ಬಜ್ಪೆ ವಿಮಾನ ದುರಂತಕ್ಕೆ, ಆ ಕಹಿ ನೆನಪಿಗೆ 6 ವರ್ಷ
ಮಂಗಳೂರು, ಮೇ 22 : ಮಂಗಳೂರು ವಿಮಾನ ದುರಂತ ನಡೆದು ಮೇ 22ಕ್ಕೆ, ಆ ದುರಂತದ ಕಹಿ ನೆನಪಿಗೆ ಆರು ವರ್ಷ. ಅಂದು ದುಬೈನಿಂದ ಮಂಗಳೂರಿಗೆ ಬಂದಿಳಿದಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ 812 ಬಜ್ಪೆ ನಿಲ್ದಾಣ ಸ್ಪರ್ಶಿಸುತ್ತಿದ್ದಂತೆ 158 ಮಂದಿಯನ್ನು ಬಲಿತೆಗೆದುಕೊಂಡು ಬಿಟ್ಟಿತ್ತು.
ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ, 6 ಜನ ಸಿಬ್ಬಂದಿ ಸೇರಿದಂತೆ 166 ಮಂದಿಯನ್ನು ಹೊತ್ತು ತಂದಿದ್ದ ವಿಮಾನ ಬಜ್ಪೆ ವಿಮಾನ ನಿಲ್ದಾಣದಲ್ಲಿ ರನ್ ವೇಯನ್ನು ಜಿಗಿದು ಹತ್ತಿರದಲ್ಲಿದ್ದ ಗುಡ್ಡಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿತ್ತು. ಈ ದುರಂತದಲ್ಲಿ 8 ಜನ ಬದುಕುಳಿದಿದ್ದರು.
2010ರ ಮೇ 22ರ ಮುಂಜಾನೆ 6.05ಕ್ಕೆ ಸಂಭವಿಸಿದ ವಿಮಾನ ದುರಂತದಲ್ಲಿ ಮಡಿದ 158 ಮಂದಿಯಲ್ಲಿ 12 ಮಂದಿಯ ಗುರುತನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಈ ಸಂದರ್ಭದಲ್ಲಿ ಮೃತದೇಹಗಳನ್ನು ತಣ್ಣೀರು ಬಾವಿ ಸಮುದ್ರ ಕಿನಾರೆಯ ಸಮೀಪ ಜಿಲ್ಲಾಡಳಿತದ ವತಿಯಿಂದ ಸರಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ಮಾಡಲಾಗಿತ್ತು. [ಮಂಗಳೂರು ದುರಂತ : ನಿದ್ದೆ ಮಾಡುತ್ತಿದ್ದ ಪೈಲೆಟ್]

ಆದರೆ ಮಡಿದ ಕುಟುಂಬಗಳಿಗೆ ದುರ್ಘಟನೆ ಬಳಿಕ ಏರ್ ಇಂಡಿಯಾ ನೀಡಬೇಕಾದ ಪರಿಹಾರ ಧನ ಎರಡು ವರ್ಷದೊಳಗೆ ನೀಡುವ ಧಾವಂತದಲ್ಲಿತ್ತು. ದುಃಖದ ನಡುವೆ ಬಂದ ಪರಿಹಾರ ಸ್ವೀಕರಿಸಿ ತೆಪ್ಪಗಿದ್ದವರು ಕೆಲವರಾದರೆ, ಇನ್ನು ಕೆಲ ಕುಟುಂಬಗಳು ನಿಜವಾದ ಸಾಂತ್ವನ ನೀಡುವುದಾದರೆ ನ್ಯಾಯಯುತ ಪರಿಹಾರ ನೀಡಬೇಕೆಂದು ಹೋರಾಟಕ್ಕಿಳಿದಿದ್ದರು. [ಮದುವೆಗೆಂದು ಬಂದು ಮಸಣ ಸೇರಿದರು]
ಪರಿಹಾರ ಧನವನ್ನು ವಿಮಾನಯಾನ ಸಂಸ್ಥೆ ಕೊಂಚ ಹೆಚ್ಚಳ ಮಾಡಿತು. ಇದೀಗ ಮಂಗಳೂರು ಹಾಗೂ ಒಬ್ಬರು ಕೇರಳದವರನ್ನು ಹೊರತುಪಡಿಸಿ ಎಲ್ಲರಿಗೂ ಪರಿಹಾರದ ಹಣ ತಲುಪಿದೆ. ಆದರೆ ಇಬ್ಬರು ಮಾತ್ರ ಏರ್ ಇಂಡಿಯಾದ ನಡೆ ವಿರೋಧಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಸಮುದಾಯ ಭವನದ ಕನಸು ಕನಸಾಗಿಯೆ ಉಳಿದಿದೆ
ಆ ದುರಂತದ ಕಹಿ ಘಟನೆ ನೆನಪಿಸುವ ಜಾಗದಲ್ಲೇ, ಅಂದರೆ ಮಳವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲೇ, ಸಮುದಾಯ ಭವನ ನಿರ್ಮಿಸುವುದಾಗಿ ಏರ್ ಇಂಡಿಯಾ ವಾದ್ಗಾನ ನೀಡಿತ್ತು. ಆದರೆ ಸಮುದಾಯ ಭವನದ ಕನಸು ಇನ್ನೂ ಕನಸಾಗಿಯೆ ಉಳಿದಿದೆ. [ಮಂಗಳೂರು ವಿಮಾನ ದುರಂತದಲ್ಲಿ ಮಡಿದವರಿಗೆ ಸ್ಮಾರಕ]
ಈ ಕುರಿತಂತೆ ಗ್ರಾಮ ಪಂಚಾಯತ್ ಸಹ ಶೇ.10ರಷ್ಟು ಅನುದಾನ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಆದಾದ ಬಳಿಕ ಮತ್ತೆ ಏರ್ ಇಂಡಿಯಾ ಈ ಬಗ್ಗೆ ದಿವ್ಯ ಮೌನವಹಿಸಿದೆ. ಪರಿಹಾರ ನೀಡದವರೂ, ಸ್ಮಾರಕ ಕಟ್ಟದವರು ಇನ್ನಾದರೂ ಈ ಬಗ್ಗೆ ಕ್ರಮತೆಗೆದುಕೊಳ್ಳುತ್ತಾರಾ ಅಂತ ಕಾದು ನೋಡಬೇಕು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications