ಕೊರೊನಾ ಸೋಂಕಿಗೆ 7 ತಿಂಗಳ ಗರ್ಭಿಣಿ ಪೊಲೀಸ್ ಅಧಿಕಾರಿ ಸಾವು
ಮಂಗಳವಾರ, ಮೇ 18: 7 ತಿಂಗಳ ಗರ್ಭಿಣಿಯಾಗಿದ್ದ ಕೋಲಾರ ಮೂಲದ ಮಹಿಳಾ ಪೊಲೀಸ್ ಅಧಿಕಾರಿ ಶಾಮಿಲಿ (24 ವರ್ಷ) ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 2021ರ ಜನವರಿ 11ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಗೆ ಶಾಮಿಲಿ ಸೇರ್ಪಡೆಯಾಗಿದ್ದರು. ಗರ್ಭಿಣಿಯಾಗಿರುವ ಹಿನ್ನಲೆಯಲ್ಲಿ ರಜೆಯ ಮೇಲೆ ತನ್ನ ಸ್ವಂತ ಊರಾದ ಕೋಲಾರಕ್ಕೆ ತೆರಳಿದ್ದರು.
ಆದರೆ, ಊರಿನಲ್ಲಿ ಕೊರೊನಾ ಸೋಂಕು ವಕ್ಕರಿಸಿಕೊಂಡ ಹಿನ್ನಲೆಯಲ್ಲಿ ಮೇ 2 ರಂದು ಕೋಲಾರದ ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಂಗಳವಾರ ಮುಂಜಾನೆ 4.30ರ ವೇಳೆ ಶಾಮಿಲಿ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.

ಗರ್ಭಿಣಿಯಾಗಿದ್ದ ಹಿನ್ನೆಲೆಯಲ್ಲಿ ಶಾಮಿಲಿಯವರು ಕೊರೊನಾ ಲಸಿಕೆಯನ್ನು ಪಡೆದಿರಲಿಲ್ಲ. ಶಾಮಿಲಿಯವರ ಆರೋಗ್ಯ ಸ್ಥಿತಿಯನ್ನು ಸ್ವತಃ ಕೋಲಾರ ಎಸ್ಪಿಯವರೇ ಗಮನಿಸುತ್ತಿದ್ದರೂ, ದುರಾದೃಷ್ಟವಶಾತ್ ಸಾವನ್ನಪ್ಪಿದ್ದಾರೆ.
Youngest member of the police family to succumb to Covid. 24 year old, PSI Shamili of Kolar, attached to DK district lost her battle with COVID.
— DGP KARNATAKA (@DgpKarnataka) May 18, 2021
May her soul rest in peace.
But it could be any of us. Please cooperate with police, stay home and stay safe. pic.twitter.com/s7ecNSdZ67
ಶಾಮಿಲಿ ಅವರ ಸಾವಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಉನ್ನತ ಅಧಿಕಾರಿಗಳು, ದ.ಕ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನೆವಾನೆ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

Recommended Video
ಕೋವಿಡ್ ಸೋಂಕಿಗೆ ಬಲಿಯಾದ ಪೊಲೀಸ್ ಕುಟುಂಬದ ಕಿರಿಯ ಸದಸ್ಯ, 24 ವರ್ಷದ ಪಿಎಸ್ಐ ಶಾಮಿಲಿ ಅವರು ಕೋವಿಡ್ ವಿರುದ್ಧದ ಹೋರಾಟದಲ್ಲಿ ಸಾವನ್ನಪ್ಪಿದ್ದಾರೆ. ಅವಳ ಆತ್ಮಕ್ಕೆ ಶಾಂತಿ ಸಿಗಲಿ. ಆದರೆ, ನಮ್ಮಲ್ಲಿ ಯಾರಾದರೂ ಆಗಿರಬಹುದು, ದಯವಿಟ್ಟು ಪೊಲೀಸರೊಂದಿಗೆ ಸಹಕರಿಸಿ, ಮನೆಯಲ್ಲೇ ಇರಿ ಮತ್ತು ಸುರಕ್ಷಿತವಾಗಿರಿ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದಾರೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications