ನಾವೂರ ನದಿಯಲ್ಲಿ ಅಪಾಯಕ್ಕೆ ಸಿಲುಕಿದ ಮಕ್ಕಳು, ಅದೃಷ್ಟವಶಾತ್ ಪಾರು!
ಮಂಗಳೂರು, ಅಕ್ಟೋಬರ್. 24: ನದಿಯಲ್ಲಿ ನೀರಾಟ ಆಡಲು ತೆರಳಿದ್ದ ವಿದ್ಯಾರ್ಥಿಗಳು ನೀರಿನ ಸೆಳೆತ ಹೆಚ್ಚಾದ ಕಾರಣ ಅಪಾಯಕ್ಕೆ ಸಿಲುಕಿದ ಘಟನೆ ಬಂಟ್ವಾಳದ ಬಳಿ ನಡೆದಿದೆ.
ಇಂದು ಬುಧವಾರ ವಾಲ್ಮಿಕಿ ಜಯಂತಿ ಪ್ರಯುಕ್ತ ಶಾಲೆಗೆ ರಜೆಯಿದ್ದ ಕಾರಣ ನಾವೂರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾವೂರ ಲಕ್ಷ್ಮೀ ವಿಷ್ಣು ಮೂರ್ತಿ ದೇವಸ್ಥಾನದ ಸಮೀಪವಿರುವ ನೇತ್ರಾವತಿ ನದಿಯಲ್ಲಿ 11 ಮಂದಿ ವಿದ್ಯಾರ್ಥಿಗಳ ತಂಡ ಆಟವಾಡಲು ತೆರಳಿತ್ತು.
ಆಟವಾಡಲು ತೆರಳಿದ್ದ ವೇಳೆ ಪಕ್ಕದ ಎಎಂ ಆರ್ ಡ್ಯಾಂನಿಂದ ನೀರು ಬಿಟ್ಟ ಪರಿಣಾಮ ಐವರು ವಿದ್ಯಾರ್ಥಿಗಳು ಅಪಾಯದಲ್ಲಿ ಸಿಲುಕಿದರು. ಈಜಲು ಸಾಧ್ಯವಾಗದೇ ನೀರಿನ ರಭಸಕ್ಕೆ ಬಂಡೆಕಲ್ಲಿನ ಮೇಲೆ ಸಿಲುಕಿಕೊಂಡರು.

ಈ ವೇಳೆ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ನೀರನ್ನು ಹೊರಬಿಡಲಾಗಿದೆ. ಡ್ಯಾಂ ನಿಂದ ನೀರು ಹೊರ ಬಿಡುವ ವೇಳೆ ಸೈರನ್ ಮೊಳಗುತ್ತದೆ. ಆದರೆ ಸೈರನ್ ಶಬ್ದವನ್ನು ವಿದ್ಯಾರ್ಥಿಗಳು ಕೇಳಿಸಿಕೊಂಡಿರಲಿಲ್ಲ ಎಂದು ಹೇಳಲಾಗಿದೆ.
ನೀರಿನ ರಭಸ ಹಾಗೂ ಏಕಾಏಕಿ ನೀರಿನ ಮಟ್ಟ ಏರಿಕೆಯಾಗುವುದನ್ನು ಕಂಡ 11 ಮಂದಿ ವಿದ್ಯಾರ್ಥಿಗಳ ಪೈಕಿ 6 ಮಂದಿ ವಿದ್ಯಾರ್ಥಿಗಳು ಈಜಿ ದಡ ಸೇರಿದ್ದಾರೆ. ಉಳಿದ 5 ವಿದ್ಯಾರ್ಥಿಗಳು ಈಜಲು ಸಾಧ್ಯವಾಗದೇ ನದಿಯ ನಡುವೆ ಇರುವ ದೊಡ್ಡ ಬಂಡೆಕಲ್ಲನ್ನು ಹತ್ತಿದ್ದಾರೆ.

ನದಿಯ ಇನ್ನೊಂದು ಬದಿಯಲ್ಲಿದ್ದ ವಿದ್ಯಾರ್ಥಿಗಳು ಸಹಾಯಕ್ಕಾಗಿ ಬೊಬ್ಬೆ ಹಾಕಿ ಕಿರುಚಾಡಿದ್ದಾರೆ. ಮಕ್ಕಳ ಕಿರಿಚಾಟ ಕೇಳಿದ ತಕ್ಷಣ ಇಲ್ಲಿನ ಸ್ಥಳೀಯ ಯುವಕರ ತಂಡ ಸಹಾಯಕ್ಕೆ ಧಾವಿಸಿದೆ. ಯುವಕರ ತಂಡ ನದಿಗೆ ಧುಮುಕಿ ಹಗ್ಗದ ಮೂಲಕ ಅಪಾಯದಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications