ಮಂಗಳೂರಿನಲ್ಲಿ ಅಪರಾಧ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಗ್ಯಾಂಗ್ ನ 8 ಜನರ ಬಂಧನ

ಮಂಗಳೂರು ಆಗಸ್ಟ್ 17: ಕೇಂದ್ರೀಯ ತನಿಖಾ ಸಂಸ್ಥೆಯ ನೇಮ್ ಬೋರ್ಡ್ ಅಳವಡಿಸಿರುವ ಕಾರನ್ನು ಬಳಸಿಕೊಂಡು ದೊಡ್ಡ ಮಟ್ಟದ ಅಪರಾಧ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ 8 ಮಂದಿ ಆರೋಪಿಗಳನ್ನು ಮಂಗಳೂರು ಪೋಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸ್ಯಾಮ್ ಪೀಟರ್, ಟಿ.ಕೆ ಬೋಪಣ್ಣ, ಮದನ್, ಚಿನ್ನಪ್ಪ, ಸುನೀಲ್ ರಾಜು, ಕೋದಂಡರಾಮ, ಜಿ.ಮೊಯದ್ದೀನ್, ಎಸ್ ಎ ಕೆ ಲತೀಫ್ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳಿಂದ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಿಸ್ತೂಲು, ಸಜೀವ ಗುಂಡುಗಳು ಸೇರಿದಂತೆ ಕೃತ್ಯಕ್ಕೆ ಬಳಸಲು ತಂದಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಮಂಗಳೂರು ಪೊಲೀಸ್ ಕಮಿಷನರ್ ಡಾ ಹರ್ಷ, "ಬಂಧಿತ 8 ಮಂದಿ ಯಾವ ಉದ್ದೇಶಕ್ಕಾಗಿ ಮಂಗಳೂರಿಗೆ ಬಂದಿದ್ದರು ಎನ್ನುವ ಕುರಿತು ತನಿಖೆ ನಡೆಸಲಾಗುತ್ತಿದೆ" ಎಂದರು.

8 Arrested For Suspicious Behaviour In Mangaluru

ಸ್ವಾತಂತ್ರ್ಯೋತ್ಸವದ ಬಂದೋಬಸ್ತ್ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭ, ಪಂಪ್ ವೆಲ್ ಬಳಿಯಿರುವ ಲಾಡ್ಜ್ ಒಂದರಲ್ಲಿ ಅನುಮಾನಾಸ್ಪದ‌ ವ್ಯಕ್ತಿಗಳು ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದಾಗ 8 ಆರೋಪಿಗಳು ಅಪರಾಧ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಆರೋಪಿಗಳು ಕೇಂದ್ರೀಯ ತನಿಖಾ ಸಂಸ್ಥೆಯ ನೇಮ್ ಬೋರ್ಡ್ ಅಳವಡಿಸಿರುವ ಕಾರಿನಲ್ಲಿ ಬಂದಿರುವುದು ಪತ್ತೆಯಾಗಿದೆ.

8 Arrested For Suspicious Behaviour In Mangaluru

ಈ ತಂಡ ಪ್ರಭಾವಿ ವ್ಯಕ್ತಿಗಳನ್ನು ಬೆದರಿಸಿ ಹಣ ವಸೂಲಿ ಮಾಡುವ ದಂಧೆಯಲ್ಲಿ ನಿರತರಾಗಿರುವುದು ತನಿಖೆಯಿಂದ ತಿಳಿದುಬಂದಿದ್ದು, ಬಂಧಿತರಲ್ಲಿ ಪ್ರಮುಖ ಆರೋಪಿಯಾಗಿರುವ ಕೇರಳ ಮೂಲದ ಸ್ಯಾಮ್ ಪೀಟರ್ ಎಂಬಾತ ಪಶ್ಚಿಮ ಬಂಗಾಳ, ಭುವನೇಶ್ವರ ಮೊದಲಾದ ಕಡೆಯಲ್ಲೂ ಸಂಪರ್ಕ ಹೊಂದಿದ್ದಾನೆ ಎನ್ನಲಾಗಿದೆ. ಈತ ಸ್ಥಳೀಯರ ಸಂಪರ್ಕದ ಮೂಲಕ ಮಂಗಳೂರಿಗೆ ಬಂದಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+