50 ಕೋಟಿ ಲಂಚ ಪಡೆದ ಕೈ ಸಚಿವರ ಹೆಸರು ತಿಳಿಸಿ: ಪೂಜಾರಿ
ಎತ್ತಿನಹೊಳೆ ಯೋಜನೆಯಲ್ಲಿ ಕಾಂಗ್ರೆಸ್ ಸಚಿವರ ವಿರುದ್ಧ ಲಂಚದ ಆರೋಪ ಕೇಳಿಬರುತ್ತಿದೆ. ಅದರ ಬಗ್ಗೆ ಪೂರ್ತಿ ವಿವರ ನೀಡಿ ಎಂದು ಮಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ ಬಿ.ಜನಾರ್ದನ ಪೂಜಾರಿ ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ
ಮಂಗಳೂರು, ನವೆಂಬರ್ 29: ನಗರದಲ್ಲಿ ಮಂಗಳವಾರ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಬಿ.ಜನಾರ್ದನ ಪೂಜಾರಿ, ರಾಜ್ಯದ ಮೂವರು ಮಂತ್ರಿಗಳ ಮೇಲೆ ಎತ್ತಿನಹೊಳೆ ಯೋಜನೆಯಲ್ಲಿ 50 ಕೋಟಿ ರುಪಾಯಿ ಲಂಚ ಸ್ವೀಕರಿಸಿದ ಆರೋಪ ಕೇಳಿಬರುತ್ತಿದೆ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಮೂವರು ಸಚಿವರು 50 ಕೋಟಿ ರುಪಾಯಿ ಲಂಚ ತೆಗೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದರೂ ಸಿದ್ದರಾಮಯ್ಯ ಅವರು ಗುಪ್ತಚರ ಇಲಾಖೆಯಿಂದ ಯಾವುದೇ ಮಾಹಿತಿ ಸಂಗ್ರಹಿಸಿಲ್ಲ. ಈ ಲಂಚಕೋರರ ಹೆಸರನ್ನು ಬಹಿರಂಗವಾಗಿ ತಿಳಿಸಬೇಕು. ಒಂದು ವೇಳೆ ಮುಖ್ಯಮಂತ್ರಿಗಳು ಹೆಸರು ತಿಳಿಸಲು ವಿಫಲರಾದಲ್ಲಿ ಅವರೂ ಹಣದಲಿ ಪಾಲುದಾರರು ಎಂಬ ಶಂಕೆ ಮೂಡುತ್ತದೆ ಎಂದರು.['ದಿನೇಶ್ ಅಮಿನ್ ಮಟ್ಟುವಿನಿಂದಲೇ ಸಿಎಂ ಸಿದ್ದರಾಮಯ್ಯ ಸಮಾಧಿ']

ಎತ್ತಿನಹೊಳೆ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಥಾನದಲ್ಲಿರುವ ಸಚಿವರನ್ನು ತಕ್ಷಣವೇ ವಜಾಗೊಳಿಸಬೇಕು. ಅಷ್ಟೇ ಅಲ್ಲ, ಮುಖ್ಯಮಂತ್ರಿಗಳೇನಾದರೂ ನೈತಿಕತೆ ಮತ್ತು ಸ್ವಲ್ಪ ಗೌರವ ಹೊಂದಿದ್ದರೆ ತಕ್ಷಣವೇ ಆರೋಪಿ ಸಚಿವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸೋಮವಾರ ನಡೆದ ಆಕ್ರೋಶ ದಿನಾಚರಣೆಗೆ ನಗರದಾದ್ಯಂತ ನೀರಸ ಪ್ರತಿಕ್ರಿಯೆ ಬಂದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, 'ಜನರು ಮುಖ್ಯಮಂತ್ರಿ ಅವರ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಈ ಕಾರಣದಿಂದಲೇ ನಿನ್ನೆ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸಿದ್ದರಾಮಯ್ಯ ಅವರು ಪೂರ್ಣ ಪ್ರಮಾಣದಲ್ಲಿ ಬೆಂಬಲ ನೀಡಲಿಲ್ಲ ಎಂದು ಆರೋಪಿಸಿದರು.[ಸಿದ್ದರಾಮಯ್ಯ ರಾಜೀನಾಮೆ ನೀಡ್ಲಿ, ಪರಂ ಸಿಎಂ ಆಗಲಿ: ಪೂಜಾರಿ]
ಸಚಿವ ತನ್ವೀರ್ ಸೇಠ್ ಅಶ್ಲೀಲ ವೀಡಿಯೊ ವೀಕ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರ ಪದಚ್ಯುತಿಗೊಳಿಸಲು ಧೈರ್ಯವಿಲ್ಲ ಎಂದು ಟೀಕಿಸಿದರು.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ












Click it and Unblock the Notifications