ಮಂಗಳೂರು ವಿಮಾನ ನಿಲ್ದಾಣದ ರನ್ವೇಗೆ 4 ಸಾವಿರ ಕೋಟಿ ರು. ಅಗತ್ಯ
ಮಂಗಳೂರು, ಸೆಪ್ಟೆಂಬರ್ 14 : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೆನಗುದಿಗೆ ಬಿದ್ದಿರುವ ರನ್ವೇ ವಿಸ್ತರಣೆ ಕಾಮಗಾರಿಗೆ ಹೊಸ ಪ್ರಸ್ತಾವನೆ ಮುಂದಿರಿಸಿದ್ದು ಭೂ ಸ್ವಾಧೀನಕ್ಕೆ 4 ಸಾವಿರ ಕೋಟಿ ರೂಪಾಯಿ ಅಗತ್ಯವಿದೆ ಎಂದು ತಿಳಿಸಿದೆ.
ಮಂಗಳೂರು ವಿಮಾನ ನಿಲ್ದಾಣ ಭೂಸ್ವಾಧೀನಕ್ಕೆ ಬರೋಬರಿ 4 ಸಾವಿರ ಕೋಟಿ ರೂಪಾಯಿ ಬೇಕಾಗುತ್ತದೆ ಎಂದು ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ. ವಿಮಾನ ನಿಲ್ದಾಣ ರನ್ವೇ ವಿಸ್ತರಣೆ ಹಾಗೂ ಬಾಕಿ ಉಳಿದಿರುವ ಕಾಮಗಾರಿಗೆ ಸಂಬಂಧಪಟ್ಟಂತೆ ಸಂಸದ ನಳಿನ್ ಕುಮಾರ್ ಕಟ್ಟಿದ ಅಧ್ಯಕ್ಷತೆಯಲ್ಲಿ ವಿಮಾನ ನಿಲ್ದಾಣದ ಸಭಾಂಗಣದಲ್ಲಿ ಇಂದು ನಡೆದ ವಿಶೇಷ ಸಭೆಯಲ್ಲಿ ಪ್ರಾಧಿಕಾರದ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, 'ರನ್ವೇ ವಿಸ್ತರಣೆಗೆ ಅಗತ್ಯ ಭೂಮಿಯನ್ನು ಸ್ವಾಧೀನ ಪಡಿಸಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ. ಈ ಕೆಲಸ ಆದಲ್ಲಿ ರನ್ವೇ ವಿಸ್ತರಿಸುವ ಕೆಲಸವನ್ನು ಕೇಂದ್ರ ವಿಮಾನಯಾನ ಸಚಿವಾಲಯ ತಕ್ಷಣ ಕೈಗೆತ್ತಿಕೊಳ್ಳಲಿದೆ' ಎಂದರು..
ಮುಲ್ಕಿ ಮೂಡಬಿದ್ರೆ ಶಾಸಕ ಅಭಯಚಂದ್ರ ಜೈನ್, ಮಂಗಳೂರು ಉಪ ವಿಭಾಗಾಧಿಕಾರಿ ರೇಣುಕಾ ಪ್ರಸಾದ್, ಕೆನರಾ ಚೇಂಬರ್ ಅಧ್ಯಕ್ಷ ಜೀವನ್ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.












Click it and Unblock the Notifications