ಮಂಗಳೂರು: ಮುತ್ತೂಟ್ ಫೈನಾನ್ಸ್ ನಲ್ಲಿ ದರೋಡೆಗೆ ಯತ್ನ
ಮಂಗಳೂರು, ಡಿಸೆಂಬರ್, 05: ಮುತ್ತೂಟ್ಟು ಫೈನಾನ್ಸ್ ಸಂಸ್ಥೆಯ ಮೇಲೆ ಐವರು ದುಷ್ಕರ್ಮಿಗಳ ತಂಡ ದರೋಡೆ ನಡೆಸಲು ಯತ್ನಿಸಿ ಪರಾರಿಯಾದ ಘಟನೆ ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಮಂಗಳೂರಲ್ಲಿ ನಡೆದಿದೆ.
ಮಂಗಳೂರಿನ ಕುಳಾಯಿ ಜಂಕ್ಷನ್ ಬಳಿಯ ಮುತ್ತೂಟ್ಟು ಫೈನಾನ್ಸ್ ಶಾಖೆಯಲ್ಲಿ ಈ ಕೃತ್ಯ ಸಂಭವಿಸಿದ್ದು, ಸಿಬ್ಬಂದಿಗೆ ಪಿಸ್ತೂಲ್ ತೋರಿಸಿ ಹಣ ದೋಚಲು ಪ್ರಯತ್ನಿಸಿದ್ದಾರೆ. ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.[ಮಂಗಳೂರಲ್ಲಿ ಬ್ಯಾಂಕ್ ದರೋಡೆ, 5 ಕೋಟಿ ಲೂಟಿ]

ಏನಿದು ಘಟನೆ?
ಸುಮಾರು ಆರು ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮುತ್ತೂಟ್ಟು ಫೈನಾನ್ಸ್ ಗೆ 9 ಗಂಟೆ ಸುಮಾರಿನಲ್ಲಿ ಐವರು ಮುಸುಕುದಾರಿಗಳು ಓಮಿನಿ ಕಾರಿನಲ್ಲಿ ಬಂದಿದ್ದಾರೆ. ಬಳಿಕ ಅದೇ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗೆ ಪಿಸ್ತೂಲ್ ತೋರಿಸಿ ಹಣ ಕದಿಯಲು ಪ್ರಯತ್ನಿಸಿದ್ದಾರೆ.
ಕಳ್ಳತನ ಮಾಡುವ ಸಂದರ್ಭದಲ್ಲಿ ಅಚಾನಕ್ಕಾಗಿ ಪೊಲೀಸ್ ವಾಹನದ ಸೈರನ್ ಶಬ್ದ ಕೇಳಿಸಿದೆ. ಈ ಶಬ್ದ ಆಲಿಸಿ ಭಯಭೀತರಾದ ದುಷ್ಕರ್ಮಿಗಳು ಪೊಲೀಸರು ಬಂದರೆಂದು ತಿಳಿದು ತಕ್ಷಣವೇ ಅಲ್ಲಿಂದ ಓಡಿ ಹೋಗಿದ್ದು, ಹಣ ಕದಿಯಲು ಸಾಧ್ಯವಾಗಿಲ್ಲ.[ಈ ಊರಲ್ಲಿ ಇರೋರೆಲ್ಲಾ ಮನೇಲಿ ತರಬೇತಿ ಪಡೆದ ಖತರ್ನಾಕ್ ಕಳ್ಳರು!]
ಈ ವಿಚಾರ ತಿಳಿದ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ವಿಚಾರಣೆಗೆ ಸಹಕಾರ ನೀಡುತ್ತಿದ್ದಾರೆ. ಸದ್ಯದಲ್ಲೇ ದರೋಡೆಕೋರರನ್ನು ಪತ್ತೆ ಹಚ್ಚುವುದಾಗಿ ಪೊಲೀಸರು ಮಾಲೀಕರಿಗೆ ಭರವಸೆ ನೀಡಿದ್ದಾರೆ.












Click it and Unblock the Notifications