ಅಪಘಾತಕ್ಕೀಡಾದ ಟ್ರಾಲ್ ಬೋಟ್ ನಲ್ಲಿದ್ದ 9 ಮೀನುಗಾರರ ರಕ್ಷಣೆ
ಮಂಗಳೂರು, ಆಗಸ್ಟ್ 30: ಮೀನುಗಾರಿಕೆಗೆ ತೆರಳಿದ್ದ ಟ್ರಾಲ್ ಬೋಟ್ ಒಂದು ಅಪಘಾತಕ್ಕೀಡಾಗಿ ಅಪಾಯದಲ್ಲಿದ್ದ 9 ಮೀನುಗಾರರನ್ನು ರಕ್ಷಣೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
Recommended Video

ಮಂಗಳೂರಿನ ಅಳಿವೆ ಬಾಗಿಲಿನಲ್ಲಿ ಮಂಗಳವಾರ ಈ ದುರ್ಘಟನೆ ನಡೆದಿದೆ. ಪದ್ಮನಾಭ ಎಂಬುವರಿಗೆ ಸೇರಿದ ಸಿ ಮಾಸ್ಟರ್ ಟ್ರಾಲ್ ಬೋಟ್ ಮಂಗಳವಾರ ಮೀನುಗಾರಿಕೆಗೆ ತೆರಳಿತ್ತು. ಮೀನುಗಾರಿಕೆ ಮುಗಿಸಿ ದಡಕ್ಕೆ ಮರಳುತ್ತಿದ್ದ ಸಂದರ್ಭದಲ್ಲಿ ಬೋಟ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಸಮುದ್ರ ಮಧ್ಯೆ ಕೆಟ್ಟು ನಿಂತಿತ್ತು .

ಈ ಹಿನ್ನೆಲೆಯಲ್ಲಿ ಮತ್ತೊಂದು ಮೀನುಗಾರಿಕಾ ದೋಣಿಗೆ ಕೆಟ್ಟು ನಿಂತ ಮೀನುಗಾರಿಕಾ ಬೋಟನ್ನು ಹಗ್ಗದಿಂದ ಬಿಗಿದು ದಡಕ್ಕೆ ಎಳೆ ತರುವ ಪ್ರಯತ್ನ ಮಾಡಲಾಯಿತು. ಈ ಸಂದರ್ಭದಲ್ಲಿ ಬೋಟ್ ನ ಪ್ರೊಫೆಲ್ಲರ್ ಫ್ಯಾನ್ ಗೆ ಹಗ್ಗ ಸುತ್ತಿಕೊಂಡ ಪರಿಣಾಮ ಹಗ್ಗ ತುಂಡಾಗಿತ್ತು.
ಹೀಗಾಗಿ ನಿಯಂತ್ರಣ ಕಳೆದುಕೊಂಡ ಮೀನುಗಾರಿಕಾ ಟ್ರಾಲ್ ಬೋಟ್ ಮರಳು ದಿಣ್ಣೆಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಮೀನುಗಾರಿಕಾ ದೋಣಿ ಮುಳುಗಲು ಆರಂಭಿಸಿದೆ. ಈ ಸಂದರ್ಭದಲ್ಲಿ ಅಪಾಯದಲ್ಲಿದ್ದ 9 ಮಂದಿ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ .
ಘಟನೆ ಕುರಿತು ಮಾಹಿತಿ ಪಡೆದ ಪಣಂಬೂರು ಪೊಲೀಸ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ . ಅಪಘಾತಕ್ಕೀಡಾದ ಟ್ರಾಲ್ ಬೋಟ್ ಮುಳುಗಿದ ಹಿನ್ನೆಲೆಯಲ್ಲಿ 63 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications