ಮಂಗಳೂರಿನಲ್ಲಿ 21 ಆಧಾರ್ ನೋಂದಣಿ ಕೇಂದ್ರಗಳು ಆರಂಭ
ಮಂಗಳೂರು, ಫೆ. 23 : ಮಂಗಳೂರಿನಲ್ಲಿ ಇನ್ನು ಮುಂದೆ ಸುಲಭವಾಗಿ ಆಧಾರ್ ಕಾರ್ಡ್ ಮಾಡಿಸಿಕೊಳ್ಳಬಹುದು. ಜಿಲ್ಲೆಯಲ್ಲಿ ಆಧಾರ್ ಕಾರ್ಡ್ನ 21 ಸೇವಾ ಕೇಂದ್ರಗಳನ್ನು ಮುಂದಿನವಾರ ಆರಂಭಿಸಲಾಗುತ್ತಿದೆ. ಅಟಲ್ ಜೀ ಜನಸ್ನೇಹಿ ಕೇಂದ್ರ ಹಾಗೂ ಮಂಗಳೂರು ಒನ್ ಸೇವಾ ಕೇಂದ್ರಗಳಲ್ಲಿ ಆಧಾರ್ ಕೇಂದ್ರ ಆರಂಭಗೊಳ್ಳಲಿವೆ.
21 ಶಾಶ್ವತ ಸೇವಾ ಕೇಂದ್ರಗಳನ್ನು ತೆರೆಯಲು ಬೇಕಾದ ವ್ಯವಸ್ಥೆ ಈಗಾಗಲೇ ಸಿದ್ಧವಾಗಿದೆ. ಕೇಂದ್ರಕ್ಕೆ ಬೇಕಾದ ಕಂಪ್ಯೂಟರ್, ಸಾಫ್ಟ್ವೇರ್ ಕಿಟ್ ಆಗಮಿಸಿದ್ದು ಇವುಗಳ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿದೆ. ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ತರಬೇತಿ ನೀಡುವ ಕಾರ್ಯ ನಡೆಯುತ್ತಿದೆ. [ಆಧಾರ್ ಕಾರ್ಡ್ ಮಾಡಿಸುವುದು ಹೇಗೆ?]

ಈ ಕೇಂದ್ರಗಳಲ್ಲಿ ಆಧಾರ್ ಕಾರ್ಡ್ ತಿದ್ದುಪಡಿಗೂ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಪಡೆದಿರುವ ಆಧಾರ್ ಕಾರ್ಡ್ ಕಳೆದುಕೊಂಡರೆ, ಅದರ ನಂಬರ್ ನೀಡಿ ಹೊಸ ಆಧಾರ್ ಕಾರ್ಡ್ ಪಡೆದುಕೊಳ್ಳುವ ಸೌಲಭ್ಯವೂ ಇದೆ. ಈ ಕೇಂದ್ರಗಳಲ್ಲಿ ಆಧಾರ್ ಕಾರ್ಡ್ ಪಡೆಯಲು ಉಚಿತವಾಗಿ ಹೆಸರು ನೋಂದಾಯಿಸಬಹುದಾಗಿದೆ. [ಪಾಸ್ ಪೋರ್ಟ್ ಪಡೆಯಲು ಆಧಾರ್ ಕಡ್ಡಾಯ?]
ಕೇಂದ್ರಗಳು ಎಲ್ಲೆಲ್ಲಿ : ಮಂಗಳೂರಿನ ಲಾಲ್ ಬಾಗ್, ಬಾವುಟ ಗುಡ್ಡೆ, ಕದ್ರಿ ಹಾಗೂ ಸುರತ್ಕಲ್ನಲ್ಲಿರುವ ಮಂಗಳೂರು ಒನ್ ಕೇಂದ್ರಗಳಲ್ಲಿ ಮುಂದಿನ ವಾರದಿಂದ ಆಧಾರ್ ನೋಂದಣಿ ಕೇಂದ್ರ ಆರಂಭವಾಗಲಿದೆ.
ಹಾಗೆಯೇ ಅಟಲ್ ಜೀ ಜನಸ್ನೇಹ ಕೇಂದ್ರಗಳಾದ ಮಂಗಳೂರು ತಾಲೂಕು ಕಚೇರಿ ಸಮೀಪ, ತೊಕ್ಕೊಟ್ಟು, ಸುರತ್ಕಲ್, ಗುರುಪುರ, ಮೂಲ್ಕಿ, ಬಂಟ್ವಾಳ, ಪಾಣೆಮಂಗಳೂರು, ವಿಟ್ಲ, ಬೆಳ್ತಂಗಡಿ, ವೇಣೂರು, ಕೊಕ್ಕಡ, ಪುತ್ತೂರು, ಕಡಬ, ಉಪ್ಪಿನಂಗಡಿ, ಸುಳ್ಯ, ಪಂಜ, ಮೂಡುಬಿದಿರೆಗಳಲ್ಲಿ ಆಧಾರ್ ಕೇಂದ್ರ ಕಾರ್ಯನಿರ್ವಹಿಸಲಿದೆ.
ಮಂಗಳೂರು ಒನ್ ಕೇಂದ್ರಗಳಲ್ಲಿ ಜನರಿಗೆ ಈಗಾಗಲೇ ನೀರು, ವಿದ್ಯುತ್, ಟೆಲಿಫೋನ್ ಬಿಲ್, ಆಸ್ತಿ ತೆರಿಗೆ, ಕೆಎಸ್ಆರ್ಟಿಸಿ ಟಿಕೆಟ್ ಸೇರಿದಂತೆ ವಿವಿಧ ಸೇವೆಗಳು ದೊರೆಯುತ್ತಿವೆ. ಇದರ ಜೊತೆಗೆ ಇನ್ನು ಮುಂದೆ ಆಧಾರ್ ಕಾರ್ಡ್ ಮಾಡಿಸಿಕೊಳ್ಳುವ ಸೇವೆ ಸಹ ಲಭ್ಯವಾಗಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications