಳ್ವಾಸ್ ನ ಸಾಂಪ್ರದಾಯಿಕ ಶೈಲಿಯ ಅಲಂಕಾರಗಳಾದ ಬಣ್ಣದ ಬಟ್ಟೆಗಳ ಪೂಕರೆ, ವಿದ್ಯುತ್ ದೀಪಾಲಂಕೃತಗೊಂಡು ಸಜ್ಜಾಗಿದೆ.

ಹಾಲಂಬಿ ಸಭಾಂಗಣದಲ್ಲಿ ಚಿಂತನ-ಮಂಥನ
ಖ್ಯಾತ ವಿಮರ್ಶಕರು ಮತ್ತು ಸಂಸ್ಕೃತಿ ಚಿಂತಕಿ ಡಾ.ಬಿ.ಎನ್.ಸುಮಿತ್ರಾಬಾಯಿ ಸರ್ವಾಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದ್ದು, ಬೆಳಗ್ಗೆ 8ರಿಂದ ಸಂಜೆ 6ರವರೆಗೆ ಸಾಹಿತ್ಯ, ಸಂಸ್ಕೃತಿ, ಭಾಷೆ, ಸಮಾಜ, ನೆಲ-ಜಲ, ಆರೋಗ್ಯ-ಆಹಾರ, ಸಂಸ್ಮರಣೆ, ಹಿರಿಯರ ಸ್ಮರಣೆ, ನಮ್ಮ ಕತೆ ನಿಮ್ಮ ಜೊತೆ ಮುಂತಾದುವುಗಳ ಕುರಿತು ಚಿಂತನ-ಮಂಥನ ಮೂಡುಬಿದಿರೆಯ ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯ ಪುಂಡಲೀಕ ಹಾಲಂಬಿ ಸಭಾಂಗಣದಲ್ಲಿ ನೆಡೆಯಲಿದೆ

ಒಟ್ಟು ವೇದಿಕೆಗಳೆಷ್ಟು?
ರತ್ನಾಕರವರ್ಣಿ ವೇದಿಕೆ, ಕೆ.ವಿ.ಸುಬ್ಬಣ್ಣ ಬಯಲು ರಂಗಮಂದಿರ, ಸಿದ್ಧಕಟ್ಟೆ ವಿಶ್ವನಾಥ ಶೆಟ್ಟಿ ವೇದಿಕೆ, ಡಾ.ಶಿವರಾಮ ಕಾರಂತ ವೇದಿಕೆ, ಮಿಜಾರು ಅಣ್ಣಪ್ಪ ವೇದಿಕೆ, ಬೋಲ ಚಿತ್ತರಂಜನದಾಸ್ ಶೆಟ್ಟಿ ವೇದಿಕೆ, ಸುಬಾಶ್ಚಂದ್ರ ಪಡಿವಾಳ್ ವೇದಿಕೆ, ಕು.ಶಿ.ಹರಿದಾಸ ಭಟ್ಟ ವೇದಿಕೆ, ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ ವೇದಿಕೆ ಮತ್ತು ಕುವೆಂಪು ಸಭಾಂಗಣದಲ್ಲಿ ಹೀಗೆ ಒಟ್ಟು ಹತ್ತು ವೇದಿಕೆಗಳಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ.

12 ಸಿನೆಮಾಗಳ ಪ್ರದರ್ಶನ
ಈ ಬಾರಿಯ ನುಡಿಸಿರಿಯಲ್ಲಿ ಇದೇ ಮೊದಲನೆಯ ಬಾರಿ ನಾಲ್ಕು ದಿನಗಳ ಕಾಲ ಗುಬ್ಬಚ್ಚಿ ಗಳು, ನಾನು ನನ್ನ ಕನಸು, ಸಿಂಹದ ಮರಿ ಸೈನ್ಯ, ಬಂಗಾರದ ಮನುಷ್ಯ, ಅಮೇರಿಕಾ ಅಮೇರಿಕಾ, ದ್ವೀಪ, ಡಿಸೆಂಬರ್-1, ಅಮೃತಧಾರೆ, ಪುಷ್ಪಕ ವಿಮಾನ, ಕಸ್ತೂರಿ ನಿವಾಸ, ಸತ್ಯಹರೀಶ್ಚಂದ್ರ ಮತ್ತು ನಾಗರಹಾವು 12 ಸಿನೆಮಾಗಳು ಪ್ರದರ್ಶನಗೊಳ್ಳಲಿದ್ದು, ಸಿನಿಪ್ರಿಯರ ಮನಸೂರೆಗೊಳ್ಳಲಿದೆ.
ಇನ್ನೂ ಈ ಬಾರಿಯ ಕೃಷಿಸಿರಿಯಲ್ಲಿ ಶ್ವಾನ ಮತ್ತು ಫಲಪುಷ್ಪ ಪಶುಗಳ ಪ್ರದರ್ಶನವೂ ನಡೆಯಲಿದ್ದು, ನುಡಿಸಿರಿಗೆ ಸಾಥ್ ನೀಡಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications