ದೆಹಲಿ ಜನರ ಸಂಕಷ್ಟಕ್ಕೆ ಮಿಡಿದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ವೈದ್ಯರು
ಮಂಗಳೂರು, ಮೇ 5: ದೇಶದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಕರಾಳತೆಯ ಕಬಂಧಬಾಹುವನ್ನು ವಿಸ್ತಾರಮಾಡುತ್ತಿದೆ. ದೇಶದ ಪ್ರಮುಖ ನಗರಗಳ ಸ್ಥಿತಿ ಒಂದೆಡೆಯಾದರೆ ರಾಷ್ಟ್ರ ರಾಜಧಾನಿ ದೆಹಲಿಯ ಪರಿಸ್ಥಿತಿ ಬಹಳಷ್ಟು ವಿಷಮಿಸಿದೆ.
ಒಂದೆಡೆ ಆಕ್ಸಿಜನ್ ಬೆಡ್ ಕೊರತೆಯಾದರೆ ಇನ್ನೊಂದೆಡೆ ರೋಗಿಗಳ ಶುಶ್ರೂಷೆ ಮಾಡಲು ವೈದ್ಯರು, ದಾದಿಯರ ಕೊರತೆಯ ಸಮಸ್ಯೆ ಉಲ್ಬಣಿಸುತ್ತಿದೆ. ದೆಹಲಿಯ ಜನರ ಸಂಕಷ್ಟಕ್ಕೆ ಕರ್ನಾಟಕದ ಉಡುಪಿಯ ವೈದ್ಯರ ಮನ ಕರಗಿದ್ದು, ಕೊರೊನಾ ರಣರಂಗದಲ್ಲಿ ಪ್ರಾಣದ ಹಂಗು ತೊರೆದು ಸೇವೆ ಸಲ್ಲಿಸಲು ಮಣಿಪಾಲದ ಕೆಎಂಸಿ ಆಸ್ಪತ್ರೆಯ 40 ವೈದ್ಯರು, 150 ದಾದಿಯರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ದೆಹಲಿಯ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಉಡುಪಿಯ ವೈದ್ಯರು ಮತ್ತು ದಾದಿಯರು ನಿಯೋಜನೆಗೊಂಡಿದ್ದು, ಕೊರೊನಾ ಸಂಕಷ್ಟದ ಕಾಲದಲ್ಲಿ ದೆಹಲಿಯ ಜನರಿಗೆ ಹೆಗಲು ನೀಡಲಿದ್ದಾರೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ವೈದ್ಯರು ಮತ್ತು ದಾದಿಯರು ಇಂಡಿಗೋ ವಿಮಾನದ ಮೂಲಕ ಪ್ರಯಾಣಿಸಿದ್ದು, ಇಂಡಿಗೋ ಸಿಬ್ಬಂದಿ ವೈದ್ಯರ ಮತ್ತು ದಾದಿಯರ ನಿಸ್ವಾರ್ಥ ಸೇವೆಗೆ ವಿಶೇಷ ಗೌರವ ಸಲ್ಲಿಸಿದ್ದಾರೆ.
ವೈದ್ಯರು ಮತ್ತು ದಾದಿಯರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಒಳ ಪ್ರವೇಶಿಸುತ್ತಿದ್ದಂತೆಯೇ ಇಂಡಿಗೋ ಸಿಬ್ಬಂದಿ ಮತ್ತು ವಿಮಾನ ನಿಲ್ದಾಣದ ಸಿಬ್ಬಂದಿ ಸಾಲಾಗಿ ನಿಂತು ಚಪ್ಪಾಳೆ ತಟ್ಟುವ ಮೂಲಕ ವಿಶೇಷ ಗೌರವ ಸಲ್ಲಿಸಿದರು.

ವೈದ್ಯರು ಮತ್ತು ದಾದಿಯರ ಮೊದಲ ತಂಡ ಈಗಾಗಲೇ ದೆಹಲಿ ಪ್ರಯಾಣ ಮಾಡಿದ್ದು, ಎರಡನೇ ತಂಡವೂ ಶೀಘ್ರದಲ್ಲೇ ದೆಹಲಿಯನ್ನು ಸೇರಲಿದೆ. ಈ ಮೂಲಕ ರಾಷ್ಟ್ರ ರಾಜಧಾನಿಯ ಜನರ ರಕ್ಷಣೆಗೆ ಸಾಥ್ ನೀಡಲಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications