ಖೋಟಾ ನೋಟು ಸಾಗಾಟ: ಆರೋಪಿಗೆ 5 ವರ್ಷ ಜೈಲೇ ಗತಿ
ಮಂಗಳೂರು, ಜನವರಿ. 25 : 2012ರಲ್ಲಿ ನಡೆದ ಖೋಟಾ ನೋಟು ಪ್ರಕರಣದ ಆರೋಪಿಯೊಬ್ಬನಿಗೆ ಮಂಗಳೂರಿನ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ 5 ವರ್ಷಗಳ ಜೈಲು ಶಿಕ್ಷೆ ಸಹಿತ 50 ಸಾವಿರ ರೂ. ದಂಡ ವಿಧಿಸಿ ಮಂಗಳವಾರ ಆದೇಶ ಹೊರಡಿಸಿದೆ.
ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುಳ ಗ್ರಾಮದ ಅರಿಪುಕಟ್ಟ ನಿವಾಸಿ ಅಬ್ದುಲ್ ಖಾದರ್ (62) ಶಿಕ್ಷೆಗೊಳಗಾದ ಆರೋಪಿ. ಒಂದು ವೇಳೆ ಆರೋಪಿಯು ದಂಡ ತೆರಲು ತಪ್ಪಿದ್ದಲ್ಲಿ 6 ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕೆಂದು ಜಿಲ್ಲಾ ಸತ್ರ ನ್ಯಾಯಾಧೀಶ ಕೆ.ಎಸ್. ಬಿಳಗಿ ತೀರ್ಪಿನಲ್ಲಿ ಹೇಳಿದ್ದಾರೆ.[ಮಂಗ್ಳೂರಿನ ಮಾನಸ ರಿಕ್ರಿಯೇಷನ್ ಕ್ಲಬ್ ಮೇಲೆ ದಾಳಿ 14 ಮಂದಿ ಬಂಧನ]

2012 ಫೆಬ್ರವರಿ 6ರಂದು ಮುಂಜಾನೆ ನಗರದ ರೈಲ್ವೆ ಸ್ಟೇಷನ್ ನಿಂದ ಆರೋಪಿ ಖಾದರ್ ಪ್ಲಾಸ್ಟಿಕ್ ಚೀಲದಲ್ಲಿ ಖೋಟಾ ನೋಟುಗಳನ್ನು ಸಾಗಿಸುತ್ತಿದ್ದ.
ಆ ವೇಳೆ ಕರ್ತವ್ಯದಲ್ಲಿದ್ದ ಉತ್ತರ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಗಳಾದ ಮೋಹನ್ ಕೆ. ವಿ. ಹಾಗೂ ಅಶೋಕ್ ಅವರು ಅನುಮಾನದ ಆಧಾರದ ಮೇಲೆ ಖಾದರ್ ನನ್ನು ಬಂಧಿಸಿದ್ದರು.
ಆ ಸಂದರ್ಭದಲ್ಲಿ ನೋಟಿನ ಚೀಲವನ್ನು ಬಿಟ್ಟು ಪರಾರಿಯಾಗಲು ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬೆನ್ನತ್ತಿ ಹಿಡಿದು ಪರಿಶೀಲಿಸಿದಾಗ 100 ರುಪಾಯಿ ನೋಟುಗಳ ಕಂತೆಗಳು ಪತ್ತೆಯಾಗಿವೆ.
ಅಂದಿನ ಪಿಎಸ್ಐ ನಾರಾಯಣ ಮತ್ತಷ್ಟು ವಿಚಾರಣೆ ನಡೆಸಿದಾಗ ಚೇರ್ಕಳದ ಸಿ. ಎಚ್. ಅಮ್ಮು ಹಣ ಪೂರೈಸಿದ್ದು, ಕಮಿಷನ್ ಆಸೆಯಿಂದ ಹಣ ಸಾಗಾಟ ಮಾಡುವುದಾಗಿ ಹೇಳಿದ್ದಾನೆ.
ತದನಂತರ ಆರೋಪಿ ಅಬ್ದುಲ್ ಖಾದರ್ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಆದರೆ, ಇದೀಗ ಖೋಟಾ ನೋಟುಗಳ ದೃಢೀಕರಣದ ಹಿನ್ನಲೆಯಲ್ಲಿ ಆರೋಪಿಗೆ ಸತ್ರ ನ್ಯಾಯಾಲಯ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications