ಗ್ಯಾಸ್ ಸೋರಿಕೆ, ಮಂಗ್ಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ
ಮಂಗಳೂರು, ನವೆಂಬರ್, 18: ತಪಾಸಣೆಗೆ ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್ ನಲ್ಲಿ ಗ್ಯಾಸ್ ಸೋರಿಕೆಯಾದ ಕಾರಣ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತಗೊಂಡ ಘಟನೆ ಹೊಸಂಗಡಿ ವಾಮಂಜೂರು ಚೆಕ್ ಪೋಸ್ಟ್ ಬಳಿ ಬುಧವಾರ ನಡೆದಿದೆ.
ಟೋಟಲ್ ಗ್ರಾಸ್ ಏಜೆನ್ಸಿಯ ಟ್ಯಾಂಕರ್ ಇದಾಗಿದ್ದು ಮಂಗಳೂರಿನಿಂದ ತಿರೂರಿಗೆ ಗ್ಯಾಸ್ ಕೊಂಡೊಯ್ಯಲಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಉಪ್ಪಳದಿಂದ ತಲುಪಿದ ಅಗ್ನಿ ಶಾಮಕ ದಳ ಸೋರಿಕೆಯನ್ನು ಸರಿ ಪಡಿಸಿದರು.
ಗ್ಯಾಸ್ ಸೋರಿಕೆ ಸುದ್ದಿಯಾಗುತ್ತಿದ್ದಂತೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಯಿತು. ವಿಷಯ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಕುಂಬಳೆ ಸಿ.ಐ ಸುರೇಶ್ ಬಾಬು , ಮಂಜೇಶ್ವರ ಎಸ್.ಐ ಪ್ರಮೋದ್ ನೇತೃತ್ವದ ಪೋಲೀಸ್ ತಂಡ ಸಂಚಾರವನ್ನು ಸುಗಮಗೊಳಿಸಿದರು.[ಉತ್ತರ ಕನ್ನಡ: ಗ್ಯಾಸ್ ಟ್ಯಾಂಕರ್ ಸ್ಫೋಟ]

ಪೋಷಕರ ಬುದ್ದಿಮಾತಿಗೆ ಬೇಸತ್ತು ಮನೆತೊರೆದ ತೀರ್ಥಹಳ್ಳಿ ಯುವಕ
ಕಾರ್ಕಳ, ನವೆಂಬರ್, 18 : ಕಲಿಕೆಗೆ ಹೆಚ್ಚಿನ ಒತ್ತು ನೀಡುವಂತೆ ಮನೆ ಮಂದಿ ಹೇಳಿದ ಬುದ್ದಿ ಮಾತಿಗೆ ಬೆಲೆಕೊಡದ ಬಾಲಕನೊಬ್ಬ ಮನೆತೊರೆದು ಸಂಬಂಧಿಕರ ಮನೆಗೆ ಬಂದು ಉಳಿದುಕೊಂಡಿದ್ದಾನೆ. ಈತ ತೀರ್ಥಹಳ್ಳಿಯ ಕಮ್ಮರಡಿಯಿಂದ ಸೈಕಲ್ ಮೂಲಕ 75 ಕಿ.ಮೀ ಕ್ರಮಿಸಿ ಕಾರ್ಕಳ ಬಜಗೋಳಿಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದಾನೆ.
ಯುವರಾಜ್ (14) ಎಂಬಾತ ಮನೆ ತೊರೆದ ಬಾಲಕ. ಈತ ವಿಶ್ವತೀರ್ಥ ಶಾಲೆಯಲ್ಲಿ 8ನೇ ತರಗತಿ ಕಲಿಯುತ್ತಿದ್ದನು. ಕಲಿಕೆಯಲ್ಲಿ ತೀರಾ ಹಿಂದೆ ಉಳಿದಿದ್ದ ಆತನಿಗೆ ಮನೆ ಮಂದಿ ಬುದ್ದಿ ಹೇಳುತ್ತಿದ್ದರು. ಬುದ್ದಿವಾದವನ್ನೇ ಕಿರಿಕಿರಿ ಎಂದುಕೊಂಡ ಆತ ಸೋಮವಾರ ನಸುಕಿನ ಜಾವದಲ್ಲಿ ಸೈಕಲ್ ಏರಿ ಅಲ್ಲಿಂದ ನಾಪತ್ತೆಯಾಗಿದ್ದನು.[ಹೆತ್ತವರ ಪ್ರೀತಿ ಕಳೆದುಕೊಂಡು ನಲುಗುತ್ತಿರುವ ಮಕ್ಕಳು]
ಯುವಕ ಏಕಾಏಕಿ ಕಾಣೆಯಾಗಿದ್ದರಿಂದ ಹೆದರಿದ ಮನೆಮಂದಿ ಕಾರ್ಕಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಆತನ ಚಹರೆ ಬಗ್ಗೆ ಮಾಹಿತಿ ಒದಗಿಸಿದ್ದರು. ಅಷ್ಟರಲ್ಲೇ ಯುವರಾಜ್ ಶಿವಮೊಗ್ಗದ ಸಂಬಂಧಿಕರೊಬ್ಬರಿಗೆ ಕಾರ್ಕಳದಲ್ಲಿ ಇರುವ ಬಗ್ಗೆ ಸಂಜೆ ನಾಲ್ಕರ ವೇಳೆಗೆ ಕರೆ ಮಾಡಿ ವಿಷಯವನ್ನು ತಿಳಿಸಿದ್ದಾನೆ. ಇದರಿಂದ ಮನೆಮಂದಿ ಇದೀಗ ತಾನೇ ನಿಟ್ಟಿರುಸಿರು ಬಿಡುವಂತಾಗಿದೆ
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications