ಮಂಗಳೂರು: ವಿಚಾರಣೆ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ವ್ಯಕ್ತಿ ಸಾವು

ಮಂಗಳೂರು, ಜೂನ್ 5: ಬಜ್ಪೆ ಪೊಲೀಸರ ವಶದಲ್ಲಿದ್ದ ವ್ಯಕ್ತಿಯೊಬ್ಬರು ವಿಚಾರಣೆ ವೇಳೆ ಹೃದಯಾಘಾತದಿಂದ ಸಾವಿಗೀಡಾದ ಘಟನೆ ಭಾನುವಾರ ರಾತ್ರಿ ನಡೆದಿದೆ.

ಸಾವಿಗೀಡಾದವರನ್ನು ಕಾವೂರು ಬಲ್ಪುಗುಡ್ಡೆಯ ಲೂಯಿಸ್ ಎಂಬವರ ಪುತ್ರ ಮೆಲ್ವಿನ್ ಜಾನ್ (39) ಎಂದು ಗುರುತಿಸಲಾಗಿದೆ.

ಮರವೂರು ಡ್ಯಾಮ್ ಬಳಿ ಭಾನುವಾರ ರಾತ್ರಿ ಸುಮಾರು 10:30ಕ್ಕೆ ನಾಲ್ಕು ಮಂದಿ ಯುವಕರು ಮದ್ಯಸೇವನೆ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಬಜ್ಪೆ ಪೊಲೀಸರು ಸ್ಥಳಕ್ಕೆ ತೆರಳಿ ನಾಲ್ವರನ್ನು ವಶಕ್ಕೆ ಪಡೆದಿದ್ದರು.

39 year old Man dies in police interrogate at Bajpe Station in Mangaluru

ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾಗ ಸುಮಾರು 11:20ಕ್ಕೆ ಕುರ್ಚಿಯಲ್ಲಿ ಕುಳಿತಿದ್ದ ಮೆಲ್ವಿನ್ ಜಾನ್ ಸ್ಥಳದಲ್ಲೇ ಕುಸಿದು ಬಿದಿದ್ದು, ಠಾಣೆಯ ಸಿಬ್ಬಂದಿಗಳು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ 11:45ಕ್ಕೆ ಅವರು ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮೆಲ್ವಿನ್‌ ಹಲವು ವರ್ಷಗಳಿಂದ ಹೃದಯಸಂಬಂಧಿ ಖಾಹಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಇನ್ನು ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪೊಲೀಸ್ ಆಯುಕ್ತ ಚಂದ್ರಶೇಖರ್ ಅವರು ಉಪಾಯುಕ್ತ (ಕಾನೂನು ಮತ್ತು ಸುವ್ಯವಸ್ಥೆ ವಿಭಾಗ)ರಿಗೆ ಆದೇಶಿಸಿದ್ದಾರೆ. ಈ ಮಧ್ಯೆ ಮೆಲ್ವಿನ್ ಸಹೋದರ ಲಾರೆನ್ಸ್ ಬಜ್ಪೆ ಠಾಣೆಗೆ ದೂರು ನೀಡಿದ್ದು ಸೂಕ್ತ ತನಿಖೆಗಾಗಿ ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+