ಪುತ್ತೂರಿನ ಶ್ರಾವ್ಯ ಪತ್ರಕ್ಕೆ ಪ್ರಧಾನಿ ಸಚಿವಾಲಯ ಸ್ಪಂದನೆ
ಮಂಗಳೂರು, ಡಿಸೆಂಬರ್. 31 : ಈಕೆಗಿನ್ನು 13 ನೇ ವಯಸ್ಸು. ಶಾಲೆಗೆ ಹೋಗುತ್ತಾ ಆಟವಾಡಬೇಕಾದ ವಯಸ್ಸು. ಆದರೆ ಈಕೆ ಎಲ್ಲರಂತಲ್ಲ. ಶಾಲೆಗೆ ಹೋಗುತ್ತಾ ತನ್ನ ಊರಿನ ಅಭಿವೃದ್ಧಿ ಬಗ್ಗೆ ಯೋಚಿಸುವವಳು. ಈಕೆಯ ಊರಿನ ರಸ್ತೆಯೊಂದು ಅಭಿವೃದ್ಧಿ ಕಾಣದೆ ಅನೇಕ ವರ್ಷಗಳಾಗಿತ್ತು. ಇದಕ್ಕೆ ಈ ಹುಡುಗಿ ಮಾಡಿದ್ದೇನು ಗೊತ್ತಾ?
ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ನಿವಾಸಿ ಆರ್.ಬಿ. ಸುವರ್ಣರ ಪುತ್ರಿ 8ನೇ ತರಗತಿಯಲ್ಲಿ ಓದುತ್ತಿರುವ ಶ್ರಾವ್ಯ ತನ್ನ ಊರಿನ ರಸ್ತೆ ದುರಸ್ತಿಗೊಳಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದು ಭೇಷ್ ಎನ್ನಿಸಿಕೊಂಡಿದ್ದಾಳೆ.
ಈ ಪತ್ರಕ್ಕೆ ಸ್ಪಂದಿಸಿದ ಪ್ರಧಾನಿ ಸಚಿವಾಲಯ, ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದು ದೂರನ್ನು ತುರ್ತಾಗಿ ಪರಿಶೀಲಿಸಿ ಕ್ರಮ ಕೈಗೊಂಡು ವರದಿ ನೀಡುವಂತೆ ಆದೇಶಿಸಿದೆ.

ಪತ್ರ ಬರೆಯಲು ಕಾರಣ ಏನು?: ಪುತ್ತೂರು ನಗರದಿಂದ ಪಾಣಾಜೆ ಮೂಲಕ ಕೇರಳಕ್ಕೆ ಸಂಪರ್ಕಿಸುವ ಜಿಲ್ಲಾ ಪಂಚಾಯತ್ ರಸ್ತೆಯೊಂದನ್ನು ನಿರ್ಮಿಸಿ ಅನೇಕ ವರ್ಷಗಳಾಗಿತ್ತು.
ಈ ರಸ್ತೆಯು ಪುತ್ತೂರಿನಿಂದ ಸುಮಾರು 5 ಕಿ.ಮೀ ದೂರದಲ್ಲಿದೆ. ಈ ಹಾದಿಯಲ್ಲಿ ಬರುವ ದೇವಸ್ಯದಿಂದ ಚೆಲ್ಯಡ್ಕ ತನಕ ಸುಮಾರು 4 ಕಿ.ಮೀ ರಸ್ತೆ ತೀರಾ ಹದೆಗೆಟ್ಟಿದೆ.
ಬಳ್ಳೇರಿ ರಕ್ಷಿತಾರಣ್ಯ ಪ್ರದೇಶದಲ್ಲಿ ಸಾಗುವ ಕಾರಣ ಮಳೆ ನೀರಿನ ಹರಿಯುವಿಕೆಯಿಂದ ರಸ್ತೆ ಕೆಟ್ಟು ಹೋಗಿದೆ. ಅಲ್ಲದೇ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದೆ. ಹೀಗಾಗಿ ರಸ್ತೆಯಲ್ಲಿನ ಟಾರು ಕಿತ್ತು ಹೋಗಿದೆ.
ಅಲ್ಲದೇ ಈ ರಸ್ತೆ ಸಂಪೂರ್ಣ ಹೊಂಡಮಯವಾಗಿದ್ದು ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿದೆ. ಈ ರಸ್ತೆಯಲ್ಲಿ ಖಾಸಗಿ ಬಸ್ಸುಗಳು ಮಾತ್ರ ಓಡಾಡುತ್ತವೆ.
ಸರ್ಕಾರಿ ಬಸ್ಸುಗಳ ಓಡಾಟ ಇಲ್ಲವೇ ಇಲ್ಲ. ಹೀಗಾಗಿ ನಗರವನ್ನ ಸಂಪರ್ಕಿಸಲು ಈ ರಸ್ತೆಯನ್ನು ದುರಸ್ಥಿ ಮಾಡಿ ಎಂದು ಗ್ರಾಮಸ್ಥರು ಕಳೆದ ವರ್ಷ ಪ್ರತಿಭಟನೆಯನ್ನು ಸಹ ಮಾಡಿದ್ದರು.
ಆದರೆ, ಯಾವ ಅಧಿಕಾರಿಗಳು ಸ್ಪಂದಿಸಿರಲಿಲ್ಲ. ಇದನ್ನು ಕಂಡ ಬಾಲಕಿ ಶ್ರಾವ್ಯ ನೇರವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾಳೆ.
ಪತ್ರದಲ್ಲಿ ಶ್ರಾವ್ಯ ಬರೆದಿದ್ದೇನು?: 'ನಮ್ಮ ಊರಿನ ರಸ್ತೆ ತೀರಾ ಹದಗೆಟ್ಟಿದೆ. ಕಳೆದ ಕೆಲ ವರ್ಷಗಳಿಂದ ರಸ್ತೆ ದುರಸ್ತಿ ಕಂಡಿಲ್ಲ. ರಸ್ತೆ ದುರಸ್ಥಿ ಮಾಡಿ ಎಂದು ನಾವೆಲ್ಲರೂ ಸೇರಿ ಪ್ರತಿಭಟನೆಯನ್ನು ಮಾಡಿದ್ದೇವು.
ಆದರೆ, ಅನುದಾನ ನೀಡುವುದಾಗಿ ಅಧಿಕಾರಿಗಳು ಭರವಸೆ ನೀಡುತ್ತಾರೆಯೇ ವಿನಹ ರಸ್ತೆಯನ್ನು ದುರಸ್ಥಿ ಮಾಡುತ್ತಿಲ್ಲ. ಹೊಂಡ- ಗುಂಡಿಗಳಿಂದ ತುಂಬಿದ ರಸ್ತೆಯಲ್ಲಿ ನಮಗೆ ಓಡಾಡಲು ಕಷ್ಟವಾಗುತ್ತಿದೆ.
ಬಸ್ಸು ನಿಧಾನಕ್ಕೆ ಚಲಿಸುವ ಕಾರಣ ಹಾಗೂ ರಸ್ತೆಯ ದುಸ್ಥಿತಿ ಕಂಡು ಬಸ್ಸುಗಳು ಬಾರದೇ ಇರುವುದರಿಂದ ನಮಗೆ ತೀವ್ರ ತೊಂದರೆಯಾಗಿದೆ. ದಯವಿಟ್ಟು ನಮ್ಮ ದೇವಸ್ಯ- ಚೆಲ್ಯಡ್ಕ ರಸ್ತೆಯನ್ನು ದುರಸ್ಥಿ ಮಾಡಿಸಿ ಎಂದು ಶ್ರಾವ್ಯ ಪ್ರಧಾನಿಗೆ ಪತ್ರ ಬರೆದಿದ್ದರು.
ಈ ಪತ್ರಕ್ಕೆ ಸ್ಪಂದಿಸಿದ ಪ್ರಧಾನಿ ಸಚಿವಾಲಯ, ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದು ದೂರನ್ನು ತುರ್ತಾಗಿ ಪರಿಶೀಲಿಸಿ ಕ್ರಮ ಕೈಗೊಂಡು ವರದಿ ನೀಡುವಂತೆ ಆದೇಶಿಸಿದೆ.
ಈ ಕುರಿತು ಸಂತಸ ವ್ಯವ್ಯಕ್ತಪಡಿಸಿದ ಬಾಲಕಿ ಶ್ರಾವ್ಯ, 'ನನ್ನ ಪತ್ರಕ್ಕೆ ಪ್ರಧಾನಿಯವರು ಉತ್ತರಿಸಿದ್ದು ನನಗೆ ಮಾತ್ರವಲ್ಲ, ಊರಿನ ಜನರಿಗೆ ಸಹ ಖುಷಿ ನೀಡಿದೆ' ಎಂದು ಹರ್ಷ ವ್ಯಕ್ತಪಡಿಸಿದ್ದಾಳೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications