ಮಂಗಳೂರು: ಸಿಡಿಮದ್ದು ತಯಾರಿ ವೇಳೆ ಸ್ಫೋಟ, ಇಬ್ಬರು ಸಾವು
ಮಂಗಳೂರು, ಮಾರ್ಚ್ 20: ಸಿಡಿಮದ್ದು ತಯಾರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಸೋಮವಾರ ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಕಂಬಳಬೆಟ್ಟು ಶಾಂತಿನಗರ ನಿವಾಸಿ ಉಮರ್ ಎಂಬುವವರ ಪುತ್ರ ಹಾಶಿಮ್ (25) ಮತ್ತು ಕಂಬಳಬೆಟ್ಟು ನೂಜಿ ನಿವಾಸಿ ಸುಂದರ್ ಪೂಜಾರಿ (39) ಎಂದು ಗುರುತಿಸಲಾಗಿದೆ.

ರಫೀಕ್ ಎಂಬುವವರಿಗೆ ಸೇರಿದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸಿಡಿಮದ್ದು ತಯಾರಿಸುತ್ತಿದ್ದ ಸಂದರ್ಭದಲ್ಲಿ ಈ
ದುರ್ಘಟನೆ ಘಟನೆ ಸಂಭವಿಸಿದೆ.
ಸ್ಫೋಟದ ತೀವ್ರತೆಗೆ ಘಟಕಕ್ಕೂ ಭಾಗಶಃ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications