ಬುದ್ಧಿವಂತರ ಜಿಲ್ಲೆಯಲ್ಲೇ ಬಾಲ್ಯ ವಿವಾಹ, ಅಧಿಕಾರಿಗಳು ಶಾಮೀಲು ಆರೋಪ
ಮಂಗಳೂರು, ಡಿಸೆಂಬರ್ 06: ಬುದ್ಧಿವಂತರ ಜಿಲ್ಲೆ ಎಂದೇ ಗುರುತಿಸಲಾಗುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಸವಣೂರಿನ ಅಪ್ರಾಪ್ತ ಬಾಲಕಿ ಹಾಗೂ ಉಪ್ಪಿನಂಗಡಿ ಯುವಕನ ನಡುವೆ ಈ ಮದುವೆ ನಡೆದಿದೆ.
ಈ ಸಂಬಂಧ ಬಾಲಕಿಯ ತಂದೆಯೇ ಮಕ್ಕಳ ರಕ್ಷಣಾ ಸಮಿತಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪುತ್ತೂರು ಸಿ.ಡಿ.ಪಿ.ಒ ಉಪ್ಪಿನಂಗಡಿ, ಬೆಳ್ಳಾರೆ ಹಾಗೂ ಪುತ್ತೂರು ಮಹಿಳಾ ಠಾಣೆಯಲ್ಲಿ ಬಾಲಕಿ ಹಾಗೂ ಮದುವೆಯಾದ ಯುವಕನ ಪೋಷಕರ ವಿರುದ್ಧ ದೂರು ದಾಖಲಿಸಿದ್ದಾರೆ.
ನವಂಬರ್ 14 ರಂದು ಈ ಮದುವೆಯನ್ನು ಬಂಟ್ವಾಳ ತಾಲೂಕಿನ ನೇರಳಕಟ್ಟೆ ಎಂಬಲ್ಲಿರುವ ಹಾಲ್ ನಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಈ ಬಗ್ಗೆ ಅಧಿಕಾರಿಗಳಿಗೆ ಮೊದಲೇ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಮದುವೆಯನ್ನು ರದ್ದುಗೊಳಿಸಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಂದಹಾಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಕ್ಕಳ ರಕ್ಷಣಾ ಘಟಕದಲ್ಲಿರುವ ಮಹಿಳೆಯೊಬ್ಬರು ಅಧಿಕಾರಿಗಳು ಹಾಲ್ ಗೆ ಬರುವ ಮೊದಲೇ ಹಾಲ್ ನ ಸಿಬ್ಬಂದಿಗಳಿಗೆ ಅಧಿಕಾರಿಗಳು ದಾಳಿ ನಡೆಸುವ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮದುವೆಯನ್ನು ಹಾಲ್ ನಲ್ಲಿ ಗುಪ್ತವಾಗಿ ಮಾಡಲಾಗಿದೆ.
ಈ ವಿಚಾರ ಬಾಲಕಿಯ ತಂದೆ ಮುನೀರ್ ಗೆ ತಿಳಿದ ಹಿನ್ನೆಲೆಯಲ್ಲಿ ಅವರು ಮಕ್ಕಳ ರಕ್ಷಣಾ ಸಮಿತಿಗೆ ದೂರು ನೀಡಿದ್ದಾರೆ. ಮುನೀರ್ ಅವರ ಮೊದಲನೇ ಪತ್ನಿಯ ಮಗಳು ಅಪ್ರಾಪ್ತ ಬಾಲಕಿಯಾಗಿದ್ದು, ಅವರ ಮೊದಲನೇ ಪತ್ನಿಗೆ ಬೇರೊಬ್ಬರೊಂದಿಗೆ ಮದುವೆಯಾಗಿತ್ತು.
ಮೊದಲನೇ ಪತ್ನಿ ಆಕೆಯ ಎರಡನೇ ಪತಿ ಜೊತೆ ಸೇರಿಕೊಂಡು ಈ ಕಾನೂನುಬಾಹಿರ ಮದುವೆ ನಡೆಸಿದ್ದಾರೆ ಎಂದು ಮುನೀರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಮದುವೆ ನಡೆಯುವುದರ ಹಿಂದೆ ಕೆಲವು ಅಧಿಕಾರಿಗಳೂ ಶಾಮೀಲಾಗಿದ್ದಾರೆ ಎನ್ನುವ ಆರೋಪವೂ ಇದೀಗ ಕೇಳಿ ಬರುತ್ತಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications