ಆಳ ಸಮುದ್ರದಲ್ಲಿ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಮೀನುಗಾರರು
ಮಂಗಳೂರು ಡಿಸೆಂಬರ್ 11 : ಮಂಗಳೂರಿನಿಂದ ಆಳ ಸಮುದ್ರಕ್ಕೆ ಹೋದ ಮೀನುಗಾರಿಕಾ ಬೋಟ್ ಮುಳುಗಡೆಯಾದ ಘಟನೆ ಬೆಳಕಿಗೆ ಬಂದಿದೆ. ಮಂಗಳೂರಿನಿಂದ ಮಂದರ್ ಇಂಡಿಯಾ ಹೆಸರಿನ ಮೀನುಗಾರಿಕಾ ದೋಣಿ 4 ದಿನಗಳ ಹಿಂದೆ ಆಳ ಸಮುದ್ರ ಮೀನುಗಾರಿಕೆಗೆ ಹೋಗಿತ್ತು. ಕಿನಾರೆಯಿಂದ 32 ನಾಟಿಕಲ್ ಮೈಲ್ಸ್ ದೂರದಲ್ಲಿ ಈ ದೋಣಿ ಮುಳುಗಡೆಯಾಗಿದೆ.
ಆಳ ಸಮುದ್ರದಲ್ಲಿ ಅಪಾಯದಲ್ಲಿದ್ದ 15 ಮೀನುಗಾರರನ್ನು ರಕ್ಷಿಸಿದ ಭಾರತೀಯ ತಟರಕ್ಷಣಾ ಪಡೆ
ಮೀನುಗಾರಿಕೆ ಮುಗಿಸಿ ಮಂಗಳೂರು ಮೀನುಗಾರಿಕಾ ಬಂದರ್ ಗೆ ಹಿಂದಿರುಗುತ್ತಿದ್ದ ವೇಳೆ ತಾಂತ್ರಿಕ ದೋಷಕ್ಕೆ ಬೋಟ್ ಸಿಲುಕಿತ್ತು. ಈ ಸಂದರ್ಭದಲ್ಲಿ 8 ಮಂದಿ ಮೀನುಗಾರರು ಅಪಾಯಕ್ಕೆ ಸಿಲುಕಿದ್ದರು.
ತಾಂತ್ರಿಕ ದೋಷದಿಂದ ಸಮುದ್ರದಲ್ಲಿ ಮುಳುಗಿದ ಬೋಟ್ ಹಾಗೂ ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ಮೀನುಗಾರಿಕೆಗೆ ತೆರಳಿದ್ದ ಮತ್ತೊಂದು ಬೋಟ್ ನ ಮೀನುಗಾರರು ರಕ್ಷಿಸಿದ್ದಾರೆ. ರಕ್ಷಣೆಗೆ ಒಳಗಾದ ಎಲ್ಲಾ ಮೀನುಗಾರರು ಸುರಕ್ಷಿತವಾಗಿ ದಡ ತಲುಪಿದ್ದಾರೆ.
Comments
fishing boat mangaluru district news fisherman sea rescue ಸಮುದ್ರ ಮೀನುಗಾರರು ರಕ್ಷಣೆ ಮಂಗಳೂರು ಜಿಲ್ಲಾಸುದ್ದಿ
English summary
Fishing boat from Mangaluru drowned in sea incident occurred. But 8 fisherman rescued by other fishing boats.
Story first published: Tuesday, December 11, 2018, 11:41 [IST]