ಮಂಗಳೂರು: ಆಸ್ಪತ್ರೆಯಲ್ಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ, ಕಾಮುಕನ ಜೊತೆ ಸಹಕರಿಸಿದ ಮಹಿಳೆಯೂ ಬಂಧನ
ಮಂಗಳೂರು, ಆಗಸ್ಟ್, 18: ಮಂಗಳೂರು ನಗರದ ಪಂಪ್ವೆಲ್ ಬಳಿಯಿರುವ ಖಾಸಗಿ ಆಸ್ಪತ್ರೆಯಲ್ಲಿಯೇ ಕಾಮುಕನೋರ್ವನು ವಿಶೇಷ ಚೇತನೆ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಇನ್ನು ಈ ಹೇಯ ಕೃತ್ಯವನ್ನು ಎಸಗಿದ ಆರೋಪಿ ಹಾಗೂ ಆತನಿಗೆ ಸಹಕರಿಸಿದ ಮಹಿಳೆಯನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಮನ್ಸೂರ್ ಅಹ್ಮದ್ ಬಾಬಾ ಶೇಖ್ ಹಾಗೂ ಬಿಹಾರ ಮೂಲದ ಸದ್ಯ ಮುಂಬೈ ವಾಸಿ ಅಬ್ದುಲ್ ಹಲೀಂ ಆಗಸ್ಟ್ 10ರಂದು ಬೈಕ್ನಲ್ಲಿ ಕಾಸರಗೋಡಿಗೆ ಹೋಗಿ ಬರುತ್ತಿದ್ದ ವೇಳೆ ಮಂಜೇಶ್ವರ ಹೊಸಂಗಡಿ ಬಳಿ ಬೈಕ್ ಅಪಘಾತಗೊಂಡಿದೆ. ಆಗ ಇಬ್ಬರೂ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳು ತಮ್ಮನನ್ನು ನೋಡಲು ಮನ್ಸೂರ್ ಅಹ್ಮದ್ ಸಹೋದರಿ ತನ್ನ ವಿಶೇಷ ಚೇತನೆ ಅಪ್ರಾಪ್ತ ಪುತ್ರಿ ಹಾಗೂ ಮನ್ಸೂರ್ ಪತ್ನಿ ಶಮೀನಾ ಬಾನುವಿನೊಂದಿಗೆ ಬಂದಿದ್ದರು.

ಬಳಿಕ ಆಕೆ ತನ್ನ ಪುತ್ರಿ ಹಾಗೂ ಶಮೀನಾ ಬಾನುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಹೊರಗಡೆ ಹೋಗಿದ್ದರು. ಈ ವೇಳೆ ಆರೋಪಿ ಅಬ್ದುಲ್ ಹಲೀಂ ಗಾಯಾಳು ಮನ್ಸೂರ್ ಪತ್ನಿ ಶಮೀನಾ ಬಾನುವಿನೊಂದಿಗೆ ಆಸ್ಪತ್ರೆಯೊಳಗಡೆಯೇ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಇದನ್ನು ವಿಶೇಷ ಚೇತನೆ ಅಪ್ರಾಪ್ತೆ ನೋಡಿದ್ದಾಳೆ.
ಇದನ್ನು ಗಮನಿಸಿದ ಶಮೀನಾ ಬಾಲಕಿಯನ್ನು ಬೆಡ್ ಮೇಲೆ ಕುಳ್ಳಿರಿಸಿದ್ದಾಳೆ. ಆಗ ಆರೋಪಿ ಆಕೆಯ ಮೇಲೂ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಇದಕ್ಕೆ ಪ್ರತಿರೋಧ ಒಡ್ಡಿದಾಗ ಶಮೀನಾ ಬಾನು ಅತ್ಯಾಚಾರ ಎಸಗಲು ಸಹಕರಿಸಿದ್ದಾಳೆ ಎಂದು ತಿಳಿದುಬಂದಿದೆ.
ವಿಚಾರ ತಿಳಿದು ಮಂಗಳೂರು ಮಹಿಳಾ ಠಾಣೆಗೆ ಸಂತ್ರಸ್ತ ಬಾಲಕಿ ತಾಯಿ ದೂರು ನೀಡಿದ್ದಾರೆ. ಅದರಂತೆಯೇ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂಬೈಗೆ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿ ಅಬ್ದುಲ್ ಹಲೀಂನನ್ನು ಬಂಧಿಸಿದ್ದಾರೆ. ಜೊತೆಗೆ ಕೃತ್ಯಕ್ಕೆ ಸಹಕರಿಸಿರುವ ಶಮೀನಾ ಬಾನುವನ್ನು ಬಂಧಿಸಿದ್ದಾರೆ. ಇನ್ನು ಇಬ್ಬರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಈ ವೇಳೆ ಇವರಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications