ಫೆ.8ರಿಂದ ಬಾಹುಬಲಿಗೆ 4ನೇ ಮಹಾ ಮಸ್ತಕಾಭಿಷೇಕ: ರತ್ನಗಿರಿ ಬೆಟ್ಟದಲ್ಲಿ ಭರ್ಜರಿ ಸಿದ್ಧತೆ
ಮಂಗಳೂರು, ಜನವರಿ 30: ಶ್ರೀ ಕ್ಷೇತ್ರ ಧರ್ಮಸ್ಥಳದ ರತ್ನಗಿರಿ ಬೆಟ್ಟದಲ್ಲಿ ವಿರಾಜಮಾನನಾದ ವೈರಾಗ್ಯ ಮೂರ್ತಿ, ತ್ಯಾಗದ ಸಂಕೇತವಾದ ಬಾಹುಬಲಿಯ ಮಹಾ ಮಸ್ತಕಾಭಿಷೇಕದ ಎಲ್ಲಾ ಸಿದ್ಧತೆಗಳು ಅಂತಿಮ ಹಂತ ತಲುಪಿವೆ.
ಫೆಬ್ರವರಿ 8 ರಿಂದ 19ರವರೆಗೆ ನಡೆಯಲಿರುವ ಈ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾಗಲು ದೇಶ ಹಾಗೂ ವಿದೇಶದ ಲಕ್ಷಾಂತರ ಮಂದಿ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಎಲ್ಲಾ ಜನರಲ್ಲೂ ಶಾಂತಿ, ಸಂಯಮ, ಸಹನೆ, ಸಹಬಾಳ್ವೆಯ ಸಂದೇಶವನ್ನು ಕೊಡುವ ಮುಖ್ಯ ಉದ್ದೇಶದಿಂದ ಈ ಮಹಾ ಮಸ್ತಕಾಭಿಷೇಕವನ್ನು ಮಾಡಲಾಗುತ್ತಿದೆ.
ಮಹಾ ಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವೂ ಎಲ್ಲಾ ಸಹಕಾರವನ್ನೂ ನೀಡಿದ್ದು, ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಶ್ರೀ ಕ್ಷೇತ್ರದಲ್ಲಿ ಶಾಶ್ವತ ಕಾಮಗಾರಿಗಳನ್ನೂ ಕೈಗೊಳ್ಳಲಾಗುತ್ತಿದೆ.
ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ದಕ್ಷಿಣಕನ್ನಡ ಜಿಲ್ಲೆಯ ಧರ್ಮಸ್ಥಳದ ರತ್ನಗಿರಿ ಬೆಟ್ಟದಲ್ಲಿ ವಿರಾಜಮಾನನಾದ ಬಾಹುಬಲಿಗೆ ಇದೀಗ ಮಹಾ ಮಸ್ತಕಾಭಿಷೇಕದ ಸಂಭ್ರಮ. ಇದೇ ಬರುವ ಫೆಬ್ರವರಿ 8 ರಿಂದ 19ರವರೆಗೆ ನಡೆಯುವ ಈ ಅಭೂತ ಪೂರ್ವ ಕ್ಷಣದಲ್ಲಿ ಭಾಗಿಯಾಗಲು ದೇಶ ಹಾಗೂ ವಿದೇಶದಿಂದ ಲಕ್ಷಾಂತರ ಮಂದಿ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ.
ಮಹಾ ಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ರತ್ನಗಿರಿ ಬೆಟ್ಟದಲ್ಲಿ ಎಲ್ಲಾ ಸಿದ್ಧತೆಗಳನ್ನೂ ಮಾಡಲಾಗಿದ್ದು, ಅಂತಿಮ ಸಿದ್ಧತೆ ನಡೆಸಲಾಗುತ್ತಿದೆ. ಬಾಹುಬಲಿಗೆ ಮಜ್ಜನಾಭಿಷೇಕ ಮಾಡಲು ಅನುಕೂಲವಾಗುವಂತೆ ವಿಗ್ರಹದ ಸುತ್ತಲೂ ಅಟ್ಟಣಿಗೆ ಕಟ್ಟುವ ಕಾಮಗಾರಿಯು ಈಗಾಗಲೇ ಕೊನೆಯ ಹಂತದಲ್ಲಿದೆ.

ಮಜ್ಜನ ವೀಕ್ಷಿಸಲು ಗ್ಯಾಲರಿ ವ್ಯವಸ್ಥೆ
ಅಲ್ಲದೆ, ಈ ಮಜ್ಜನವನ್ನು ಯಾವುದೇ ಅಡೆತಡೆಯಿಲ್ಲದೆ ಭಕ್ತಾಧಿಗಳು ವೀಕ್ಷಿಸಲು ಗ್ಯಾಲರಿಯ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ. ಮಸ್ತಕಾಭಿಷೇಕದ ಜೊತೆಗೆ ಬಾಹುಬಲಿಯ ಶಾಂತಿ, ಸಾಮರಸ್ಯೆ, ಸಹನೆ, ಸಂಯಮದ ಸಂದೇಶವನ್ನೂ ಜನತೆಗೆ ನೀಡುವ ಉದ್ದೇಶವನ್ನೂ ಈ ಸಂಭ್ರಮ ಹೊಂದಿದೆ. ಸಮಾರಂಭದ ಹಿನ್ನೆಲೆಯಲ್ಲಿ ಸಂತ ಸಮ್ಮೇಳನವೂ ನಡೆಯಲಿದ್ದು, ವಿವಿಧ ಧರ್ಮಗುರುಗಳೂ ಈ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ.

ವಿನೂತನವಾದ ಮೆರವಣಿಗೆ
ಅಷ್ಟೇ ಅಲ್ಲ, ವಿನೂತನವಾದ ಮೆರವಣಿಗೆಯನ್ನು ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜೋಡಿಸಿಕೊಳ್ಳಲಾಗಿದ್ದು, ಜಾನಪದ ಕಲಾ ತಂಡಗಳ ಜೊತೆಗೆ ಬಾಹುಬಲಿಯ ಜೀವನ ವೃತ್ತಾಂತದ ದೃಶ್ಯರೂಪಕವನ್ನೂ ಮೆರವಣಿಗೆಯಲ್ಲಿ ಸಾದರಪಡಿಸುವ ಪ್ರಯತ್ನವೂ ನಡೆಯಲಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ತಿಳಿಸದ್ದಾರೆ.

2 ಕೋಟಿ ರೂಪಾಯಿ ಅನುದಾನ
ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಯಾವುದೇ ತೊಂದರೆಯಾಗದಂತೆ ಇಡೀ ಜಿಲ್ಲಾಡಳಿತವೂ ಹಲವು ವ್ಯವಸ್ಥೆಗಳನ್ನು ಮಾಡಿದೆ. ರಕ್ಷಣೆ ಹಾಗೂ ಬಂದೋಬಸ್ತ್ ಗಾಗಿ ಪೋಲೀಸ್ ಇಲಾಖೆ ಸನ್ನದ್ಧವಾಗಿದ್ದು, ಗೃಹರಕ್ಷಕ ದಳ, ಪೋಲೀಸ್ ಇಲಾಖೆಯ ಜೊತೆಗೆ ಕೈಜೋಡಿಸಲಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಯಾವುದೇ ತೊಂದರೆಯಾಗದಿರಲಿ ಎನ್ನುವ ಕಾರಣಕ್ಕೆ ಹೊಸ ರಸ್ತೆಗಳ ನಿರ್ಮಾಣ ಕಾರ್ಯವೂ ಭರದಿಂದ ಸಾಗುತ್ತಿದೆ. ಲೋಕೋಪಯೋಗಿ ಇಲಾಖೆಯು ಸುಮಾರು 23 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗಳನ್ನು ಕೈಗೊಂಡಿದ್ದು, ಪ್ರವಾಸೋದ್ಯಮ ಇಲಾಖೆಯಿಂದಲೂ 2 ಕೋಟಿ ರೂಪಾಯಿ ಅನುದಾನದ ನಿರೀಕ್ಷೆಯನ್ನೂ ಇಟ್ಟುಕೊಳ್ಳಲಾಗಿದೆ.

ಲಕ್ಷಾಂತರ ಮಂದಿ ಆಗಮನ
ಧರ್ಮಸ್ಥಳದ ರತ್ನಗಿರಿ ಬೆಟ್ಟದಲ್ಲಿರುವ ಬಾಹುಬಲಿಗೆ ಇದು ನಾಲ್ಕನೇ ಮಹಾ ಮಸ್ತಕಾಭಿಷೇಕವಾಗಿದೆ. ಈ ಬಾರಿ ಹಲವು ವಿಶೇಷತೆಗಳ ಮೂಲಕ ಮಹಾ ಮಸ್ತಕಾಭಿಷೇಕ ನಡೆಯಲಿದ್ದು, ಲಕ್ಷಾಂತರ ಮಂದಿ ಜನರ ಆಗಮನದ ನಿರೀಕ್ಷೆಯನ್ನೂ ಇಟ್ಟುಕೊಳ್ಳಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications