ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶರತ್ ಕೊಲೆ ಆರೋಪಿಗಳ ಶೀಘ್ರ ಬಂಧನ – ಎಡಿಜಿಪಿ ಅಲೋಕ್ ಮೋಹನ್

|
Google Oneindia Kannada News

ಮಂಗಳೂರು, ಜುಲೈ 13: 'ಶರತ್ ಮಡಿವಾಳ ಕೊಲೆ ಪ್ರಕರಣದ ಆರೋಪಿಗಳ ಬಗ್ಗೆ ಮಹತ್ವದ ಸುಳಿವು ದೊರೆತಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸುವುದಾಗಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಹೇಳಿದ್ದಾರೆ. ಬುಧವಾರ ಸಂಜೆ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

ಮಂಗಳೂರಿಗೆ ಕೆಂಪಯ್ಯರನ್ನು ಕಳಿಸಿದ್ದಕ್ಕೆ ಸಿದ್ದುಗೆ ಜಾಡಿಸಿದ ಸುರೇಶ್ಮಂಗಳೂರಿಗೆ ಕೆಂಪಯ್ಯರನ್ನು ಕಳಿಸಿದ್ದಕ್ಕೆ ಸಿದ್ದುಗೆ ಜಾಡಿಸಿದ ಸುರೇಶ್

"ಕಲ್ಲಡ್ಕ ಘಟನೆಗೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣ ದಾಖಲಾಗಿದೆ. 17 ಜನರನ್ನು ಬಂಧಿಸಲಾಗಿದೆ. ಎಲ್ಲಾ ಅಹಿತಕರ ಘಟನೆಗಳ ಹಿಂದಿರುವ ಆರೋಪಿಗಳ ಬಗ್ಗೆ ಪ್ರಮುಖ ಸುಳಿವು ದೊರೆತಿದೆ. ಜನರು ಶಾಂತಿ ಕಾಪಾಡಲು ಪೊಲೀಸರೊಂದಿಗೆ ಸಹಕಾರ ನೀಡಬೇಕು," ಎಂದು ಮನವಿ ಮಾಡಿಕೊಂಡರು.

17 arrested in stone pelting incident during Sharat body procession- ADGP Alok Mohan

"ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ವಾತಾವರಣ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಇತರ ಕಡೆಯಿಂದ ಹೆಚ್ಚುವರಿ ಪೊಲೀಸರನ್ನು ಜಿಲ್ಲೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಹೊರ ರಾಜ್ಯಗಳಿಂದಲೂ ತಜ್ಞರನ್ನು ಕರೆಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಜನ ಜೀವನ ಮತ್ತೆ ಸಹಜ ಸ್ಥಿತಿಗೆ ಮರಳಿದೆ ಈ ಸಂದರ್ಭದಲ್ಲಿ ಸಾರ್ವಜನಿಕರು ಶಾಂತಿ ಸ್ಥಾಪನೆಗೆ ಸಹಕಾರ ನಿರಂತರವಾಗಿ ನೀಡಬೇಕಾಗಿದೆ," ಎಂದು ಅಲೋಕ್ ಮೋಹನ್ ಅಭಿಪ್ರಾಯಪಟ್ಟರು.

"ಬಂಟ್ವಾಳಲ್ಲಿ ಕಲ್ಲು ತೂರಾಟದ ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಬಳಿ ವೀಡಿಯೊ ದಾಖಲೆಗಳಿವೆ. ಇದರಲ್ಲಿ ಭಾಗಿಯಾದವರ ವಿರುದ್ಧ ಪ್ರಕರಣ ದಾಖಲಿಸಿ, ಸೂಕ್ತ ತನಿಖೆಗೆ ಕ್ರಮ ಕೈ ಗೊಳ್ಳಲಾಗಿದೆ. ನಿರಪರಾಧಿಗಳನ್ನು ಯಾರನ್ನು ಬಂಧಿಸಿಲ್ಲ," ಎಂದ ಅಲೋಕ್ ಮೋಹನ್ ಹಿಂದೂ ಕಾರ್ಯಕರ್ತರ ಬಂಧನಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಮಂಗಳೂರು: ಯಡಿಯೂರಪ್ಪ ನೇತೃತ್ವದಲ್ಲಿ ಜು.13ರಂದು ಬೃಹತ್ ಪ್ರತಿಭಟನೆಮಂಗಳೂರು: ಯಡಿಯೂರಪ್ಪ ನೇತೃತ್ವದಲ್ಲಿ ಜು.13ರಂದು ಬೃಹತ್ ಪ್ರತಿಭಟನೆ

ಇನ್ನು ಬಂಟ್ವಾಳ ಶರತ್ ಮಡಿವಾಳ ಅವರ ಅಂಗಡಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಅಲೋಕ್ ಕುಮಾರ್ ಕಲೆ ಹಾಕಿದ್ದಾರೆ. ಎಲ್ಲಾ ಹಿರಿಯ ಅಧಿಕಾರಿಗಳ ಜತೆಗೆ ಬುಧವಾರ ಅವರು ಮಂಗಳೂರು ಆಯುಕ್ತರ ಕಚೇರಿಯಲ್ಲಿ ದೀರ್ಘ ಕಾಲ ಸಭೆಯನ್ನೂ ನಡೆಸಿದರು. ಮತ್ತು ತನಿಖೆಯನ್ನು ಚುರುಕು ಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇಂದು ಬಂಟ್ವಾಳಕ್ಕೆ ಡಿಜಿಪಿ ದತ್ತಾ

ಇಂದು ಗಲಭೆ ಪೀಡಿತ ಬಂಟ್ವಾಳಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ರೂಪಕ್ ಕುಮಾರ್ ದತ್ತಾ ಭೇಟಿ ನೀಡಲಿದ್ದಾರೆ. ಅವರ ಜತೆ ಗೃಹ ಮಂತ್ರಿಗಳ ಸಲಹೆಗಾರ ಕೆಂಪಯ್ಯ ಕೂಡಾ ಭೇಟಿ ನೀಡುವ ಸಾಧ್ಯತೆ ಇದೆ. ಈ ಸಂದರ್ಭ ಬಂಟ್ವಾಳ ಪೊಲೀಸರಿಂದ ಗಲಭೆಯ ಸಂಪೂರ್ಣ ವಿವರಗಳನ್ನು ಉನ್ನತ ಪೊಲೀಸ್ ಅಧಿಕಾರಿಗಳು ಪಡೆದುಕೊಳ್ಳಲಿದ್ದಾರೆ.

English summary
17 people arrested in stone pelting incident during Sharat Madiwala body procession- said ADGP Alok Mohan at the press meet held at Mangaluru Police commissioners officer here on July 12.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X