ನಿಟ್ಟಡೆ ಗ್ರಾಮದಲ್ಲಿ ಜೀವದ ಹಂಗು ತೊರೆದು ಗೆಳೆಯನನ್ನು ರಕ್ಷಿಸಿದ ಬಾಲಕ
ಬೆಳ್ತಂಗಡಿ ಜೂನ್ 22: ನೀರು ಪಾಲಾಗುವ ವೇಳೆ ತನ್ನ ಗೆಳೆಯನನ್ನು ಪುಟ್ಟ ಬಾಲಕನೊಬ್ಬ ಜೀವದ ಹಂಗು ತೊರೆದು ರಕ್ಷಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ನಿಟ್ಟಡೆ ಗ್ರಾಮದ ಫಂಡಿಜೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಆದಿತ್ಯ ಹಾಗೂ ಆತನ ಗೆಳೆಯ ಅದೇ ಶಾಲೆಯ 5ನೇ ತರಗತಿಯ ಸುಜಯ ನಿನ್ನೆ ಸಂಜೆ ಶಾಲೆಯಿಂದ ಮನೆಗೆ ಮರಳುತ್ತಿದ್ದರು.
ದಂಬೆ ಎಂಬಲ್ಲಿ ತೊರೆಯೊಂದು ಹರಿಯುತ್ತಿದ್ದು, ಇದನ್ನು ದಾಟಿ ಹೋಗಲು ನಿರ್ಮಿಸಿರುವ ಅಡಿಕೆ ಮರದ ಕಾಲು ಸೇತುವೆ ಬಳಿ ಸುಜಯ್ ನ ಹಿಂದೆ ಬರುತ್ತಿದ್ದ ಆದಿತ್ಯನ ಕಾಲು ಆಕಸ್ಮಾತ್ ಜಾರಿದೆ. ತಕ್ಷಣ ಇದನ್ನು ಗಮನಿಸಿದ ಸುಜಯ ಆತನನ್ನು ರಕ್ಷಿಸಲು ಯತ್ನಿಸಿದ್ದಾನೆ.

ಆದಿತ್ಯನ ಒಂದು ಕಾಲನ್ನು ಸುಜಯ ಹಿಡಿದುಕೊಂಡು ಮೇಲೆತ್ತಲು ಯತ್ನಿಸಿದ್ದಾನೆ . ಈ ಹಂತದಲ್ಲಿ ಆದಿತ್ಯನ ಇಡೀ ಶರೀರ ಸಂಕದ ಕೆಳಗೆ ನೇತಾಡತೊಡಗಿತ್ತು. ಶಾಲೆಯ ಬ್ಯಾಗ್ , ಕೊಡೆಯೊಂದಿಗೆ ಆದಿತ್ಯನನ್ನು ಮೇಲೆತ್ತೆಲು ಸುಜಯಗೆ ಆಗಲಿಲ್ಲ. ಆದರೆ ಆ ಕ್ಷಣ ಗೆಳೆಯನನ್ನು ಬದುಕಿಸಲು ರಕ್ಷಣೆಗಾಗಿ ಬೊಬ್ಬೆ ಹೊಡೆದಿದ್ದಾನೆ.
ಬಾಲಕರ ಬೊಬ್ಬೆ ಕೇಳಿ ಕೂಡಲೇ ಅಣತಿ ದೂರದ ಮನೆಯ ಜಯಾನಂದ ಸಾಠೆ ಹಾಗೂ ಆದಿತ್ಯನ ತಂದೆ ರತ್ನಾಕರ ಹೆಬ್ಬಾರ್ ಹಾಗೂ ಇತರರು ತಕ್ಷಣ ಸ್ಥಳಕ್ಕೆ ಬಂದು ಆದಿತ್ಯನನ್ನು ಮೇಲೆತ್ತಿದ್ದಾರೆ.
ಸುಮಾರು ನಾಲ್ಕೈದು ನಿಮಿಷಗಳ ಕಾಲ ಸುಜಯ ಆದಿತ್ಯನನ್ನು ಹಿಡಿದುಕೊಂಡಿದ್ದು ಮಿತ್ರನ ರಕ್ಷಣೆ ಮಾಡಿದ್ದಾನೆ. ಸುಜಯನ ಸಮಯ ಪ್ರಜ್ಞೆಯಿಂದಾಗಿ ಆದಿತ್ಯನ ಪ್ರಾಣ ಉಳಿಯುವಂತಾಗಿದೆ. ಬಾಲಕನ ಸಾಹಸಕ್ಕೆ ಎಲ್ಲೆಡೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications