ಮಂಗಳೂರು: ಠಾಣೆಗೆ ನುಗ್ಗಿ ಪೊಲೀಸರಿಗೇ ರಿವಾಲ್ವರ್ ತೋರಿಸಿದ್ರು
ಮಂಗಳೂರು, ನವೆಂಬರ್. 20: ನಾಲ್ವರು ದುಷ್ಕರ್ಮಿಗಳ ತಂಡವೊಂದು ಏಕಾಏಕಿ ಬೆಳ್ತಂಗಡಿ ಠಾಣೆಗೆ ನುಗ್ಗಿ ಪೊಲೀಸರಿಗೆ ರಿವಾಲ್ವರ್ ತೋರಿಸಿ ಬೆದರಿಸಿದ್ದ ಘಟನೆ ಗುರುವಾರ ನಡೆದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರನ್ನು ಹಾಸನ ಕೆಎಂಎಫ್ ಬಳಿಯ ಬಟ್ಟೆ ವ್ಯಾಪಾರಿ ದಯಾನಂದ್ ಬಿ (37), ವೈದ್ಯಕೀಯ ವೃತ್ತಿಯ ಹಾಸನದ ರಾಜಪುರ ರಸ್ತೆಯ ರವಿ (40), ಹಾಸನ ಬಿ. ಎಂ. ರೋಡ್ನ ಹೋಟೆಲ್ ಶ್ರೀಕೃಷ್ಣದ ರಂಗನಾಥ ಭಟ್ (46), ಬೆಳಗಾವಿಯ ಸದಾಶಿವ ನಗರದ ಬಸವರಾಜ ಕೊಡಚಿ (27) ಎಂದು ಗುರುತಿಸಲಾಗಿದೆ.[ಹರೀಶ್ ಪೂಜಾರಿ ಕೊಲೆ: ಬಲಪಂಥೀಯ ಸಂಘಟನೆಯ ಇಬ್ಬರ ಬಂಧನ]

ಈ ನಾಲ್ವರು ಒಳನುಗ್ಗಿ ಪ್ರಭಾರ ಠಾಣಾಧಿಕಾರಿ ಹೆಡ್ ಕಾನ್ಸ್ಟೆಬಲ್ ಲೋಕನಾಥ ಅವರ ಬಳಿ ದರ್ಪದಿಂದ ಮಾತನಾಡಿ, 'ಎಲ್ಲಿ ನಿಮ್ಮ ಎಸ್ಐ, ನಿಮ್ಮ ಇನ್ಸ್ಪೆಕ್ಟರ್ ಎಂದಾಗ ಪೊಲೀಸರು ಸಹಜವಾಗಿ ತಾವು ಯಾರು ಎಂದು ಕೇಳಿದ್ದಾರೆ. ಅದಕ್ಕೆ ಆತ ನಾನು ಯಾರೆಂದು ಆಮೇಲೆ ಹೇಳುತ್ತೇನೆ ಎನ್ನುತ್ತಾ ಮೊಬೈಲ್ನಲ್ಲಿ ಅವರ ಫೋಟೋ ತೆಗೆದಿದ್ದಾನೆ.
ಯಾವುದೋ ಕೆಲಸದ ನೆಪವೊಡ್ಡಿ ಠಾಣೆಗೆ ಮಧ್ಯಾಹ್ನದ ವೇಳೆ ಬಂದ ದಯಾನಂದ ಏಕಾಏಕಿ ಬಾಯಿಗೆ ಬಂದಂತೆ ದಬಾಯಿಸಿ, ನಾನು ಹಿರಿಯ ಪೊಲೀಸ್ ಅಧಿಕಾರಿಗಳ ಅತ್ಮೀಯ, ನನಗೆ ಗೌರವ ಕೊಡಬೇಕೆಂದು ತಿಳಿಯುವುದಿಲ್ವಾ ಎಂದು ಹೇಳಿದ್ದಾರೆ.[ಮಂಗಳೂರಲ್ಲಿ ಮಹಮ್ಮದ್ ಫೈಜ್ ಖಾನ್ ಅವರ 'ಒಂದು ಗೋವಿನ ಕಥಾ']
ದಯಾನಂದನನ್ನು ತಡೆಯಲು ಬಂದ ಹರೀಶ್ ಅವರನ್ನು ದಯಾನಂದ್ ಜತೆಗಿದ್ದ ವ್ಯಕ್ತಿ ದೂಡಿದ್ದಾನೆ. ನಿಮ್ಮನ್ನು ಏನು ಮಾಡಬೇಕೆಂದು ತಿಳಿದಿದೆ, ನಾನು ಮಾನವ ಹಕ್ಕು ಆಯೋಗದ ಅಧ್ಯಕ್ಷ ಎಂದು ದಯಾನಂದ್ ಹೇಳಿದ. ಜತೆಗೆ ಸೊಂಟದಿಂದ ರಿವಾಲ್ವರ್ ತೆಗೆದು ಒಬ್ಬೊಬ್ಬರನ್ನೂ ಶೂಟ್ ಮಾಡಿ ಮುಗಿಸುತ್ತೇನೆ ಎಂದು ಗುರಿ ಇಟ್ಟ.
ಇದು ಯಾವುದೇ ಅಧಿಕೃತ ಮಾನವ ಹಕ್ಕುಗಳ ಸಂಘಟನೆಯಾಗಿರುವ ಬಗ್ಗೆ ಮಾಹಿತಿಯಿಲ್ಲವಾಗಿದ್ದು ಇವರು ಯಾವುದೋ ಸಂಚಿನಿಂದ ಬೆಳ್ತಂಗಡಿಗೆ ಬಂದಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.[ಮಂಗಳೂರು ಜೈಲೊಳಗೆ ಮಾರಕಾಸ್ತ್ರ ಎಸೆದವರು ಸಿಕ್ಕಿಬಿದ್ರು]
ಈ ಮಧ್ಯೆ ಠಾಣೆಗೆ ನುಗ್ಗಿ ರಿವಾಲ್ವರ್ ತೆಗೆದು ರಾದ್ದಾಂತ ಮಾಡಿದ ದಯಾನಂದ ಮಧ್ಯ ಸೇವಿಸಿದ್ದರು ಎನ್ನಲಾಗಿದೆ, ಇವರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ, ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಪ್ರಕರಣದಡಿ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications