Get Updates
Get notified of breaking news, exclusive insights, and must-see stories!

ಮಂಗಳೂರು ಬೋಟ್ ದುರಂತ: ಮೃತರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ

ಮಂಗಳೂರು, ಡಿಸೆಂಬರ್ 2: ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ನಡೆದ ಬೋಟ್ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಗಳಿಗೆ ತಲಾ ಆರು ಲಕ್ಷ ರೂ. ಪರಿಹಾರವನ್ನು ಗುರುವಾರ ಸಂಜೆಯೊಳಗೆ ವಿತರಿಸಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಬೋಟ್ ದುರಂತದಲ್ಲಿ ಮೃತಪಟ್ಟ ನಾಲ್ಕು ಜನರ ಮೃತದೇಹವನ್ನು ಇರಿಸಲಾಗಿದ್ದ ಮಂಗಳೂರು ನಗರದ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿ ನಂತರ ಮಾತನಾಡಿದ ಸಚಿವ ಶ್ರೀನಿವಾಸ ಪೂಜಾರಿ, ಇದು ಅತ್ಯಂತ ನೋವಿನ ಸಂಗತಿ. ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೆ ಎಂದರು.

ಮುಖ್ಯಮಂತ್ರಿಗಳು ತುರ್ತು ಕಾರ್ಯಾಚರಣೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚಿನೆ ನೀಡಿದ್ದಾರೆ. ಈ ಘಟನೆ ನಡೆಯಲು ಏನು ಕಾರಣ ಎಂದು ಮೀನುಗಾರಿಕೆ ಇಲಾಖೆ ನಿರ್ದೇಶಕರಿಂದ ವರದಿಯನ್ನು ತರಿಸಿಕೊಳ್ಳಲಾಗಿತ್ತಿದೆ ಎಂದು ತಿಳಿಸಿದರು.

Mangaluru: 6 Lakhs Per Family Of Dead Fishermen Relief: Minister Srinivas Poojary

ಕೋಸ್ಟ್ ಗಾರ್ಡ್​ನವರು ಕಾರ್ಯಾಚರಣೆಯಲ್ಲಿ ನೇರವಾಗಿ ಪಾಲ್ಗೊಂಡಿಲ್ಲ ಎಂಬ ಅರೋಪದ ಬಗ್ಗೆ ಉತ್ತರಿಸಿದ ಸಚಿವ ಶ್ರೀನಿವಾಸ ಪೂಜಾರಿ, ಈ ಬಗ್ಗೆ ಅನಗತ್ಯ ಚರ್ಚೆ ಮಾಡಲು ಹೋಗಲ್ಲ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

Mangaluru: 6 Lakhs Per Family Of Dead Fishermen Relief: Minister Srinivas Poojary

ಇದೇ ವೇಳೆ ಕೋಸ್ಟ್ ಗಾರ್ಡ್ ಸಿಬ್ಬಂದಿ ನೇರವಾಗಿ ಮೀನುಗಾರರ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ಹಾಗೂ ಸರ್ಕಾರ ಮೃತ ಕುಟುಂಬಕ್ಕೆ ಸಾಂತ್ವನ ಹೇಳದಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಸುತ್ತುವರಿದು ಸ್ಥಳೀಯ ಮೀನುಗಾರರು ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆಯಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+