ದೆಹಲಿ ಜನರ ಸಂಕಷ್ಟಕ್ಕೆ ಮಿಡಿದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ವೈದ್ಯರು
ಮಂಗಳೂರು, ಮೇ 5: ದೇಶದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಕರಾಳತೆಯ ಕಬಂಧಬಾಹುವನ್ನು ವಿಸ್ತಾರಮಾಡುತ್ತಿದೆ. ದೇಶದ ಪ್ರಮುಖ ನಗರಗಳ ಸ್ಥಿತಿ ಒಂದೆಡೆಯಾದರೆ ರಾಷ್ಟ್ರ ರಾಜಧಾನಿ ದೆಹಲಿಯ ಪರಿಸ್ಥಿತಿ ಬಹಳಷ್ಟು ವಿಷಮಿಸಿದೆ.
ಒಂದೆಡೆ ಆಕ್ಸಿಜನ್ ಬೆಡ್ ಕೊರತೆಯಾದರೆ ಇನ್ನೊಂದೆಡೆ ರೋಗಿಗಳ ಶುಶ್ರೂಷೆ ಮಾಡಲು ವೈದ್ಯರು, ದಾದಿಯರ ಕೊರತೆಯ ಸಮಸ್ಯೆ ಉಲ್ಬಣಿಸುತ್ತಿದೆ. ದೆಹಲಿಯ ಜನರ ಸಂಕಷ್ಟಕ್ಕೆ ಕರ್ನಾಟಕದ ಉಡುಪಿಯ ವೈದ್ಯರ ಮನ ಕರಗಿದ್ದು, ಕೊರೊನಾ ರಣರಂಗದಲ್ಲಿ ಪ್ರಾಣದ ಹಂಗು ತೊರೆದು ಸೇವೆ ಸಲ್ಲಿಸಲು ಮಣಿಪಾಲದ ಕೆಎಂಸಿ ಆಸ್ಪತ್ರೆಯ 40 ವೈದ್ಯರು, 150 ದಾದಿಯರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ದೆಹಲಿಯ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಉಡುಪಿಯ ವೈದ್ಯರು ಮತ್ತು ದಾದಿಯರು ನಿಯೋಜನೆಗೊಂಡಿದ್ದು, ಕೊರೊನಾ ಸಂಕಷ್ಟದ ಕಾಲದಲ್ಲಿ ದೆಹಲಿಯ ಜನರಿಗೆ ಹೆಗಲು ನೀಡಲಿದ್ದಾರೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ವೈದ್ಯರು ಮತ್ತು ದಾದಿಯರು ಇಂಡಿಗೋ ವಿಮಾನದ ಮೂಲಕ ಪ್ರಯಾಣಿಸಿದ್ದು, ಇಂಡಿಗೋ ಸಿಬ್ಬಂದಿ ವೈದ್ಯರ ಮತ್ತು ದಾದಿಯರ ನಿಸ್ವಾರ್ಥ ಸೇವೆಗೆ ವಿಶೇಷ ಗೌರವ ಸಲ್ಲಿಸಿದ್ದಾರೆ.
ವೈದ್ಯರು ಮತ್ತು ದಾದಿಯರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಒಳ ಪ್ರವೇಶಿಸುತ್ತಿದ್ದಂತೆಯೇ ಇಂಡಿಗೋ ಸಿಬ್ಬಂದಿ ಮತ್ತು ವಿಮಾನ ನಿಲ್ದಾಣದ ಸಿಬ್ಬಂದಿ ಸಾಲಾಗಿ ನಿಂತು ಚಪ್ಪಾಳೆ ತಟ್ಟುವ ಮೂಲಕ ವಿಶೇಷ ಗೌರವ ಸಲ್ಲಿಸಿದರು.

ವೈದ್ಯರು ಮತ್ತು ದಾದಿಯರ ಮೊದಲ ತಂಡ ಈಗಾಗಲೇ ದೆಹಲಿ ಪ್ರಯಾಣ ಮಾಡಿದ್ದು, ಎರಡನೇ ತಂಡವೂ ಶೀಘ್ರದಲ್ಲೇ ದೆಹಲಿಯನ್ನು ಸೇರಲಿದೆ. ಈ ಮೂಲಕ ರಾಷ್ಟ್ರ ರಾಜಧಾನಿಯ ಜನರ ರಕ್ಷಣೆಗೆ ಸಾಥ್ ನೀಡಲಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion












Click it and Unblock the Notifications